ಬ್ರೇಕಿಂಗ್ ನ್ಯೂಸ್
22-09-21 12:19 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.22: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಜಿಲ್ಲೆಯ ಶಾಸಕ ಸಾ.ರಾ. ಮಹೇಶ್ ನಡುವಿನ ಸಮರದ ಪ್ರತಿಧ್ವನಿ ವಿಧಾನಸಭೆಯಲ್ಲಿ ಕೇಳಿಬಂತು. ಸಾರಾ ಮಹೇಶ್ ಪ್ರಶ್ನೆಗೆ ಉತ್ತರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ, ಸರ್ಕಾರದ ಅಧಿಕಾರಿಗಳು ಅಧಿಕಾರಿಗಳಾಗಿಯೇ ಕೆಲಸ ಮಾಡಬೇಕೆ ಹೊರತು ಸರ್ವಾಧಿಕಾರಿಗಳಾಗಬಾರದು. ಇದನ್ನು ಸರಕಾರ ಸಹಿಸುವುದಿಲ್ಲ ಎಂದು ಅಧಿಕಾರಿಗೆ ಎಚ್ಚರಿಕೆ ನೀಡಿದ್ದಾರೆ.
ವಿಧಾನಸಭೆಯ ಶೂನ್ಯವೇಳೆಯಲ್ಲಿ ಶಾಸಕ ಸಾ.ರಾ. ಮಹೇಶ್ ಮಂಡಿಸಿದ್ದ ಹಕ್ಕುಚ್ಯುತಿ ಪ್ರಸ್ತಾಪಕ್ಕೆ ಉತ್ತರ ನೀಡಿದ ಸಚಿವರು, ಈ ವಿಚಾರದಲ್ಲಿ ಸರ್ಕಾರ ಅಂದಿನ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ಸರಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಸದನಕ್ಕೆ ತಿಳಿಸಿದರು.

ಅಧಿಕಾರಿ ತನ್ನ ವ್ಯಾಪ್ತಿ ಮೀರಿ ವರ್ತನೆ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವುದು ಸರ್ಕಾರಕ್ಕೆ ಅನಿವಾರ್ಯವಾಗುತ್ತದೆ. ಕಾನೂನು ಉಲ್ಲಂಘನೆಯನ್ನು ಯಾರೇ ಮಾಡಿದರೂ ಅದು ತಪ್ಪಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಕೆಆರ್ ನಗರ ಶಾಸಕ ಸಾರಾ ಮಹೇಶ್, ರೋಹಿಣಿ ಸಿಂಧೂರಿ ಅವರು 30 ಲಕ್ಷಕ್ಕೆ ಈಜು ಕೊಳ ನಿರ್ಮಾಣ ಮಾಡಿರುವುದು ಮತ್ತು 15 ಲಕ್ಷಕ್ಕೆ ಕಚೇರಿ ನವೀಕರಣ ಮಾಡಿರುವ ಬಗ್ಗೆ ಸದನದಲ್ಲಿ ಫೋಟೋ ತೋರಿಸಿ ವಿಧಾನಸಭೆಯ ಗಮನಸೆಳೆದರು.
ಶಾಸಕರ ಹಕ್ಕು, ನಗರಪಾಲಿಕೆ ಹಕ್ಕು ಮತ್ತು ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಯ ಹಕ್ಕನ್ನು ಮೊಟಕು ಮಾಡಿ ಅಧಿಕಾರಿ ಸರ್ವಾಧಿಕಾರಿಯಂತೆ ವರ್ತನೆ ಮಾಡಿದ್ದಾರೆ. ಕಾನೂನು ಬದ್ಧವಾಗಿ ಪ್ರಸ್ತಾಪ ಮಾಡಿದ ಕಾಮಗಾರಿ ಮತ್ತು ಅನುದಾನವನ್ನು ಬದಿಗೆ ಸರಿಸಿ ತಮಗೆ ಬೇಕಾದಂತೆ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಹಕ್ಕುಚ್ಯುತಿ ಕೈಗೊಳ್ಳಬೇಕೆಂದು ಸಾ.ರಾ ಮಹೇಶ್ ಸರ್ಕಾರವನ್ನು ಆಗ್ರಹಪಡಿಸಿದರು.
sa ra mahesh lashes out at rohini sindhuri in assembly session just protocol violation from ias officer says jc madhu swamy
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm