ಬ್ರೇಕಿಂಗ್ ನ್ಯೂಸ್
10-09-21 10:35 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.10 : ಸಮಾಜದಲ್ಲಿ ಸಮಾನತೆಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡನ್ನು ಸೋಲಿಸಬೇಕಾಗಿದೆ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಅಧಿಕಾರಕ್ಕೋಸ್ಕರ ಕಾಂಗ್ರೆಸ್ ಪಕ್ಷವು ಏನು ಬೇಕಾದರೂ ಮಾಡುತ್ತದೆ. ಆದರೆ ಬಿಜೆಪಿ ಪಕ್ಷವು ದ್ವೇಷದ ಸಿದ್ದಾಂತವನ್ನು ಹೊಂದಿದೆ. ನಾವು ಮೊದಲು ಬಿಜೆಪಿಯನ್ನು ತೊಡೆದು ಹಾಕಿದರೆ, ಕಾಂಗ್ರೆಸ್ ಅದರಿಂದ ಲಾಭ ಪಡೆದು ಇನ್ನಷ್ಟು ಬಲಗೊಳ್ಳುತ್ತದೆ. ಆದರೆ ಮೊದಲು ಕಾಂಗ್ರೆಸ್ಸನ್ನು ತೊಡೆದು ಹಾಕಿದರೆ, ಬಿಜೆಪಿಯ ಸಿದ್ದಾಂತವನ್ನು ನಮ್ಮ ಸಮಾನತೆಯ ಸಿದ್ಧಾಂತದಿಂದ ಧ್ವಂಸ ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಸದಸ್ಯರಾದ ಕೆಬಿ ಹೆಡ್ಗೆವಾರ್ ಅವರು 1925 ರಲ್ಲಿ ಆರ್ಎಸ್ಎಸ್ ಸ್ಥಾಪಿಸಿದ್ದರು. ಕಾಂಗ್ರೆಸ್ಸಿನ ಮತ್ತೊಬ್ಬ ಸದಸ್ಯರಾದ ಬಾಲ ಗಂಗಾಧರ ತಿಲಕ್ ಅವರು ಹೆಡ್ಗೆವಾರ್ ಅವರನ್ನು ಪ್ರಭಾವಿಸಿದ್ದರು. ಕಾಂಗ್ರೆಸ್ ಮತ್ತು ಆರ್ಎಸ್ಎಸ್(ಸಂಘ ಪರಿವಾರ) ಯಾವತ್ತಿನಿಂದಲೂ ಒಂದಕ್ಕೊಂದು ಬೆಸೆದುಕೊಂಡೇ ಇದೆ. ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಮತ್ತು ಆರ್ಎಸ್ಎಸ್ ಎರಡಕ್ಕೂ ಲಾಭವಾಗುತ್ತದೆ. ಸಮಾನತೆಗಾಗಿ ಕಾಂಗ್ರೆಸ್ ಮತ್ತು ಸಂಘ, ಎರಡನ್ನೂ ಸೋಲಿಸಬೇಕು ಎಂದು ಹೇಳಿದ್ದಾರೆ.
ಈ ಮುನ್ನ ಸೆ.6ರಂದು ಟ್ವೀಟ್ ಮಾಡಿದ್ದ ಚೇತನ್, ಕನಕದಾಸರು 16ನೇ ಶತಮಾನದಲ್ಲಿ ಜಾತಿ ರಹಿತ ಮತ್ತು ವರ್ಗ ರಹಿತ ಸಮಾಜದ ಕನಸು ಕಂಡವರು. ವೈಯಕ್ತಿಕ ಅಧಿಕಾರಕ್ಕಾಗಿ ಜಾತಿ ಗುರುತನ್ನು ಬಳಸುವ ಸ್ವ-ಸೇವಕ ರಾಜಕಾರಣಿಗಳು ಕನಕರನ್ನು ಹೈಜಾಕ್ ಮಾಡಲು ಬಿಡಬಾರದು. ಸಮಾನತೆ ಮತ್ತು ನ್ಯಾಯಕ್ಕಾಗಿ ಹೋರಾಡಿದ ಕನಕದಾಸರು ನಮ್ಮೆಲ್ಲರಿಗೂ ಸೇರಿದವರು ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದರು.
Actor Chetan makes controversial statement about congress and BJP.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm