ಬ್ರೇಕಿಂಗ್ ನ್ಯೂಸ್
03-10-21 04:06 pm Headline Karnataka News Network ಕರ್ನಾಟಕ
ಬೆಳಗಾವಿ, ಅ.3: ಅದೃಷ್ಟ ಇದ್ದಲ್ಲಿ ಪಾತಾಳಕ್ಕೆ ಬಿದ್ದರೂ, ಬದುಕಿ ಬರ್ತಾರೆ ಎನ್ನುವ ಮಾತಿದೆ. ಅದೇ ಮಾತಿನಂತೆ, ಇಲ್ಲೊಬ್ಬ ಯುವಕ ಪ್ರಪಾತವನ್ನೇ ಮೈವೆತ್ತಿ ನಿಂತ ಗೋಕಾಕ್ ಫಾಲ್ಸ್ ಮಧ್ಯೆ 140 ಅಡಿ ಕಂದಕಕ್ಕೆ ಬಿದ್ದರೂ ಪವಾಡ ಸದೃಶ ಬದುಕಿ ಬಂದಿದ್ದಾನೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ನಲ್ಲಿ ಘಟನೆ ನಡೆದಿದ್ದು ಕಲ್ಲು ಬಂಡೆಗಳ ನಡುವೆ 140 ಅಡಿ ಕಂದಕಕ್ಕೆ ಬಿದ್ದರೂ ಯುವಕ ಬದುಕಿದ್ದು ಸ್ಥಳೀಯರಲ್ಲಿ ಅಚ್ಚರಿ ಸೃಷ್ಟಿಸಿದೆ.
ಬೆಳಗಾವಿ ಪೇಟೆಯಲ್ಲಿ ಬ್ಯಾಂಕ್ ನೌಕರನಾಗಿರುವ ಪ್ರದೀಪ ಸಾಗರ್ ಹೀಗೆ ದುರಂತದಲ್ಲಿ ಬದುಕಿ ಬಂದ ಯುವಕ. ಶನಿವಾರ ಸ್ನೇಹಿತರ ಜೊತೆಗೆ ಗೋಕಾಕ್ ಫಾಲ್ಸ್ ವೀಕ್ಷಣೆಗೆ ಬಂದಿದ್ದ ವೇಳೆ ಘಟನೆ ನಡೆದಿತ್ತು. ಕೂಡಲೇ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಗೋಕಾಕ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿ ವೇಳೆಯೇ ಕಾರ್ಯಾಚರಣೆ ನಡೆಸಿದ್ದಾರೆ.


ಆದರೆ, ರಾತ್ರಿ ಕತ್ತಲು ಕವಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಯುವಕನ ಮೇಲಿನ ಭರವಸೆಯೂ ಕ್ಷೀಣವಾಗಿತ್ತು. 140 ಅಡಿ ಆಳದ ಕಂದಕಕ್ಕೆ ಬಿದ್ದಿದ್ದ ಕಾರಣ ಯುವಕ ಪ್ರಜ್ಞೆ ಕಳೆದುಕೊಂಡಿದ್ದ. ಫೋನ್ ರಿಂಗ್ ಆಗ್ತಿದ್ರೂ ರಿಸಿವ್ ಮಾಡುತ್ತಿರಲಿಲ್ಲ. ಕಾರ್ಯಾಚರಣೆ ಸ್ಥಗಿತ ಆಗಿದ್ದರಿಂದ ಇಡೀ ರಾತ್ರಿ ಕಂದಕದಲ್ಲಿಯೇ ಉಳಿದಿದ್ದ ಪ್ರದೀಪ್ ಸಾಗರ್, ಬೆಳಗ್ಗೆ 4 ಗಂಟೆಗೆ ಪ್ರಜ್ಞೆ ಬಂದಾಗ ತಾನೇ ಸ್ನೇಹಿತರಿಗೆ ಫೋನ್ ಮಾಡಿದ್ದಾನೆ.
ಬಳಿಕ ಗೋಕಾಕದ ಸಾಮಾಜಿಕ ಕಾರ್ಯಕರ್ತ ಆಯೂಬ್ ಖಾನ್ ಹಾಗೂ ಪೊಲೀಸರು ಸೇರಿ ಪ್ರದೀಪನ ರಕ್ಷಣೆ ಮಾಡಿದ್ದಾರೆ. ಗೋಕಾಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ತಲೆಗೆ ಸಣ್ಣ ಪುಟ್ಟ ಗಾಯ ಆಗಿದ್ದು ಬಿಟ್ಟರೆ ಸುರಕ್ಷಿತವಾಗಿದ್ದಾನೆ. ಕಲ್ಲು ಬಂಡೆಗಳ ನಡುವೆ ಪ್ರಪಾತಕ್ಕೆ ಬಿದ್ದರೂ ಬದುಕಿ ಬಂದಿದ್ದು ಅಚ್ಚರಿಗೆ ಕಾರಣವಾಗಿದೆ.
Man survives after falling 140 feet tall from Gokak falls in Belagavi. He was rescued by the fire brigade team. He was found alive.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm