ಬ್ರೇಕಿಂಗ್ ನ್ಯೂಸ್
06-09-21 11:00 am Headline Karnataka News Network ಕರ್ನಾಟಕ
ಬೆಂಗಳೂರು, ಸೆ. 6: ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲೆಗಳಿಗೆ ಸುಮಾರು ಐದು ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಘೋಷಣೆ ಮಾಡಿದ್ದಾರೆ.
ಸದ್ಯ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿದ್ದು, ಈ ಸಮಸ್ಯೆ ನೀಗಿಸಲು ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ.
ಕಳೆದ ಎರಡು ವರ್ಷಗಳಿಂದ ಸರ್ಕಾರಿ ಶಾಲೆಗಳಲ್ಲಿ ಆಗಿರುವ ಮಕ್ಕಳ ದಾಖಲಾತಿ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಆದ್ಯತೆಯಲ್ಲಿ ಶಿಕ್ಷಕರ ನೇಮಕಾತಿಯನ್ನು ಪರಿಗಣನೆಗೆ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದರು.
'ಶಿಕ್ಷಣ ಸಚಿವರ ಮನವಿ ಮೇರೆಗೆ ಸರ್ಕಾರವು ಸುಮಾರು ಐದು ಸಾವಿರ ಶಿಕ್ಷಕರನ್ನು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ನೇಮಿಸಿಕೊಳ್ಳಲು ತೀರ್ಮಾನಿಸಿದೆ' ಎಂದು ಹೇಳಿದ್ದಾರೆ.
ಪ್ರಸಕ್ತ ವರ್ಷದಲ್ಲಿಯೇ 5 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ @BSBommai ರವರು ತಿಳಿಸಿದ್ದಾರೆ.#TeachersDay2021
— CM of Karnataka (@CMofKarnataka) September 5, 2021
ರಾಷ್ಟ್ರೀಯ ಶಿಕ್ಷಣ ನೀತಿ (NEP)ಯನ್ನು ಸ್ವಾತಂತ್ರ್ಯೋತ್ತರ ಭಾರತದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಆಗುತ್ತಿರುವ ಅತ್ಯುತ್ತಮ ಸಂಗತಿ ಎಂದು ಶ್ಲಾಘಿಸಿದ ಬೊಮ್ಮಾಯಿ, ಶಿಕ್ಷಕರು ಹೊಸ ಶಿಕ್ಷಣ ನೀತಿಯನ್ನು ಅಧ್ಯಯನ ಮಾಡಬೇಕು ಹಾಗೂ ತಮ್ಮ ಸಲಹೆಗಳನ್ನು ನೀಡಬೇಕು ಎಂದು ಸೂಚಿಸಿದರು.
'ನಾನು ಶೈಕ್ಷಣಿಕ ನೀತಿಗಳನ್ನು ಅಧ್ಯಯನ ಮಾಡಿದ್ದೇನೆ. ಸ್ವಾತಂತ್ರ್ಯಾನಂತರ ವಿದ್ಯಾರ್ಥಿಗಳಿಗೆ ನಾವು ನೀಡುತ್ತಿರುವ ಅತ್ಯುತ್ತಮ ಕೊಡುಗೆಯಿದು. ಇಂಥ ನೀತಿಗಳನ್ನು ಅನುಷ್ಠಾನಗೊಳಿಸುವಾಗ, ಧನಾತ್ಮಕ ಪ್ರತಿಕ್ರಿಯೆಗಳು ಹಾಗೂ ಆಕ್ಷೇಪಣೆಗಳು ಸಹಜ. ನೀತಿಯನ್ನು ಅಧ್ಯಯನ ಮಾಡಲು ಹಾಗೂ ಅವರ ಸಲಹೆಯನ್ನು ಸಲ್ಲಿಸಲು ನಾನು ಶಿಕ್ಷಕರನ್ನು ವಿನಂತಿಸುತ್ತೇನೆ. ಈ ನೀತಿಯನ್ನು ಪ್ರಾಥಮಿಕ ಹಾಗೂ ಮಧ್ಯಮ ಮಟ್ಟದಲ್ಲಿ ಕಾರ್ಯಗತಗೊಳಿಸಲು ಸಿದ್ಧರಿದ್ದೇವೆ' ಎಂದು ಬೊಮ್ಮಾಯಿ ಹೇಳಿದರು.

2021-22ರ ಶೈಕ್ಷಣಿಕ ವರ್ಷದಲ್ಲಿ 31 ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು ಮತ್ತು ಹತ್ತು ಪಿಯು ಉಪನ್ಯಾಸಕರಿಗೆ ರಾಜ್ಯ ಮಟ್ಟದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ತಿಳಿಸಿದರು.
ರಾಷ್ಟ್ರಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ನಾಗರಾಜ್ ಸಿಎಂ (ಸರ್ಕಾರಿ ಶಾಲೆ, ದೊಡ್ಡಬನಹಳ್ಳಿ, ಬೆಂಗಳೂರು ದಕ್ಷಿಣ) ಹೇಮಾ ಅಂಗಡಿ (ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೆಳಗಾವಿ) ಹಾಗೂ ಪರಮೇಶ್ವರಯ್ಯ ಎಂ (ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಲಾಲವಿ ಬಳ್ಳಾರಿ) ಅವರನ್ನು ಗೌರವಿಸಲಾಯಿತು.
Karnataka Chief Minister Basavaraj Bommai on Sunday announced that 5,000 teachers will be appointed in the state in the current year. On the occasion of Teacher's Day, Bommai was addressing the Best Teachers Awards programme at Banquet Hall in Vidhana Soudha.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm