ಬ್ರೇಕಿಂಗ್ ನ್ಯೂಸ್
09-09-21 04:27 pm Headline Karnataka News Network ಕರ್ನಾಟಕ
ತಿರುವನಂತಪುರಂ, ಸೆ.9 : ಕೊರೊನಾ ಸೋಂಕು ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾಗ ಯಶಸ್ವಿಯಾಗಿ ನಿರ್ವಹಿಸಿ ಗಮನ ಸೆಳೆದಿದ್ದ ಕೇರಳ ಸರ್ಕಾರ ಎರಡನೇ ಅಲೆಯಲ್ಲಿ ಎಡವಟ್ಟು ಮಾಡಿಕೊಂಡು ಟೀಕೆಗೆ ಗುರಿಯಾಗಿದೆ. ರಾಜ್ಯದಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚು ಸೋಂಕು ಕಂಡುಬರುತ್ತಿದ್ದು ನಿಯಂತ್ರಣ ಮಾಡಲಾಗದೆ ಇಕ್ಕಟ್ಟಿಗೆ ಬಿದ್ದಿದೆ.
ರಾಜ್ಯದಲ್ಲಿ ಪ್ರತಿದಿನ 30 ಸಾವಿರ ಪ್ರಕರಣ ದಾಖಲಾಗುತ್ತಿದ್ದು, ಪಾಸಿಟಿವ್ ದರ ಶೇ.15ಕ್ಕಿಂತ ಹೆಚ್ಚಿದ್ದರೂ ರಾಜ್ಯಾದ್ಯಂತ ಶಾಲೆ, ಕಾಲೇಜುಗಳನ್ನುತೆರೆಯಲು ನಿರ್ಧರಿಸಿದ್ದು ತೀವ್ರ ಟೀಕೆಗೆ ಗುರಿಯಾಗಿದೆ. ಬುಧವಾರ ಕೂಡ ಕೇರಳದಲ್ಲಿ 30,196 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 181 ಮಂದಿ ಸಾವಿಗೀಡಾಗಿದ್ದಾರೆ. ಹೀಗಿದ್ದರೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳನ್ನು ಅಕ್ಟೋಬರ್ 4 ರಿಂದ ಆರಂಭಿಸುವುದಾಗಿ ಹೇಳಿಕೊಂಡಿದೆ.


ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಪಿಣರಾಯಿ ವಿಜಯನ್, ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಅಕ್ಟೋಬರ್ 4 ರಿಂದ ಕಾಲೇಜುಗಳನ್ನು ಹಾಗೂ ವಿವಿಗಳನ್ನು ಆರಂಭಿಸುತ್ತಿದ್ದೇವೆ ಎಂದಿದ್ದಾರೆ.
ಕೇರಳದಲ್ಲಿ ಬಕ್ರೀದ್ ಹಾಗೂ ಓಣಂ ಹಬ್ಬಕ್ಕೆ ಕೋವಿಡ್ ನಿಯಮಗಳನ್ನು ಸಡಿಲಗೊಳಿಸಲಾಗಿತ್ತು. ಇದಾದ ಬಳಿಕ ಭಾರೀ ಪ್ರಮಾಣದಲ್ಲಿ ಕೋವಿಡ್ ಸೋಂಕು ಸ್ಫೋಟಗೊಂಡಿತ್ತು. ಹೀಗಾಗಿ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಇದರಿಂದ ಆರ್ಥಿಕತೆಗೆ ಭಾರೀ ಹೊಡೆತ ಬಿದ್ದಿದ್ದು, ಹೀಗಾಗಿ ಕರ್ಫ್ಯೂ ಆದೇಶವನ್ನು ರದ್ದುಗೊಳಿಸಿತ್ತು. ಇದರ ಬೆನ್ನಲ್ಲೇ ಕಾಲೇಜು ತೆರೆಯುವ ನಿರ್ಧಾರ ಪ್ರಕಟಿಸಿದೆ.
Kerala Government Decides to Reopen Colleges and Universities Despite Covid Spike.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm