ಬ್ರೇಕಿಂಗ್ ನ್ಯೂಸ್
28-09-21 05:32 pm Headline Karnataka News Network ಕರ್ನಾಟಕ
ಮೈಸೂರು, ಸೆ.28: ಪೊಲೀಸರು ಕೆಲವೊಮ್ಮೆ ಅಧಿಕಾರ ದುರುಪಯೋಗ ಮಾಡುವುದು ಕೇಳಿಬರುತ್ತದೆ. ಹಾಗಂತ, ಈ ಬಗ್ಗೆ ದೂರು ನೀಡಲು ಜನ ಹಿಂಜರಿಯುತ್ತಾರೆ. ಆದರೆ, ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸರ ವಿರುದ್ಧ ದೂರು ನೀಡಲೆಂದೇ ಹೊಸ ವ್ಯವಸ್ಥೆ ಜಾರಿಗೆ ತರುವುದಾಗಿ ಹೇಳಿದ್ದಾರೆ.
ಮೈಸೂರಿನ ಜ್ಯೋತಿ ನಗರ ಪೊಲೀಸ್ ತರಬೇತಿ ಶಾಲೆ ಮೈದಾನದಲ್ಲಿ ಮಹಿಳಾ ಪೊಲೀಸ್ ಕಾನ್ಸ್ಟೆಬಲ್ಗಳ 6ನೇ ತಂಡ ನಿರ್ಗಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಚಿವ ಅರಗ ಜ್ಞಾನೇಂದ್ರ ಮಾತನಾಡಿದರು.
"ಪೊಲೀಸರ ಕಡೆಯಿಂದಲೂ ಇತ್ತೀಚೆಗೆ ಅಪರಾಧ ಹೆಚ್ಚುತ್ತಿವೆ, ಹೀಗಾಗಿ ಪೊಲೀಸರ ವಿರುದ್ಧವೂ ಎಸ್ಪಿ, ಡಿಜಿ ಕಚೇರಿಗಳಲ್ಲಿ ದೂರು ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದರು.
"ಪೊಲೀಸರಿಂದ ಅಪರಾಧಕ್ಕೊಳಗಾದವರು ದೂರು ನೀಡಬೇಕು. ಅದಕ್ಕಾಗಿ ಅಗತ್ಯ ವಾತಾವರಣ ನಿರ್ಮಾಣ ಮಾಡಲು ವ್ಯವಸ್ಥೆ ಮಾಡಿದ್ದೇವೆ. ಬೆಂಗಳೂರಿಗೆ ಹೋದ ತಕ್ಷಣ ಈ ಬಗ್ಗೆ ಅಧಿಕಾರಗಳ ಸಭೆ ನಡೆಸುತ್ತೇನೆ. ಪೊಲೀಸರ ಮೇಲೆಯೇ ಕೆಲವೊಂದಷ್ಟು ದೂರುಗಳಿವೆ. ಇದನ್ನು ತಡೆಯಲು ಈ ಕ್ರಮ ಅನಿವಾರ್ಯವಾಗಿದೆ," ಎಂದು ಗೃಹ ಸಚಿವರು ಹೇಳಿದರು.
"ಪ್ರತಿ ಜಿಲ್ಲೆಯಲ್ಲೂ ಎರಡು ದೂರವಾಣಿ ಸಂಖ್ಯೆ ಸಮೇತ ಕೇಂದ್ರ ಸ್ಥಾಪನೆಗೆ ಮುಂದಾಗುತ್ತಿದ್ದೇವೆ. ಜನಸ್ನೇಹಿ ಪೊಲೀಸ್ ದೃಷ್ಟಿಯಿಂದ ಈ ವ್ಯವಸ್ಥೆ ಶೀಘ್ರದಲ್ಲೇ ಜಾರಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
"ಈ ದೇಶದ 130 ಕೋಟಿ ಜನಸಂಖ್ಯೆಯ ಆಂತರಿಕ ರಕ್ಷಣೆಯ ಸವಾಲು ಇದಾಗಿದ್ದು, ಇದನ್ನು ಸೈನಿಕರು ಮಾಡಲು ಸಾಧ್ಯವಿಲ್ಲ. ಅದನ್ನು ಮಾಡುತ್ತಿರುವುದು ಪೊಲೀಸರು. ಶಾಂತಿ ಸುವ್ಯವಸ್ಥೆ ಕಾಪಾಡುವ ಹೊಣೆಗಾರಿಕೆ ಉತ್ತಮವಾಗಿ ನಿರ್ವಹಿಸುತ್ತಿದೆ," ಎಂದರು.

"ಪೊಲೀಸರು ಅಂದರೆ ಗಂಡಸರು ಅನ್ನುವ ಪರಿಕಲ್ಪನೆ ಇತ್ತು. ನೂರಕ್ಕೆ 25 ಭಾಗ ಮಹಿಳೆಯರು ಇರಬೇಕು, ಆದರೆ ರಾಜ್ಯದಲ್ಲಿ ಶೇ.10ರಷ್ಟು ಮಹಿಳಾ ಪೊಲೀಸರು ಇದ್ದಾರೆ. ಪೊಲೀಸ್ ಕಾನ್ಸ್ಟೆಬಲ್ ವಿದ್ಯಾರ್ಹತೆ ಪಿಯುಸಿ. ಆದರೆ ನಿಮ್ಮ ವಿದ್ಯಾರ್ಹತೆ ಪದವಿ, ಸ್ನಾತಕೋತ್ತರ ಇದೆ. 242 ಜನರಲ್ಲಿ ಹೆಚ್ಚು ಅಭ್ಯರ್ಥಿಗಳು ಪದವಿ ಪಡೆದಿದ್ದೀರಿ. ಇದರಿಂದ ಪೊಲೀಸ್ ಇಲಾಖೆಯಲ್ಲಿ ಶಿಸ್ತು ಸಂಯಮ ಹೆಚ್ಚಬೇಕು," ಎಂದು ತರಬೇತಿ ಪಡೆದು ನಿರ್ಗಮನ ಮಹಿಳಾ ಪೊಲೀಸರಿಗೆ ಕಿವಿಮಾತು ಹೇಳಿದರು.
ಪ್ರಕರಣದ ಶೇ.35 ರಷ್ಟು ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯವಾಗುತ್ತಿದೆ. ಮಹಿಳೆ ಎಲ್ಲವನ್ನು ಪುರುಷ ಅಧಿಕಾರಿ ಬಳಿ ಹೇಳಲು ಸಾಧ್ಯವಿಲ್ಲ. ಎಲ್ಲಾ ಪೊಲೀಸ್ ಠಾಣೆಯಲ್ಲಿ ಕನಿಷ್ಠ ಮೂವರು ಮಹಿಳಾ ಪೇದೆಯರು, ಜಿಲ್ಲೆಗೊಂದು ಮಹಿಳಾ ಪೊಲೀಸ್ ಠಾಣೆಯ ಗುರಿ ಇದೆ," ಎಂದು ಗೃಹ ಅರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು.
"ಅಲ್ಲದೇ ಮಂಗಳೂರಿನಲ್ಲಿ ನಡೆದ ಯುವತಿ ಮೇಲಿನ ಹಲ್ಲೆ ಪ್ರಕರಣ ನನ್ನ ಗಮನಕ್ಕೆ ಬಂದಿದೆ. ಇಂತಹ ಪ್ರಕರಣ ನಡೆಯದಂತೆ ಕ್ರಮ ವಹಿಸಲಾಗುತ್ತಿದೆ. ಧರ್ಮದ ಹೆಸರಿನಲ್ಲಿ ಹಿಂದೂ ಮಹಿಳೆಯರ ಮೇಲೆ ಹಲ್ಲೆ ನಡೆಸುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು," ಎಂದರು.
ಇದಕ್ಕೂ ಮುನ್ನ ಮಹಿಳಾ ಪೊಲೀಸ್ ಕಾನ್ಸ್ಟೆಬಲ್ಗಳಿಂದ ಪಥಸಂಚಲನ ನೆರವೇರಿತು. ಕಳೆದ 8 ತಿಂಗಳ ತರಬೇತಿ ಪೂರೈಸಿರುವ 242 ಪ್ರಶಿಕ್ಷಣಾರ್ಥಿಗಳು ಗೃಹ ಸಚಿವ ಆರಗ ಜ್ಞಾನೇಂದ್ರ ಎದುರು ನಿರ್ಗಮನ ಪರೇಡ್ ನಡೆಸಿದರು. ಬಳಿಕ ಗೃಹ ಸಚಿವರು ಪ್ರಶಿಕ್ಷಣಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು.
Planning to make System to Complaints Against Police Abuse of Power says Araga Jnanendra
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm