ಬ್ರೇಕಿಂಗ್ ನ್ಯೂಸ್
02-10-21 04:51 pm Headline Karnataka News Network ಕರ್ನಾಟಕ
ಬೆಂಗಳೂರು, ಅ.2: ಪೋಷಕರು ಹೊರಗೆ ಹೋಗಿದ್ದ ಸಮಯದಲ್ಲಿ 11ನೇ ಮಹಡಿಯಲ್ಲಿ ಆಟವಾಡುತ್ತಿದ್ದ 11 ವರ್ಷದ ಬಾಲಕ ಆಯ ತಪ್ಪಿ ಪಕ್ಕದ ಕ್ಲಬ್ ಹೌಸ್ನ 5ನೇ ಮಹಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಆರ್ಆರ್ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಾಫ್ಟ್ವೇರ್ ಇಂಜಿನಿಯರ್ ಪುತ್ರ ಗಗನ್ ಮೃತಪಟ್ಟ ಬಾಲಕ. ಬನಶಂಕರಿ 3ನೇ ಹಂತದಲ್ಲಿರುವ ಶೋಭಾ ವ್ಯಾಲಿವ್ಯೂ ಅಪಾರ್ಟ್ಮೆಂಟ್ನಲ್ಲಿ ಈ ದುರ್ಘಟನೆ ಸಂಭವಿಸಿದೆ.
ಗಗನ್ ನಿನ್ನೆ ಸ್ನೇಹಿತರ ಜೊತೆ ಆಟವಾಡುತ್ತಿದ್ದುದನ್ನು ಗಮನಿಸಿದ ಪೋಷಕರು, ಮಗನನ್ನು ಬಿಟ್ಟು ಕಾರ್ಯನಿಮಿತ್ತ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಮಹಡಿಯಿಂದ ಪಕ್ಕದ ಕ್ಲಬ್ ಹೌಸ್ನ 5ನೇ ಮಹಡಿಗೆ ಬಿದ್ದಿದ್ದಾನೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಆತನ ಪ್ರಾಣಪಕ್ಷಿ ಹಾರಿಹೋಗಿತ್ತು.

ಪೋಷಕರು ಮನೆಗೆ ಬರುವಷ್ಟರಲ್ಲಿ ಮಗನ ಸಾವಿನ ಸುದ್ದಿ ತಿಳಿದು ಆಘಾತಕ್ಕೊಳಗಾದರು. ಘಟನೆ ಸಂಬಂಧ ಆರ್ಆರ್ ನಗರ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪೋಷಕರೇ ಎಚ್ಚರ:
ಅಪಾರ್ಟ್ಮೆಂಟ್ ಆಗಿರಬಹುದು, ಇಲ್ಲವೇ ಬಹುಮಹಡಿ ಕಟ್ಟಡದಲ್ಲಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ನೆಲೆಸಿರುವವರು ಈ ಬಗ್ಗೆ ಹೆಚ್ಚು ಗಮನಹರಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಕಣ್ಮುಚ್ಚಿ ಕಣ್ಣು ತೆರೆಯುವಷ್ಟರಲ್ಲಿ ಅನಾಹುತಗಳು ಸಂಭವಿಸಿಯೇ ಬಿಡುತ್ತವೆ. ಹಾಗಾಗಿ ಮಕ್ಕಳ ಬಗ್ಗೆ ಜಾಗೃತಿ ವಹಿಸುವ ಮೂಲಕ ಮಕ್ಕಳನ್ನು ಪ್ರಾಣಾಪಾಯಗಳಿಂದ ತಪ್ಪಿಸಿಕೊಳ್ಳಬೇಕಿದೆ.
11 year old boy fell from 11th floor dies in banashankari apartment.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm