ಬ್ರೇಕಿಂಗ್ ನ್ಯೂಸ್
03-10-21 04:06 pm Headline Karnataka News Network ಕರ್ನಾಟಕ
ಬೆಳಗಾವಿ, ಅ.3: ಅದೃಷ್ಟ ಇದ್ದಲ್ಲಿ ಪಾತಾಳಕ್ಕೆ ಬಿದ್ದರೂ, ಬದುಕಿ ಬರ್ತಾರೆ ಎನ್ನುವ ಮಾತಿದೆ. ಅದೇ ಮಾತಿನಂತೆ, ಇಲ್ಲೊಬ್ಬ ಯುವಕ ಪ್ರಪಾತವನ್ನೇ ಮೈವೆತ್ತಿ ನಿಂತ ಗೋಕಾಕ್ ಫಾಲ್ಸ್ ಮಧ್ಯೆ 140 ಅಡಿ ಕಂದಕಕ್ಕೆ ಬಿದ್ದರೂ ಪವಾಡ ಸದೃಶ ಬದುಕಿ ಬಂದಿದ್ದಾನೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ನಲ್ಲಿ ಘಟನೆ ನಡೆದಿದ್ದು ಕಲ್ಲು ಬಂಡೆಗಳ ನಡುವೆ 140 ಅಡಿ ಕಂದಕಕ್ಕೆ ಬಿದ್ದರೂ ಯುವಕ ಬದುಕಿದ್ದು ಸ್ಥಳೀಯರಲ್ಲಿ ಅಚ್ಚರಿ ಸೃಷ್ಟಿಸಿದೆ.
ಬೆಳಗಾವಿ ಪೇಟೆಯಲ್ಲಿ ಬ್ಯಾಂಕ್ ನೌಕರನಾಗಿರುವ ಪ್ರದೀಪ ಸಾಗರ್ ಹೀಗೆ ದುರಂತದಲ್ಲಿ ಬದುಕಿ ಬಂದ ಯುವಕ. ಶನಿವಾರ ಸ್ನೇಹಿತರ ಜೊತೆಗೆ ಗೋಕಾಕ್ ಫಾಲ್ಸ್ ವೀಕ್ಷಣೆಗೆ ಬಂದಿದ್ದ ವೇಳೆ ಘಟನೆ ನಡೆದಿತ್ತು. ಕೂಡಲೇ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಗೋಕಾಕ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿ ವೇಳೆಯೇ ಕಾರ್ಯಾಚರಣೆ ನಡೆಸಿದ್ದಾರೆ.


ಆದರೆ, ರಾತ್ರಿ ಕತ್ತಲು ಕವಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಯುವಕನ ಮೇಲಿನ ಭರವಸೆಯೂ ಕ್ಷೀಣವಾಗಿತ್ತು. 140 ಅಡಿ ಆಳದ ಕಂದಕಕ್ಕೆ ಬಿದ್ದಿದ್ದ ಕಾರಣ ಯುವಕ ಪ್ರಜ್ಞೆ ಕಳೆದುಕೊಂಡಿದ್ದ. ಫೋನ್ ರಿಂಗ್ ಆಗ್ತಿದ್ರೂ ರಿಸಿವ್ ಮಾಡುತ್ತಿರಲಿಲ್ಲ. ಕಾರ್ಯಾಚರಣೆ ಸ್ಥಗಿತ ಆಗಿದ್ದರಿಂದ ಇಡೀ ರಾತ್ರಿ ಕಂದಕದಲ್ಲಿಯೇ ಉಳಿದಿದ್ದ ಪ್ರದೀಪ್ ಸಾಗರ್, ಬೆಳಗ್ಗೆ 4 ಗಂಟೆಗೆ ಪ್ರಜ್ಞೆ ಬಂದಾಗ ತಾನೇ ಸ್ನೇಹಿತರಿಗೆ ಫೋನ್ ಮಾಡಿದ್ದಾನೆ.
ಬಳಿಕ ಗೋಕಾಕದ ಸಾಮಾಜಿಕ ಕಾರ್ಯಕರ್ತ ಆಯೂಬ್ ಖಾನ್ ಹಾಗೂ ಪೊಲೀಸರು ಸೇರಿ ಪ್ರದೀಪನ ರಕ್ಷಣೆ ಮಾಡಿದ್ದಾರೆ. ಗೋಕಾಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ತಲೆಗೆ ಸಣ್ಣ ಪುಟ್ಟ ಗಾಯ ಆಗಿದ್ದು ಬಿಟ್ಟರೆ ಸುರಕ್ಷಿತವಾಗಿದ್ದಾನೆ. ಕಲ್ಲು ಬಂಡೆಗಳ ನಡುವೆ ಪ್ರಪಾತಕ್ಕೆ ಬಿದ್ದರೂ ಬದುಕಿ ಬಂದಿದ್ದು ಅಚ್ಚರಿಗೆ ಕಾರಣವಾಗಿದೆ.
Man survives after falling 140 feet tall from Gokak falls in Belagavi. He was rescued by the fire brigade team. He was found alive.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm