ಬ್ರೇಕಿಂಗ್ ನ್ಯೂಸ್
17-09-21 11:35 am Headline Karnataka News Network ಕರ್ನಾಟಕ
ಬೆಂಗಳೂರು, ಸೆ.17: ಪಿಯುಸಿ ಓದುತ್ತಿದ್ದ ಹುಡುಗನೊಬ್ಬ ಮಾನಸಿಕ ಒತ್ತಡಕ್ಕೆ ಒಳಗಾಗಿ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಇಂದು ಮುಂಜಾನೆ ನಡೆದಿದೆ.
ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತನನ್ನು ಆರ್ಮಿ ಸ್ಕೂಲ್ ವಿದ್ಯಾರ್ಥಿ 17 ವರ್ಷದ ರಾಹುಲ್ ಭಂಡಾರಿ ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 5:45ರ ಸುಮಾರಿಗೆ ಘಟನೆ ನಡೆದಿದೆ. ತಲೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಲೆಯ ಎಡಭಾಗಕ್ಕೆ ಗುಂಡು ಬಿದ್ದಿದ್ದು, ಬುಲೆಟ್ ಕೂಡ ಮೃತ ವ್ಯಕ್ತಿಯ 6 ಅಡಿ ಅಂತರದಲ್ಲಿ ಬಿದ್ದಿದೆ. ನಿವೃತ್ತ ಹವಾಲ್ದಾರ್ ಆಗಿರುವ ತಂದೆಯ ಲೈಸೆನ್ಸ್ ಇರುವ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ. ರಾಹುಲ್ ಎಸ್ಎಸ್ಎಲ್ಸಿಯಲ್ಲಿ ಶೇ.90ರಷ್ಟು ಅಂಕ ಗಳಿಸಿದ್ದ.
ಇವತ್ತಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಇತ್ತು. ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ. ಬೆಳಗ್ಗೆ 4 ಗಂಟೆಗೆ ಎದ್ದು ಓದಿಕೊಂಡಿದ್ದ. ಇದರ ನಡುವೆ ಮನೆಯಿಂದ ಹೊರಗೆ ಬಂದು ವಾಕಿಂಗ್ ಮಾಡುತ್ತಿದ್ದ. ಪರೀಕ್ಷೆಗೆ ಓದುತ್ತಿದ್ದ ಸಮಯದಲ್ಲಿ ವಿಶ್ರಾಂತಿಗಾಗಿ ವಾಕಿಂಗ್ಗೆ ಬರುತ್ತಿದ್ದ. ಆದರೆ ಬೆಳಗ್ಗೆ 6 ಗಂಟೆಯಿಂದ ಕರೆ ಮಾಡಿದರೂ ಸ್ವೀಕರಿಸಿಲ್ಲ ಎಂದು ಮನೆಯವರು ತಿಳಿಸಿದ್ದಾರೆ.




ರಾತ್ರಿ ಊಟ ಮುಗಿಸಿ ಮನೆಯಲ್ಲೇ ಮಲಗಿದ್ದ ರಾಹುಲ್, ತಂದೆ, ತಾಯಿ ಮಲಗಿರುವಾಗ ನಾಲ್ಕು ಗಂಟೆಗೆ ಮನೆಯಿಂದ ಎದ್ದು ಹೊರಬಂದಿದ್ದಾನೆ. ಮಾನಸಿಕ ಒತ್ತಡದಲ್ಲಿದ್ದ ಎನ್ನುವ ಶಂಕೆ ಇದೆ. ಪ್ರತಿದಿನ ಬೆಳಗಿನ ಜಾವ ಮೂರು ಗಂಟೆಗೆ ಎದ್ದು ಓದಿಕೊಳ್ಳುತ್ತಿದ್ದ. ಅದೇ ರೀತಿ ಇಂದು ಬೆಳಗಿನ ಜಾವ ಕೂಡ ಮನೆಯಿಂದ ಎದ್ದು ಹೊರಬಂದಿದ್ದಾನೆ.
ವಿದ್ಯಾರ್ಥಿ ರಾಹುಲ್, ಭಗತ್ ಸಿಂಗ್ ಹಾಗೂ ಬಾಬ್ನಾ ದಂಪತಿಯ ಪುತ್ರನಾಗಿದ್ದು, ಭಗತ್ ಸಿಂಗ್ ಅವರು ಸೇನೆಯ ನಿವೃತ್ತ ಹವಾಲ್ದಾರ್ ಆಗಿದ್ದಾರೆ. ಉತ್ತರಾಖಂಡ್ ಮೂಲದವರಾದ ಭಗತ್ ಸಿಂಗ್, ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಆರ್.ಟಿ.ನಗರದ ಗಂಗಾ ಬೇಕರಿ ಬಳಿ ಮನೆ ಮಾಡಿಕೊಂಡು ವಾಸವಾಗಿದ್ದಾರೆ.
2nd puc student suicide by shooting Bangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm