ಬ್ರೇಕಿಂಗ್ ನ್ಯೂಸ್
12-09-21 10:32 pm Headline Karnataka News Network ಕರ್ನಾಟಕ
ಚಿಕ್ಕಬಳ್ಳಾಪುರ, ಸೆ 12 : ಜೀಪ್ - ಕ್ಯಾಂಟರ್ ನಡುವೆ ಡಿಕ್ಕಿ ಆಗಿ 8 ಜನರ ದುರ್ಮರಣ ಆಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮದಿನಾಯಕನಹಳ್ಳಿ ಬಳಿ ನಡೆದಿದೆ.
ಲಾರಿ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ಮಾಲೂರು ಶಾಸಕ ಕೆ.ವೈ. ನಂಜೇಗೌಡರಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವ ಕಾರ್ಯ ನಡೆದಿದೆ. ಶಾಸಕರು ರಸ್ತೆ ಮಾರ್ಗವಾಗಿ ಹೋಗುತ್ತಿದ್ದರು. ಅಪಘಾತ ಕಂಡು ರಕ್ಷಣಾ ಕಾರ್ಯ ನಡೆಸಲು ಮುಂದಾಗಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲಾರಿ ಹಾಗೂ ಜೀಪ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಬಳ್ಳಾಪುರ ಎಸ್ಪಿ ಜಿ.ಜೆ. ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ. ಅಪಘಾತ ಆದ ಜೀಪ್ನಲ್ಲಿ 14 ಪ್ರಯಾಣಿಕರು ಇದ್ದರು. ಜೀಪ್ನಲ್ಲಿ ಇದ್ದ ಇಬ್ಬರು ಮಹಿಳೆಯರು ಹಾಗೂ ನಾಲ್ವರು ಪುರುಷರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಜೀರೋ ಟ್ರಾಫಿಕ್ನಲ್ಲಿ ಕೋಲಾರಕ್ಕೆ ರವಾನೆ ಮಾಡಲಾಗಿದೆ. ಪ್ರಯಾಣಿಕರನ್ನು ಸಾಗಿಸುತ್ತಿದ್ದ ಜೀಪ್ನಲ್ಲಿ ಇಬ್ಬರು ಮಕ್ಕಳು ಕೂಡ ಇದ್ದರು ಎಂದು ತಿಳಿಸಿದ್ದಾರೆ. ಮದಿನಾಯಕನಹಳ್ಳಿ ಬಳಿ ಭೀಕರ ಅಪಘಾತ ಘಟನಾಸ್ಥಳಕ್ಕೆ ಶ್ರೀನಿವಾಸಪುರ ಕ್ಷೇತ್ರದ ಶಾಸಕ ರಮೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ತೀವ್ರತೆಗೆ ಜೀಪ್ ನಜ್ಜುಗುಜ್ಜಾಗಿದೆ.
ಮದಿನಾಯಕನಹಳ್ಳಿ ಬಳಿ ಭೀಕರ ಅಪಘಾತ ಪ್ರಕರಣದಲ್ಲಿ ಜೀಪ್ ಚಾಲಕ ರಮೇಶ್ (40), ಮುನಿರತ್ನಮ್ಮ (55), ನಾರಾಯಣಸ್ವಾಮಿ (55) ಸೇರಿದಂತೆ 8 ಜನರ ಸಾವು ಸಂಭವಿಸಿದೆ. ನಿಖಿಲ್, ವೆಂಕಟಲಕ್ಷ್ಮೀ, ಯಶೋಧಮ್ಮ, ಸತ್ಯಪ್ಪ, ಮುನಿಸ್ವಾಮಿ, ಮಂಜುನಾಥ, ಅಂಬರೀಶ್ ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Eight people die on spot after Truck Jeep accident at Chikkaballapur.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm