ಬ್ರೇಕಿಂಗ್ ನ್ಯೂಸ್
24-09-21 12:22 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.24: ಕಾಂಗ್ರೆಸ್ ಮತ್ತು ಬಿಜೆಪಿ ತಮ್ಮ ಪಕ್ಷ ಗಟ್ಟಿಗೊಳಿಸಲು ಪರಸ್ಪರ ಶಾಸಕರನ್ನು ಸೆಳೆಯುವ ಕಸರತ್ತಿನಲ್ಲಿ ತೊಡಗಿದೆ ಎನ್ನುವ ಮಾಹಿತಿಗಳ ಮಧ್ಯೆಯೇ ಪ್ರತೀ ಚುನಾವಣೆಯಲ್ಲಿ ಕಿಂಗ್ ಮೇಕರ್ ಆಗುವ ಜೆಡಿಎಸ್ ಈ ಬಾರಿ ಭಾರೀ ದೊಡ್ಡ ಗಾಳ ಹಾಕಿದೆ. ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರೆಂದೇ ಗುರುತಿಸಿಕೊಂಡಿರುವ ಸಿ.ಎಂ. ಇಬ್ರಾಹಿಂ ಅವರನ್ನು ಜೆಡಿಎಸ್ ಗೆ ಕರೆತಂದು ರಾಜ್ಯಾಧ್ಯಕ್ಷ ಪಟ್ಟ ನೀಡಲು ಎಚ್.ಡಿ. ಕುಮಾರಸ್ವಾಮಿ ತೀರ್ಮಾನಿಸಿದ್ದಾರೆ. ಈ ಬಗ್ಗೆ ಮಹತ್ವದ ಮಾತುಕತೆ ನಡೆದಿದ್ದು, ಸಿಎಂ ಇಬ್ರಾಹಿಂ ಅವರು ಕುಮಾರಸ್ವಾಮಿಯವರ ಪ್ರಸ್ತಾಪವನ್ನು ಒಪ್ಪಿದ್ದಾರೆ ಎನ್ನಲಾಗುತ್ತಿದೆ.

ಒಂದು ವರ್ಷದ ಹಿಂದೆ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಆಯ್ಕೆಯಾದ ಸಂದರ್ಭದಲ್ಲೇ ಸಿಎಂ ಇಬ್ರಾಹಿಂ ಕಾಂಗ್ರೆಸ್ ಪಕ್ಷದಿಂದ ಒಂದು ಕಾಲು ಹೊರಗಿಟ್ಟಿದ್ದರು. ಸಿಎಂ ಇಬ್ರಾಹಿಂ ಆಗಲೇ ಪಕ್ಷ ಬಿಟ್ಟು ಜೆಡಿಎಸ್ ಸೇರಲಿದ್ದಾರೆ ಎಂಬ ವದಂತಿ ಹಬ್ಬಿತ್ತು. ಆನಂತರ, ಸ್ವತಃ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸಿಎಂ ಇಬ್ರಾಹಿಂ ಅವರನ್ನು ಮನವೊಲಿಸಿ ಪಕ್ಷದಲ್ಲಿ ಉಳಿಸಿಕೊಂಡಿದ್ದರು. ಆದರೆ, ಈಗ ಮತ್ತೆ ಜೆಡಿಎಸ್ ವರಿಷ್ಠ ದೇವೇಗೌಡ ಮತ್ತು ಕುಮಾರಸ್ವಾಮಿ ಪಕ್ಷ ಸೇರ್ಪಡೆ ಬಗ್ಗೆ ಸಿಎಂ ಇಬ್ರಾಹಿಂ ಜೊತೆಗೆ ಮಹತ್ವದ ಮಾತುಕತೆ ನಡೆಸಿದ್ದಾರೆ.

ಎರಡು ದಿನಗಳ ಹಿಂದೆ ಬಿಡದಿಯ ರೆಸಾರ್ಟ್ ನಲ್ಲಿ ಕುಮಾರಸ್ವಾಮಿ ಮತ್ತು ಸಿಎಂ ಇಬ್ರಾಹಿಂ ಈ ಬಗ್ಗೆ ಮಹತ್ವದ ಮೀಟಿಂಗ್ ನಡೆಸಿದ್ದಾರೆ. ಇದರಂತೆ, ಸಿಎಂ ಇಬ್ರಾಹಿಂ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ಸದ್ಯಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ವಿಧಾನ ಪರಿಷತ್ ಸದಸ್ಯರೂ ಆಗಿರುವ ಸಿಎಂ ಇಬ್ರಾಹಿಂ ನವೆಂಬರ್ ತಿಂಗಳಲ್ಲಿ ಪರಿಷತ್ ಸದಸ್ಯತ್ವ ಮತ್ತು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಲಿದ್ದಾರೆ. ಆನಂತರ, ಅಧಿಕೃತವಾಗಿ ಜೆಡಿಎಸ್ ಸೇರ್ಪೆಡೆಯಾಗಲಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.

ಹಿಂದೆ ದೇವೇಗೌಡರು, ರಾಮಕೃಷ್ಣ ಹೆಗಡೆ ಜೊತೆಗಿದ್ದಾಗ ಜನತಾ ಪರಿವಾರದಲ್ಲಿಯೇ ಇದ್ದ ಸಿಎಂ ಇಬ್ರಾಹಿಂ ಆನಂತರ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇದೀಗ ದೇವೇಗೌಡರ ನೇತೃತ್ವದ ಜಾತ್ಯತೀತ ಜನತಾದಳಕ್ಕೆ ಬಂದು ಪಕ್ಷದ ಸಾರಥ್ಯ ವಹಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಸಿಎಂ ಇಬ್ರಾಹಿಂ ಪಕ್ಷ ಸೇರ್ಪಡೆಯಾಗಿ, ಅಧ್ಯಕ್ಷ ಪಟ್ಟ ಅಲಂಕರಿಸಿದರೆ ಆಮೂಲಕ ಕರಾವಳಿ ಮತ್ತು ಬೆಂಗಳೂರು, ಮೈಸೂರು ಭಾಗದಲ್ಲಿ ಅಲ್ಪಸಂಖ್ಯಾತ ಮತಗಳನ್ನು ಸೆಳೆಯಬಹುದು ಎನ್ನುವ ಲೆಕ್ಕಾಚಾರ ಇದೆ. ಅಲ್ಲದೆ, ಜನತಾ ಪರಿವಾರದ ಹಳೇ ನಾಯಕರನ್ನು ಒಂದೆಡೆ ಸೇರಿಸಿ, ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯವಾಗಿ ಚುನಾವಣೆ ಎದುರಿಸಬಹುದು ಎನ್ನುವ ಲೆಕ್ಕಾಚಾರ ಜೆಡಿಎಸ್ ನದ್ದು.

ಇದೇ ವೇಳೆ, ಕಾಂಗ್ರೆಸ್ ಪಕ್ಷದಿಂದ ಹಲವು ಶಾಸಕರು ಮತ್ತು ಸ್ಥಳೀಯ ನಾಯಕರನ್ನು ಪಕ್ಷಕ್ಕೆ ಸೆಳೆಯಲು ಕುಮಾರಸ್ವಾಮಿ ಗೇಮ್ ಪ್ಲಾನ್ ಹಾಕಿದ್ದಾರೆ. ಈಗಾಗ್ಲೇ ಪಕ್ಷಕ್ಕೆ ಸೆಳೆಯುವ ನಿಟ್ಟಿನಲ್ಲಿ ಕೆಲವು ಶಾಸಕರ ಜೊತೆ ಮಾತುಕತೆ ನಡೆಸಿದ್ದಾರೆ. ಬಿಜೆಪಿಯಲ್ಲಿ ಮುನಿಸಿಕೊಂಡಿರುವ ಶಾಸಕರ ಜೊತೆಗೂ ಕುಮಾರಸ್ವಾಮಿ ಮಾತುಕತೆ ನಡೆಸಲು ಮುಂದಾಗಿದ್ದಾರೆ. ಹೀಗಾಗಿ ಮುಂದಿನ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಭಾರೀ ತಂತ್ರಗಾರಿಕೆ ನಡೆಸಿದ್ದಾರೆ ಎನ್ನುವುದು ಬಲ್ಲಮೂಲಗಳಿಂದ ತಿಳಿದುಬಂದಿದೆ. ಕನಿಷ್ಠ 40 ಸ್ಥಾನಗಳನ್ನು ಪಡೆದಲ್ಲಿ ಮತ್ತೆ ಕಿಂಗ್ ಮೇಕರ್ ಆಗುವುದು ಖಚಿತ ಎನ್ನುವ ಗುರಿ ಇರಿಸಿಕೊಂಡಿರುವ ಕುಮಾರಸ್ವಾಮಿ ಈ ಬಾರಿ 140 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಇಳಿಸಲು ಚಿಂತನೆ ನಡೆಸಿದ್ದಾರೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm