ಬ್ರೇಕಿಂಗ್ ನ್ಯೂಸ್
29-09-21 03:31 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ. 29: ಈ ಬಾರಿ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಶುಲ್ಕ ಹೆಚ್ಚಳ ಮಾಡದಂತೆ ನಿರ್ದೇಶನ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಶೇ.15ರಿಂದ ಶೇ.20 ರಷ್ಟು ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿವೆ. ಆದರೆ, ಕೊರೋನಾ ಮತ್ತು ಲಾಕ್ಡೌನ್ಗಳಿಂದಾಗಿ ಪೋಷಕರು ಆರ್ಥಿಕ ಸಂಕಷ್ಟದಲ್ಲಿ ಇದ್ದಾರೆ. ಈ ಸಂದರ್ಭದಲ್ಲಿ ಶುಲ್ಕ ಹೆಚ್ಚಳ ಮಾಡುವ ನಿರ್ಧಾರ ಸರಿಯಲ್ಲ. ಈ ಸಂಬಂಧ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಯೊಂದಿಗೆ ನಡೆದ ಸಭೆಯಲ್ಲಿಯೂ ಸಹ ಚರ್ಚಿಸಿ, ಶುಲ್ಕ ಹೆಚ್ಚಳ ಮಾಡದಿರುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳಿಗೆ ಪ್ರವೇಶ ಒದಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವ್ಯವಸ್ಥಿತವಾದ ಕೌನ್ಸೆಲಿಂಗ್ ನಡೆಸಲಾಗುವುದು. ಆದರೆ, ಇದಕ್ಕೂ ಮುನ್ನ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ನಡೆಸಲಾದ ನೀಟ್ ಪರೀಕ್ಷೆಯ ಕೌನ್ಸೆಲಿಂಗ್ ಗಮನಿಸಿ ಸಿಇಟಿ ಕೌನ್ಸೆಲಿಂಗ್ ಏರ್ಪಡಿಸುತ್ತೇವೆ. ಕಾರಣ ಸಿಇಟಿ ಕೌನ್ಸೆಲಿಂಗ್ ನಲ್ಲಿ ಎಂಜಿನಿಯರಿಂಗ್ ಸೀಟು ಪಡೆದ ವಿದ್ಯಾರ್ಥಿಗಳು ಮೆಡಿಕಲ್ ಸೀಟ್ ಸಿಕ್ಕರೆ ಇಂಜಿನಿಯರಿಂಗ್ ರದ್ದು ಮಾಡಿ ಮೆಡಿಕಲ್ ಗೆ ತೆರಳುತ್ತಾರೆ. ಈ ಗೊಂದಲ ತಪ್ಪಿಸಲು ಅಗತ್ಯ ಮುಂಜಾಗ್ರತೆ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಿಇಟಿ ರ್ಯಾಂಕ್ ಮೂಲಕ ಖಾಸಗಿ ಕಾಲೇಜಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೂ ಸಹ ಕೌಶಲ ತರಬೇತಿ ಹೆಸರಿನಲ್ಲಿ ಶುಲ್ಕ ಪಡೆಯಲಾಗುತ್ತದೆ. ಆದರೆ, ಈ ಶುಲ್ಕ ವರ್ಷಕ್ಕೆ 20,000 ಮೀರಬಾರದು ಎಂದು ಖಾಸಗಿ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಖಾಸಗಿ ಕಾಲೇಜುಗಳಲ್ಲಿ ವಾರ್ಷಿಕವಾಗಿ ಪಡೆಯುವ ಎಲ್ಲ ರೀತಿಯ ಶುಲ್ಕಗಳ ಬಗ್ಗೆ ವಿವರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮೊದಲೇ ತಿಳಿಸಬೇಕು ಎಂದೂ ಸೂಚಿಸಲಾಗಿದೆ ಎಂದರು.
No Fee Hike for Engineering says Minister Ashwath Narayan.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm