ಬ್ರೇಕಿಂಗ್ ನ್ಯೂಸ್
30-09-21 03:01 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.30 : ಬಿಬಿಎಂಪಿ ಅಧಿಕಾರಿಗಳು ಕಡೆಗೂ ದಂಡ ಪ್ರಯೋಗ ಮಾಡಿದ್ದಾರೆ. 39 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿರುವ ಪ್ರತಿಷ್ಠಿತ ಮಂತ್ರಿ ಮಾಲ್ ಕಟ್ಟಡಕ್ಕೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ತೆರಿಗೆ ಕಟ್ಟುವವರೆಗೆ ಮಾಲ್ ಓಪನ್ ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಕಳೆದ ಮೂರು ವರ್ಷಗಳಿಂದ ಮಂತ್ರಿ ಮಾಲ್ ತೆರಿಗೆ ಕಟ್ಟಿರಲಿಲ್ಲ. ಬಡ್ಡಿ ಸೇರಿ ಒಟ್ಟು 39 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿದೆ. ಇಂದು ಪಾಲಿಕೆ ಅಧಿಕಾರಿಗಳು ವಸೂಲಿಗೆ ತೆರಳಿದ್ದರು. ತೆರಿಗೆ ಪಾವತಿಯಾಗದ ಕಾರಣ ಬೀಗ ಜಡಿಯಲಾಗಿದೆ ಎಂದು ಮಲ್ಲೇಶ್ವರ ಪಶ್ಚಿಮ ಡಿಸಿಪಿ ಪ್ರಸನ್ನ ಕುಮಾರ್ ಮಾಹಿತಿ ನೀಡಿದ್ದಾರೆ
2017ರಿಂದ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಬಾಕಿ ಪಾವತಿಸುವಂತೆ ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತರು ನೋಟಿಸ್ ನೀಡಿದ್ದರು. ಬಳಿಕ 5 ಕೋಟಿ ರೂ. ಪಾವತಿಸಿ, ಉಳಿದ ಹಣವನ್ನು ಅಕ್ಟೋಬರ್ ಅಂತ್ಯದ ವೇಳೆ ಕಟ್ಟುವುದಾಗಿ ಭರವಸೆ ನೀಡಿದ್ದರು. ಆದರೆ, ಸೆಪ್ಟೆಂಬರ್ ಒಳಗಡೆ ತೆರಿಗೆ ಪಾವತಿಸದಿದ್ದರೆ ಬೀಗ ಹಾಕುವುದಾಗಿ ಎಚ್ಚರಿಕೆ ನೀಡಿದ್ದರು.

ಅಭಿಷೇಕ್ ಡೆವಲಪರ್ಸ್ ಹೆಸರಿನಲ್ಲಿ ಮಂತ್ರಿ ಮಾಲ್ ಬಿಬಿಎಂಪಿಗೆ ತೆರಿಗೆ ಪಾವತಿ ಮಾಡುತ್ತಾ ಬಂದಿದೆ. ಆದರೆ, 2017ರಿಂದ ಇದುವರೆಗೂ ಆಸ್ತಿ ತೆರಿಗೆ ಕಟ್ಟಿಲ್ಲ. ಮಂತ್ರಿ ಮಾಲ್ ಗೆ ನೋಟಿಸ್ ಕೊಟ್ಟು ಬಿಬಿಎಂಪಿ ಸುಸ್ತಾಗಿದೆ. ತೆರಿಗೆ ಕಟ್ಟದಿದ್ದರೆ ಆಸ್ತಿ ಮುಟ್ಟುಗೋಲು ಹಾಕುವ ಎಚ್ಚರಿಕೆಯನ್ನು ಸಹ ನೀಡಲಾಗಿತ್ತು. ಬಿಬಿಎಂಪಿ ಪಶ್ಚಿಮ ವಲಯದಲ್ಲಿ ಅತೀ ದೊಡ್ಡ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಪಟ್ಟಿಯಲ್ಲಿ ಮಂತ್ರಿ ಮಾಲ್ ಮೊದಲ ಸ್ಥಾನದಲ್ಲಿದೆ.
ಈ ಕುರಿತು ಮಾಹಿತಿ ನೀಡಿರುವ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ, ಕಳೆದ 3 ವರ್ಷದಿಂದ ಬಡ್ಡಿ ಸೇರಿ ಒಟ್ಟು 39 ಕೋಟಿ ರೂ.ಗಳನ್ನು ಬಾಕಿ ಉಳಿಸಿಕೊಂಡಿದ್ದರು. ಈ ಪೈಕಿ ಡಿಡಿ ಮೂಲಕ 5 ಕೋಟಿ ರೂ.ಗಳಷ್ಟು ಪಾವತಿ ಮಾಡಿದ್ದಾರೆ. ಕೊರೊನಾ ನೆಪ ಹೇಳಿದ್ದರು. ಸೆಪ್ಟೆಂಬರ್ ಒಳಗಡೆ ಪೂರ್ತಿ ತೆರಿಗೆ ಕಟ್ಟುವಂತೆ ನೋಟಿಸ್ ನೀಡಲಾಗಿತ್ತು ಎಂದು ತಿಳಿಸಿದ್ದಾರೆ.
Malleshwaram Mantri Mall Fails to Pay Property Tax BBMP Officilas Close the Mall.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm