ಬ್ರೇಕಿಂಗ್ ನ್ಯೂಸ್
01-10-21 11:12 am Headline Karnataka News Network ಕರ್ನಾಟಕ
ಬೆಂಗಳೂರು, ಅ.1 : ಮಂಗಳೂರಿನ ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ವಿಶೇಷ ಸರಕಾರಿ ಅಭಿಯೋಜಕರನ್ನಾಗಿ (ಎಸ್ಪಿಪಿ) ಹಿರಿಯ ವಕೀಲ ರವೀಂದ್ರನಾಥ ಕಾಮತ್ ಅವರನ್ನು ನೇಮಿಸಿದ್ದ ರಾಜ್ಯ ಸರಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ರಾಜ್ಯ ಸರಕಾರ 2016 ರಲ್ಲಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಬಾಳಿಗಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕ ಸದಸ್ಯ ಪೀಠವು ಈ ಆದೇಶ ಮಾಡಿದೆ.
ಹೊಸ ವಿಶೇಷ ಸರಕಾರಿ ಅಭಿಯೋಜಕರನ್ನು ನೇಮಿಸಲು ಅರ್ಜಿಯಲ್ಲಿ 6ನೇ ಪ್ರತಿವಾದಿಯಾಗಿರುವ ಬಾಳಿಗಾ ಸಹೋದರಿ ಅನುರಾಧಾ ಬಾಳಿಗಾ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲು ಮುಕ್ತ ಅವಕಾಶ ಹೊಂದಿದ್ದಾರೆ. ಒಂದೊಮ್ಮೆ ಬಾಳಿಗಾ ಸಹೋದರಿ ಅನುರಾಧಾ ಮನವಿ ಸಲ್ಲಿಸಿದರೆ, ಅರ್ಜಿಯನ್ನು ಕಾನೂನು ಪ್ರಕಾರ ಪರಿಗಣಿಸಬೇಕು ಎಂದು ರಾಜ್ಯ ಸರಕಾರಕ್ಕೆ ಪೀಠ ನಿರ್ದೇಶಿಸಿದೆ.

ಮಂಗಳೂರಿನ ಕೊಡಿಯಾಲ್ ಬೈಲ್ನಲ್ಲಿ ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರನ್ನು 2016ರ ಮಾ.21ರ ಬೆಳಗಿನ ಜಾವ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ರವೀಂದ್ರನಾಥ್ ಕಾಮತ್ ಅವರನ್ನು ನೇಮಿಸಿ 2016ರ ಡಿ.21ರಂದು ರಾಜ್ಯ ಸರಕಾರ ಆದೇಶ ಹೊರಡಿಸಿತ್ತು.

ವಿನಾಯಕ ಬಾಳಿಗಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲಿನಿಂದಲೂ ನ್ಯಾಯಾಲಯಗಳಲ್ಲಿ ದೂರುದಾರರ ಪರವಾಗಿ ಮತ್ತು ಮೃತ ಕುಟುಂಬದವರು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳಲ್ಲಿ ರವೀಂದ್ರನಾಥ್ ಕಾಮತ್ ವಾದ ಮಂಡಿಸಿದ್ದಾರೆ. ಕೊಲೆಯ ನಂತರ ನಡೆದ ಹಲವು ಪ್ರತಿಭಟನೆಗಳಲ್ಲಿ ಕಾಮತ್ ಭಾಗವಹಿಸಿದ್ದರು. ಮೃತರ ತಂದೆ ನಡೆಸಿದ ಸುದ್ದಿಗೋಷ್ಠಿಯಲ್ಲೂ ಪಾಲ್ಗೊಂಡು ನನ್ನ ವಿರುದ್ಧ ಹೇಳಿಕೆ ನೀಡಿದ್ದರು. ಮೃತನ ಕುಟುಂಬದವರ ಮನವಿ ಮೇರೆಗೆ ರವೀಂದ್ರನಾಥ್ ಅವರನ್ನೇ ಎಸ್ಪಿಪಿಯಾಗಿ ನೇಮಿಸಲಾಗಿದೆ. ಹೀಗಾಗಿ, ಕಾಮತ್ ಎಸ್ಪಿಪಿಯಾಗಿ ಮುಂದುವರಿದರೆ ನಿಷ್ಪಕ್ಷಪಾತ ವಿಚಾರಣೆ ಸಾಧ್ಯವಿಲ್ಲ. ಆದ್ದರಿಂದ, ಅವರ ನೇಮಕಾತಿ ರದ್ದುಪಡಿಸಬೇಕು ಎಂದು ಆರೋಪಿ ನರೇಶ್ ಶೆಣೈ ಕೋರಿದ್ದರು.
RTI Activist Vinayak Baliga killing Karntaka HC Orders for Removal of SSP Ravindranath Kamath
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm