ಬ್ರೇಕಿಂಗ್ ನ್ಯೂಸ್
04-09-21 05:48 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.4:ಇತ್ತೀಚಿನ ದಿನಗಳಲ್ಲಿ ವಿವಾದಕ್ಕೆ ಒಳಗಾಗುತ್ತಿರುವ ಸಂಚಾರ ಪೊಲೀಸರ ಟೋಯಿಂಗ್ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ವಾಹನ ಟೋಯಿಂಗ್ ಮಾಡುವಾಗ ನಿಯಮಗಳನ್ನು ಸರಿಯಾಗಿ ಪಾಲಿಸುವಂತೆ ಸೂಚಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಪಾರ್ಕಿಂಗ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನಗಳ ಟೋಯಿಂಗ್ ಮಾಡುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ವಾಹನ ಸವಾರರಿಗೆ ಮುನ್ನೆಚ್ಚರಿಕೆ ನೀಡದೆ ಟೋಯಿಂಗ್ ಮಾಡಲಾಗುತ್ತಿದೆ. ಮಾಲೀಕರು ಅಲ್ಲಿಯೇ ಇದ್ದರೂ, ಮನವಿ ಮಾಡಿದರೂ ವಾಹನವನ್ನು ಬಿಡುತ್ತಿಲ್ಲ. ಅಲ್ಲದೆ, ವಾಹನವನ್ನು ಟೋಯಿಂಗ್ ಮಾಡುವಾಗ ಅದಕ್ಕೆ ಹಾನಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಅಲ್ಲದೆ, ವಾಹನ ಮಾಲೀಕರು ಹಾಗೂ ಟೋಯಿಂಗ್ ಸಿಬ್ಬಂದಿ ನಡುವೆ ವಾಗ್ವಾದ, ಸಂಘರ್ಷ ನಡೆದ ಅನೇಕ ಘಟನೆಗಳು ನಡೆದಿವೆ.

ಇನ್ನು ಮುಂದೆ ಟ್ರಾಫಿಕ್ ಪೊಲೀಸರು ವಾಹನ ಟೋಯಿಂಗ್ ಮಾಡುವ ಸಂದರ್ಭದಲ್ಲಿ ವಾಹನ ಮಾಲೀಕರು ಸ್ಥಳದಲ್ಲಿದ್ದರೆ ಅವರಿಂದ 'ನೋ ಪಾರ್ಕಿಂಗ್' ಶುಲ್ಕವನ್ನು ಮಾತ್ರ ವಸೂಲಿ ಮಾಡಬೇಕು ಹಾಗೂ ವಾಹನವನ್ನು ಅವರಿಗೆ ಅಲ್ಲಿಯೇ ಹಿಂದಿರುಗಿಸಬೇಕು ಎಂದು ಗೃಹ ಸಚಿವರು ಸೂಚನೆ ನೀಡಿದ್ದಾರೆ.
ಟೋಯಿಂಗ್ ಕ್ರಮದ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಎಚ್ಚರಿಗೆ ವಹಿಸಬೇಕು. ಟೋಯಿಂಗ್ ಸಿಬ್ಬಂದಿ ಸಾರ್ವಜನಿಕರ ಜತೆ ಸೌಜನ್ಯದಿಂದ ವರ್ತಿಸಬೇಕು. ವಾಹನಕ್ಕೆ ಹಾನಿ ಮಾಡಬಾರದು. ಜಾಗರೂಕತೆಯಿಂದ ಟೋಯಿಂಗ್ ಮಾಡಬೇಕು ಎಂದು ಅವರು ತಾಕೀತು ಮಾಡಿದ್ದಾರೆ.
ಟೋಯಿಂಗ್ ಮಾಡುವ ಮುನ್ನ ಅವರು ನೋ ಪಾರ್ಕಿಂಗ್ನಲ್ಲಿ ನಿಲ್ಲಿಸಿರುವುದನ್ನು ವಾಹನ ಮಾಲೀಕರ ಗಮನಕ್ಕೆ ತರಬೇಕು. ವಾಹನ ಮಾಲೀಕರ ಗಮನ ಸೆಳೆಯಲು ಸೈರನ್ ಅಥವಾ ಹಾರ್ನ್ ಮಾಡಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮತ್ತು ಹೆಚ್ಚುವರಿ ಆಯುಕ್ತ (ಸಂಚಾರ) ರವಿಕಾಂತೇಗೌಡ ಅವರೊಂದಿಗೆ ನಡೆದ ಸಭೆಯಲ್ಲಿ ಆರಗ ಜ್ಞಾನೇಂದ್ರ ಸೂಚಿಸಿದ್ದಾರೆ.
Follow towing rules dont harass public Home minister Arag Jnanendra to Bengaluru traffic police
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm