ಬ್ರೇಕಿಂಗ್ ನ್ಯೂಸ್
04-09-21 05:48 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.4:ಇತ್ತೀಚಿನ ದಿನಗಳಲ್ಲಿ ವಿವಾದಕ್ಕೆ ಒಳಗಾಗುತ್ತಿರುವ ಸಂಚಾರ ಪೊಲೀಸರ ಟೋಯಿಂಗ್ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ವಾಹನ ಟೋಯಿಂಗ್ ಮಾಡುವಾಗ ನಿಯಮಗಳನ್ನು ಸರಿಯಾಗಿ ಪಾಲಿಸುವಂತೆ ಸೂಚಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಪಾರ್ಕಿಂಗ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನಗಳ ಟೋಯಿಂಗ್ ಮಾಡುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ವಾಹನ ಸವಾರರಿಗೆ ಮುನ್ನೆಚ್ಚರಿಕೆ ನೀಡದೆ ಟೋಯಿಂಗ್ ಮಾಡಲಾಗುತ್ತಿದೆ. ಮಾಲೀಕರು ಅಲ್ಲಿಯೇ ಇದ್ದರೂ, ಮನವಿ ಮಾಡಿದರೂ ವಾಹನವನ್ನು ಬಿಡುತ್ತಿಲ್ಲ. ಅಲ್ಲದೆ, ವಾಹನವನ್ನು ಟೋಯಿಂಗ್ ಮಾಡುವಾಗ ಅದಕ್ಕೆ ಹಾನಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಅಲ್ಲದೆ, ವಾಹನ ಮಾಲೀಕರು ಹಾಗೂ ಟೋಯಿಂಗ್ ಸಿಬ್ಬಂದಿ ನಡುವೆ ವಾಗ್ವಾದ, ಸಂಘರ್ಷ ನಡೆದ ಅನೇಕ ಘಟನೆಗಳು ನಡೆದಿವೆ.

ಇನ್ನು ಮುಂದೆ ಟ್ರಾಫಿಕ್ ಪೊಲೀಸರು ವಾಹನ ಟೋಯಿಂಗ್ ಮಾಡುವ ಸಂದರ್ಭದಲ್ಲಿ ವಾಹನ ಮಾಲೀಕರು ಸ್ಥಳದಲ್ಲಿದ್ದರೆ ಅವರಿಂದ 'ನೋ ಪಾರ್ಕಿಂಗ್' ಶುಲ್ಕವನ್ನು ಮಾತ್ರ ವಸೂಲಿ ಮಾಡಬೇಕು ಹಾಗೂ ವಾಹನವನ್ನು ಅವರಿಗೆ ಅಲ್ಲಿಯೇ ಹಿಂದಿರುಗಿಸಬೇಕು ಎಂದು ಗೃಹ ಸಚಿವರು ಸೂಚನೆ ನೀಡಿದ್ದಾರೆ.
ಟೋಯಿಂಗ್ ಕ್ರಮದ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಎಚ್ಚರಿಗೆ ವಹಿಸಬೇಕು. ಟೋಯಿಂಗ್ ಸಿಬ್ಬಂದಿ ಸಾರ್ವಜನಿಕರ ಜತೆ ಸೌಜನ್ಯದಿಂದ ವರ್ತಿಸಬೇಕು. ವಾಹನಕ್ಕೆ ಹಾನಿ ಮಾಡಬಾರದು. ಜಾಗರೂಕತೆಯಿಂದ ಟೋಯಿಂಗ್ ಮಾಡಬೇಕು ಎಂದು ಅವರು ತಾಕೀತು ಮಾಡಿದ್ದಾರೆ.
ಟೋಯಿಂಗ್ ಮಾಡುವ ಮುನ್ನ ಅವರು ನೋ ಪಾರ್ಕಿಂಗ್ನಲ್ಲಿ ನಿಲ್ಲಿಸಿರುವುದನ್ನು ವಾಹನ ಮಾಲೀಕರ ಗಮನಕ್ಕೆ ತರಬೇಕು. ವಾಹನ ಮಾಲೀಕರ ಗಮನ ಸೆಳೆಯಲು ಸೈರನ್ ಅಥವಾ ಹಾರ್ನ್ ಮಾಡಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮತ್ತು ಹೆಚ್ಚುವರಿ ಆಯುಕ್ತ (ಸಂಚಾರ) ರವಿಕಾಂತೇಗೌಡ ಅವರೊಂದಿಗೆ ನಡೆದ ಸಭೆಯಲ್ಲಿ ಆರಗ ಜ್ಞಾನೇಂದ್ರ ಸೂಚಿಸಿದ್ದಾರೆ.
Follow towing rules dont harass public Home minister Arag Jnanendra to Bengaluru traffic police
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 04:29 pm
HK News Staffer
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm