ಬ್ರೇಕಿಂಗ್ ನ್ಯೂಸ್
05-09-21 09:35 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.5 : ರಾಜ್ಯದಾದ್ಯಂತ ಐದು ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತಿನ ಅನುಮತಿ ನೀಡಲಾಗಿದೆ. ಆದರೆ ಗಣೇಶನ ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ವಿಧಿಸುವ ಷರತ್ತುಗಳನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ʼಗರಿಷ್ಠ ಐದು ದಿನಗಳ ವರೆಗೆ ಮಾತ್ರ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗುವುದು. ನಗರ ಪ್ರದೇಶಗಳಲ್ಲಿ ವಾರ್ಡ್ಗೆ ಒಂದು ಹಾಗೂ ಹಳ್ಳಿಗಳಲ್ಲಿ ಸ್ಥಳೀಯ ಆಡಳಿತದ ತೀರ್ಮಾನದಂತೆ ಸಾರ್ವಜನಿಕ ಗಣೇಶೋತ್ಸವ ನಡೆಸಬಹುದು ಎಂದರು.
ಮಹಾನಗರಗಳಲ್ಲಿ ಪ್ರತಿ ವಾರ್ಡ್ಗೆ ಒಂದು ಸ್ಥಳದಲ್ಲಿ ಮಾತ್ರ ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಅವಕಾಶ ದೊರೆಯಲಿದೆ. ಪೊಲೀಸರು ಕಾರ್ಯಕ್ರಮ ಸಂಘಟಕರ ಜತೆ ಚರ್ಚಿಸಿ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.

ಡಿಜೆ ಮತ್ತು ಕಾರ್ಯಕ್ರಮಕ್ಕೆ ಧ್ವನಿವರ್ಧಕ ಬಳಕೆಗೆ ಅನುಮತಿ ಇರುವುದಿಲ್ಲ. ಗಣೇಶ ವಿಗ್ರಹಗಳ ವಿಸರ್ಜನೆಗೆ ಮೆರವಣಿಗೆ ನಡೆಸುವಂತಿಲ್ಲ. ನಿಗದಿತ ಸಂಖ್ಯೆಯ ಜನರು ಮಾತ್ರ ಗಣೇಶ ವಿಗ್ರಹ ವಿಸರ್ಜನೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗುವುದು. ಶಾಲೆ, ಕಾಲೇಜುಗಳಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶವಿಲ್ಲ ಎಂದು ತಿಳಿಸಿದರು. ಪೆಂಡಾಲ್ನಲ್ಲಿ 20 ಜನರು ಮಾತ್ರ ಪಾಲ್ಗೊಳ್ಳಲು ಅವಕಾಶವಿದೆ. ಸಾರ್ವಜನಿಕರು ಮತ್ತು ವಾಹನಗಳ ಸಂಚಾರಕ್ಕೆ ಅಡ್ಡಿಯಾಗುವಂತೆ ಗಣೇಶೋತ್ಸವ ಆಚರಣೆ ಮಾಡುವಂತಿಲ್ಲ ಎಂದು ವಿವರಿಸಿದರು.
ಉತ್ಸವದಲ್ಲಿ ಪಾಲ್ಗೊಳ್ಳಲು ಲಸಿಕೆ ಕಡ್ಡಾಯ

ಸಾರ್ವಜನಿಕ ಗಣೇಶೋತ್ಸವದಲ್ಲಿ ಪಾಲ್ಗೊಳ್ಳುವವರು ಕೋವಿಡ್ ಲಸಿಕೆ ಹಾಕಿಸಿಕೊಂಡಿರುವುದು ಕಡ್ಡಾಯ. ಕಾರ್ಯಕ್ರಮ ಸಂಘಟಕರು ಕೋವಿಡ್ ಪರೀಕ್ಷೆಯನ್ನೂ ಮಾಡಿಸಿರಬೇಕು ಎಂದು ಸಚಿವ ಅಶೋಕ್ ಹೇಳಿದರು. ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ದೃಢಪ್ರಮಾಣ ದರ ಶೇಕಡ 2ಕ್ಕಿಂತ ಕಡಿಮೆಯಾದರೆ ಮಾತ್ರ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲು ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
The Karnataka government on Sunday allowed partial celebration of the upcoming ganesh utsav in the state, with Covid-19 norms and conditions in place. While no immersion or visarjan of the idol will be allowed post 9pm, pandals have been given an okay.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm