ಬ್ರೇಕಿಂಗ್ ನ್ಯೂಸ್
01-10-21 11:12 am Headline Karnataka News Network ಕರ್ನಾಟಕ
ಬೆಂಗಳೂರು, ಅ.1 : ಮಂಗಳೂರಿನ ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ವಿಶೇಷ ಸರಕಾರಿ ಅಭಿಯೋಜಕರನ್ನಾಗಿ (ಎಸ್ಪಿಪಿ) ಹಿರಿಯ ವಕೀಲ ರವೀಂದ್ರನಾಥ ಕಾಮತ್ ಅವರನ್ನು ನೇಮಿಸಿದ್ದ ರಾಜ್ಯ ಸರಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ರಾಜ್ಯ ಸರಕಾರ 2016 ರಲ್ಲಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಬಾಳಿಗಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕ ಸದಸ್ಯ ಪೀಠವು ಈ ಆದೇಶ ಮಾಡಿದೆ.
ಹೊಸ ವಿಶೇಷ ಸರಕಾರಿ ಅಭಿಯೋಜಕರನ್ನು ನೇಮಿಸಲು ಅರ್ಜಿಯಲ್ಲಿ 6ನೇ ಪ್ರತಿವಾದಿಯಾಗಿರುವ ಬಾಳಿಗಾ ಸಹೋದರಿ ಅನುರಾಧಾ ಬಾಳಿಗಾ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲು ಮುಕ್ತ ಅವಕಾಶ ಹೊಂದಿದ್ದಾರೆ. ಒಂದೊಮ್ಮೆ ಬಾಳಿಗಾ ಸಹೋದರಿ ಅನುರಾಧಾ ಮನವಿ ಸಲ್ಲಿಸಿದರೆ, ಅರ್ಜಿಯನ್ನು ಕಾನೂನು ಪ್ರಕಾರ ಪರಿಗಣಿಸಬೇಕು ಎಂದು ರಾಜ್ಯ ಸರಕಾರಕ್ಕೆ ಪೀಠ ನಿರ್ದೇಶಿಸಿದೆ.

ಮಂಗಳೂರಿನ ಕೊಡಿಯಾಲ್ ಬೈಲ್ನಲ್ಲಿ ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರನ್ನು 2016ರ ಮಾ.21ರ ಬೆಳಗಿನ ಜಾವ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ರವೀಂದ್ರನಾಥ್ ಕಾಮತ್ ಅವರನ್ನು ನೇಮಿಸಿ 2016ರ ಡಿ.21ರಂದು ರಾಜ್ಯ ಸರಕಾರ ಆದೇಶ ಹೊರಡಿಸಿತ್ತು.

ವಿನಾಯಕ ಬಾಳಿಗಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲಿನಿಂದಲೂ ನ್ಯಾಯಾಲಯಗಳಲ್ಲಿ ದೂರುದಾರರ ಪರವಾಗಿ ಮತ್ತು ಮೃತ ಕುಟುಂಬದವರು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳಲ್ಲಿ ರವೀಂದ್ರನಾಥ್ ಕಾಮತ್ ವಾದ ಮಂಡಿಸಿದ್ದಾರೆ. ಕೊಲೆಯ ನಂತರ ನಡೆದ ಹಲವು ಪ್ರತಿಭಟನೆಗಳಲ್ಲಿ ಕಾಮತ್ ಭಾಗವಹಿಸಿದ್ದರು. ಮೃತರ ತಂದೆ ನಡೆಸಿದ ಸುದ್ದಿಗೋಷ್ಠಿಯಲ್ಲೂ ಪಾಲ್ಗೊಂಡು ನನ್ನ ವಿರುದ್ಧ ಹೇಳಿಕೆ ನೀಡಿದ್ದರು. ಮೃತನ ಕುಟುಂಬದವರ ಮನವಿ ಮೇರೆಗೆ ರವೀಂದ್ರನಾಥ್ ಅವರನ್ನೇ ಎಸ್ಪಿಪಿಯಾಗಿ ನೇಮಿಸಲಾಗಿದೆ. ಹೀಗಾಗಿ, ಕಾಮತ್ ಎಸ್ಪಿಪಿಯಾಗಿ ಮುಂದುವರಿದರೆ ನಿಷ್ಪಕ್ಷಪಾತ ವಿಚಾರಣೆ ಸಾಧ್ಯವಿಲ್ಲ. ಆದ್ದರಿಂದ, ಅವರ ನೇಮಕಾತಿ ರದ್ದುಪಡಿಸಬೇಕು ಎಂದು ಆರೋಪಿ ನರೇಶ್ ಶೆಣೈ ಕೋರಿದ್ದರು.
RTI Activist Vinayak Baliga killing Karntaka HC Orders for Removal of SSP Ravindranath Kamath
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm