ಬ್ರೇಕಿಂಗ್ ನ್ಯೂಸ್
26-09-21 12:26 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.26: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಲೇಖಾನ್ ಎಂಬಲ್ಲಿ ನಡೆದಿದ್ದು ಟ್ಯಾಂಕರ್ನಿಂದ ಪೆಟ್ರೋಲ್ ಸೋರಿಕೆಯಾಗಿ ಆತಂಕ ಸೃಷ್ಟಿಯಾಗಿದೆ.
ಮಂಗಳೂರಿನಲ್ಲಿ ಪೆಟ್ರೋಲ್ ತುಂಬಿಸಿಕೊಂಡಿದ್ದ ಟ್ಯಾಂಕರ್ ಮಾಗುಂಡಿಗೆ ತೆರಳುತ್ತಿತ್ತು. ಟ್ಯಾಂಕರ್ ಚಾರ್ಮಾಡಿ ಘಾಟಿಯ ಅಲೇಖಾನ್ ಬಳಿಯಿಂದ ಘಾಟಿಯಲ್ಲಿ ತೆರಳುತ್ತಿದ್ದಂತೆ ಪಲ್ಟಿಯಾಗಿದೆ. ರಸ್ತೆಯ ಬದಿಗೆ ಉರುಳಿ ಬಿದ್ದು ಟ್ಯಾಂಕ್ ಸೋರಿಕೆಯಾಗಿದ್ದು ಪೆಟ್ರೋಲ್ ಸೋರಿಕೆಯಾಗುವುದಕ್ಕೆ ಆರಂಭವಾಗಿದೆ. ಟ್ಯಾಂಕರ್ನಲ್ಲಿ ಸುಮಾರು 8000 ಲೀಟರ್ ಪೆಟ್ರೋಲ್ ಹಾಗೂ 4000 ಲೀಟರ್ ಡಿಸೇಲ್ ಸಂಗ್ರಹವಿತ್ತು.

ಪೆಟ್ರೋಲ್ ಟ್ಯಾಂಕರ್ ಘಾಟಿಯ ಮತ್ತೊಂದು ಬದಿಗೆ ಪಲ್ಟಿಯಾಗಿದ್ದರೆ, ಪ್ರಪಾತಕ್ಕೆ ಉರುಳಿ ಬೀಳುವ ಸಾಧ್ಯತೆಯಿತ್ತು. ಆದರೆ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಬಣಕಲ್ ಠಾಣೆಯ ಪೊಲೀಸರು ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಚಾರ್ಮಾಡಿ ಘಾಟ್ ಕುಸಿತದಿಂದ ವಾಹನ ಸಂಚಾರಕ್ಕೆ ಬ್ರೇಕ್ ಬಿದ್ದಿತ್ತು. ಅಲ್ಲದೇ ರಾತ್ರಿ ವೇಳೆ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಇದೀಗ ಸಂಚಾರ ಆರಂಭವಾಗುತ್ತಲೇ ಟ್ಯಾಂಕರ್ ಪಲ್ಟಿಯಾಗಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಬಣಕಲ್ ಠಾಣೆಯ ಪೊಲೀಸರು ತೆರವು ಕಾರ್ಯ ನಡೆಸುತ್ತಿದ್ದಾರೆ.
Mangalore Petrol tanker truck topples in Charmadi ghat leakage causes panic. The fire service team are on the spot. Banakal police are also on spot.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
ಮೂಡುಬಿದ್ರೆ ಎಕ್ಸ್ಪ್ರೆಸ್ ಬಸ್ - ಕಂಟೇನರ್ ಲಾರಿ ಮ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm