ಬ್ರೇಕಿಂಗ್ ನ್ಯೂಸ್
22-09-21 12:19 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.22: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಜಿಲ್ಲೆಯ ಶಾಸಕ ಸಾ.ರಾ. ಮಹೇಶ್ ನಡುವಿನ ಸಮರದ ಪ್ರತಿಧ್ವನಿ ವಿಧಾನಸಭೆಯಲ್ಲಿ ಕೇಳಿಬಂತು. ಸಾರಾ ಮಹೇಶ್ ಪ್ರಶ್ನೆಗೆ ಉತ್ತರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ, ಸರ್ಕಾರದ ಅಧಿಕಾರಿಗಳು ಅಧಿಕಾರಿಗಳಾಗಿಯೇ ಕೆಲಸ ಮಾಡಬೇಕೆ ಹೊರತು ಸರ್ವಾಧಿಕಾರಿಗಳಾಗಬಾರದು. ಇದನ್ನು ಸರಕಾರ ಸಹಿಸುವುದಿಲ್ಲ ಎಂದು ಅಧಿಕಾರಿಗೆ ಎಚ್ಚರಿಕೆ ನೀಡಿದ್ದಾರೆ.
ವಿಧಾನಸಭೆಯ ಶೂನ್ಯವೇಳೆಯಲ್ಲಿ ಶಾಸಕ ಸಾ.ರಾ. ಮಹೇಶ್ ಮಂಡಿಸಿದ್ದ ಹಕ್ಕುಚ್ಯುತಿ ಪ್ರಸ್ತಾಪಕ್ಕೆ ಉತ್ತರ ನೀಡಿದ ಸಚಿವರು, ಈ ವಿಚಾರದಲ್ಲಿ ಸರ್ಕಾರ ಅಂದಿನ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ಸರಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಸದನಕ್ಕೆ ತಿಳಿಸಿದರು.
ಅಧಿಕಾರಿ ತನ್ನ ವ್ಯಾಪ್ತಿ ಮೀರಿ ವರ್ತನೆ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವುದು ಸರ್ಕಾರಕ್ಕೆ ಅನಿವಾರ್ಯವಾಗುತ್ತದೆ. ಕಾನೂನು ಉಲ್ಲಂಘನೆಯನ್ನು ಯಾರೇ ಮಾಡಿದರೂ ಅದು ತಪ್ಪಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಕೆಆರ್ ನಗರ ಶಾಸಕ ಸಾರಾ ಮಹೇಶ್, ರೋಹಿಣಿ ಸಿಂಧೂರಿ ಅವರು 30 ಲಕ್ಷಕ್ಕೆ ಈಜು ಕೊಳ ನಿರ್ಮಾಣ ಮಾಡಿರುವುದು ಮತ್ತು 15 ಲಕ್ಷಕ್ಕೆ ಕಚೇರಿ ನವೀಕರಣ ಮಾಡಿರುವ ಬಗ್ಗೆ ಸದನದಲ್ಲಿ ಫೋಟೋ ತೋರಿಸಿ ವಿಧಾನಸಭೆಯ ಗಮನಸೆಳೆದರು.
ಶಾಸಕರ ಹಕ್ಕು, ನಗರಪಾಲಿಕೆ ಹಕ್ಕು ಮತ್ತು ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಯ ಹಕ್ಕನ್ನು ಮೊಟಕು ಮಾಡಿ ಅಧಿಕಾರಿ ಸರ್ವಾಧಿಕಾರಿಯಂತೆ ವರ್ತನೆ ಮಾಡಿದ್ದಾರೆ. ಕಾನೂನು ಬದ್ಧವಾಗಿ ಪ್ರಸ್ತಾಪ ಮಾಡಿದ ಕಾಮಗಾರಿ ಮತ್ತು ಅನುದಾನವನ್ನು ಬದಿಗೆ ಸರಿಸಿ ತಮಗೆ ಬೇಕಾದಂತೆ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಹಕ್ಕುಚ್ಯುತಿ ಕೈಗೊಳ್ಳಬೇಕೆಂದು ಸಾ.ರಾ ಮಹೇಶ್ ಸರ್ಕಾರವನ್ನು ಆಗ್ರಹಪಡಿಸಿದರು.
sa ra mahesh lashes out at rohini sindhuri in assembly session just protocol violation from ias officer says jc madhu swamy
26-08-25 07:07 pm
Bangalore Correspondent
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:18 pm
Mangalore Correspondent
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
26-08-25 05:24 pm
HK News Desk
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm