ಬ್ರೇಕಿಂಗ್ ನ್ಯೂಸ್
17-09-21 11:35 am Headline Karnataka News Network ಕರ್ನಾಟಕ
ಬೆಂಗಳೂರು, ಸೆ.17: ಪಿಯುಸಿ ಓದುತ್ತಿದ್ದ ಹುಡುಗನೊಬ್ಬ ಮಾನಸಿಕ ಒತ್ತಡಕ್ಕೆ ಒಳಗಾಗಿ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಇಂದು ಮುಂಜಾನೆ ನಡೆದಿದೆ.
ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತನನ್ನು ಆರ್ಮಿ ಸ್ಕೂಲ್ ವಿದ್ಯಾರ್ಥಿ 17 ವರ್ಷದ ರಾಹುಲ್ ಭಂಡಾರಿ ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 5:45ರ ಸುಮಾರಿಗೆ ಘಟನೆ ನಡೆದಿದೆ. ತಲೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಲೆಯ ಎಡಭಾಗಕ್ಕೆ ಗುಂಡು ಬಿದ್ದಿದ್ದು, ಬುಲೆಟ್ ಕೂಡ ಮೃತ ವ್ಯಕ್ತಿಯ 6 ಅಡಿ ಅಂತರದಲ್ಲಿ ಬಿದ್ದಿದೆ. ನಿವೃತ್ತ ಹವಾಲ್ದಾರ್ ಆಗಿರುವ ತಂದೆಯ ಲೈಸೆನ್ಸ್ ಇರುವ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ. ರಾಹುಲ್ ಎಸ್ಎಸ್ಎಲ್ಸಿಯಲ್ಲಿ ಶೇ.90ರಷ್ಟು ಅಂಕ ಗಳಿಸಿದ್ದ.
ಇವತ್ತಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಇತ್ತು. ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ. ಬೆಳಗ್ಗೆ 4 ಗಂಟೆಗೆ ಎದ್ದು ಓದಿಕೊಂಡಿದ್ದ. ಇದರ ನಡುವೆ ಮನೆಯಿಂದ ಹೊರಗೆ ಬಂದು ವಾಕಿಂಗ್ ಮಾಡುತ್ತಿದ್ದ. ಪರೀಕ್ಷೆಗೆ ಓದುತ್ತಿದ್ದ ಸಮಯದಲ್ಲಿ ವಿಶ್ರಾಂತಿಗಾಗಿ ವಾಕಿಂಗ್ಗೆ ಬರುತ್ತಿದ್ದ. ಆದರೆ ಬೆಳಗ್ಗೆ 6 ಗಂಟೆಯಿಂದ ಕರೆ ಮಾಡಿದರೂ ಸ್ವೀಕರಿಸಿಲ್ಲ ಎಂದು ಮನೆಯವರು ತಿಳಿಸಿದ್ದಾರೆ.




ರಾತ್ರಿ ಊಟ ಮುಗಿಸಿ ಮನೆಯಲ್ಲೇ ಮಲಗಿದ್ದ ರಾಹುಲ್, ತಂದೆ, ತಾಯಿ ಮಲಗಿರುವಾಗ ನಾಲ್ಕು ಗಂಟೆಗೆ ಮನೆಯಿಂದ ಎದ್ದು ಹೊರಬಂದಿದ್ದಾನೆ. ಮಾನಸಿಕ ಒತ್ತಡದಲ್ಲಿದ್ದ ಎನ್ನುವ ಶಂಕೆ ಇದೆ. ಪ್ರತಿದಿನ ಬೆಳಗಿನ ಜಾವ ಮೂರು ಗಂಟೆಗೆ ಎದ್ದು ಓದಿಕೊಳ್ಳುತ್ತಿದ್ದ. ಅದೇ ರೀತಿ ಇಂದು ಬೆಳಗಿನ ಜಾವ ಕೂಡ ಮನೆಯಿಂದ ಎದ್ದು ಹೊರಬಂದಿದ್ದಾನೆ.
ವಿದ್ಯಾರ್ಥಿ ರಾಹುಲ್, ಭಗತ್ ಸಿಂಗ್ ಹಾಗೂ ಬಾಬ್ನಾ ದಂಪತಿಯ ಪುತ್ರನಾಗಿದ್ದು, ಭಗತ್ ಸಿಂಗ್ ಅವರು ಸೇನೆಯ ನಿವೃತ್ತ ಹವಾಲ್ದಾರ್ ಆಗಿದ್ದಾರೆ. ಉತ್ತರಾಖಂಡ್ ಮೂಲದವರಾದ ಭಗತ್ ಸಿಂಗ್, ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಆರ್.ಟಿ.ನಗರದ ಗಂಗಾ ಬೇಕರಿ ಬಳಿ ಮನೆ ಮಾಡಿಕೊಂಡು ವಾಸವಾಗಿದ್ದಾರೆ.
2nd puc student suicide by shooting Bangalore.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm