ಬ್ರೇಕಿಂಗ್ ನ್ಯೂಸ್
04-09-21 04:41 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.4 : ವಿದ್ಯುತ್ ಬಿಲ್ನಲ್ಲಿ ಉದ್ದೇಶಪೂರ್ವಕ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡುತ್ತಿದ್ದ ಮೂವರು ಸಿಬ್ಬಂದಿಯನ್ನು ಇಂಧನ ಸಚಿವ ಸುನಿಲ್ ಕುಮಾರ್ ಸೇವೆಯಿಂದ ಅಮಾನತು ಮಾಡಿದ್ದಾರೆ.
ಮುಳಬಾಗಿಲು ಉಪ ವಿಭಾಗದ ಕಿರಿಯ ಸಹಾಯಕ ಮೆಹಬೂಬ್ ಪಾಷ, ಕಿರಿಯ ಸಹಾಯಕಿಯರಾದ ಗಾಯತ್ರಮ್ಮ ಹಾಗೂ ಸುಜಾತಮ್ಮ ಎಂಬವರೇ ಅಮಾನತುಗೊಂಡ ಸಿಬ್ಬಂದಿ. ಪ್ರತಿ ತಿಂಗಳು ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆ ಕೆಲವು ಬಿಲ್ಗಳಲ್ಲಿ ತಿದ್ದುಪಡಿ ಮಾಡುವ ಮೂಲಕ ಬಿಲ್ ಮೊತ್ತವನ್ನು ಉದ್ದೇಶಪೂರ್ವಕ ಕಡಿಮೆ ಮಾಡಿದ್ದರು. ಆ ಮೂಲಕ ಬೆಸ್ಕಾಂಗೆ ಬರಬೇಕಾದ ಆದಾಯದಲ್ಲಿ ನಷ್ಟ ಉಂಟು ಮಾಡುತ್ತಿದ್ದರು.

ಇವರು ಬೇರೆ, ಬೇರೆ ಐಪಿ ವಿಳಾಸ ಹೊಂದಿರುವ ಗಣಕ ಯಂತ್ರಗಳಲ್ಲಿ ತಮ್ಮ ಐಡಿ ಉಪಯೋಗಿಸಿ ವಂಚನೆ ಎಸಗಿದ್ದರು. ಇದಲ್ಲದೆ, 8 ಆರ್ ಆರ್ ಸಂಖ್ಯೆಗಳಲ್ಲಿ ಒಟ್ಟು 4,44,966 ರೂ.ಗಳಷ್ಟು ಮೊತ್ತ ನಷ್ಟವಾಗಿತ್ತು. ಅದರಿಂದ ಇವರ ಮೇಲೆ ಇಲಾಖಾ ವಿಚಾರಣೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ. ಈ ಬಗ್ಗೆ ಕೋಲಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ತಾವು ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ, ಅಕ್ರಮ ಎಸಗಿ ಆ ಮೂಲಕ ಇಲಾಖೆಗೆ ನಷ್ಟವುಂಟು ಮಾಡುವ ಯಾವುದೇ ಅಧಿಕಾರಿ, ಸಿಬ್ಬಂದಿ ಇರಲಿ ಅವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.
Bangalore Current Minister suspends three employees of Bescom for fraudental activities
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm