ಬ್ರೇಕಿಂಗ್ ನ್ಯೂಸ್
15-10-21 03:22 pm Mangaluru Correspondent ಕರ್ನಾಟಕ
ಮಂಡ್ಯ, ಅ.15: ಈವರೆಗಿನ ಸರ್ಕಾರಗಳಲ್ಲಿ ಇವರಂಥ ಬೋಗಸ್ ಸರ್ಕಾರವನ್ನ ನಾನು ನೋಡಿಲ್ಲ. ಮೈಸೂರಿನಲ್ಲಿ ಲೈಟ್ಸ್ ಹಾಕ್ತಾರೆ, ಜನ ಬರಲಿ ನೋಡಲಿ ಅಂತಾರೆ. ಮೆರವಣಿಗೆ ಮಾತ್ರ ಕೋಟೆ ಒಳಗೆ. ಕೊರೊನಾ ಬರುತ್ತೆ ಅಂತಾ ಹೇಳಾರೆ.. ಹೀಗೆಂದು ರಾಜ್ಯ ಸರ್ಕಾರದ ವಿರುದ್ಧ ಖ್ಯಾತ ಇತಿಹಾಸ ತಜ್ಞ ನಂಜೇರಾಜು ಅರಸ್ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಲೈಟ್ಸ್ ಹಾಕ್ತಾರೆ, ಜನ ಬರಲಿ ನೋಡಲಿ ಅಂತಾರೆ. ಲಕ್ಷಾಂತರ ಜನರೂ ಸೇರ್ತಾರೆ. ಮೆರವಣಿಗೆ ಮಾತ್ರ ಕೋಟೆ ಒಳಗೆ ಮಾಡ್ತಾರೆ. ಕೊರೊನಾ ಬರುತ್ತೆ ಅಂತಾ ಮೆರವಣಿಗೆ ನಿಷೇಧ ಮಾಡ್ತಾರೆ.
ಇವರು ಸಭೆ ಸಮಾರಂಭ ಮಾಡಿದ್ರೆ ಕೊರೊನಾ ಬರೋದಿಲ್ಲ.. ಜನರು ದಸರಾಗೆ ಬಂದ್ರೆ ಮಾತ್ರ ಕೊರೊನಾ ಅಂತೆ..! ಇದೆಲ್ಲಾ ಸರ್ಕಾರದ ನಾಟಕ, ಸರ್ಕಾರ ಜಾತ್ಯಾತೀತ ಸರ್ಕಾರ ಅಂತ ಸಂವಿಧಾನದಲ್ಲೇ ಹೇಳಿಕೊಳ್ತೀವಿ. ಆದರೆ ಇವರು ಒಂದು ಧರ್ಮದ ಧಾರ್ಮಿಕ ಆಚರಣೆಯನ್ನು ಸರಕಾರದವ್ರೇ ಮಾಡುತ್ತಾರೆ.

ಕಾನೂನು ಪ್ರಕಾರ ಮಾಡುವಂತಿಲ್ಲ, ಚಾಮುಂಡಿಯನ್ನ ಹಿಂದು ದೇವರು ಅಂತ ನೀವೇ ಕರಿಯುತ್ತೀರಿ.. ಧಾರ್ಮಿಕ ಉತ್ಸವ ಮಾಡುವುದಕ್ಕೆ ಸರ್ಕಾರಕ್ಕೆ ಹಕ್ಕಿಲ್ಲ. ಆದರೂ ಮಾಡ್ತಿದ್ದಾರೆ, ಇದು ತಪ್ಪು, ಸರಳ ದಸರಾ ಅಂದ್ರೆ ಇದಲ್ಲ.
ಅರಮನೆಯಲ್ಲಿ ಕೊರೊನಾ ಬರಲ್ಲ, ಹೊರಗೆ ಕೊರೊನಾ ಬರುತ್ತೆ ಎನ್ನುವುದು ಮೂರ್ಖತನ. ಸಾವಿರಾರು ಜನ ಲೈಟಿಂಗ್ ನೋಡೋಕೆ ಹೋಗ್ತಿದ್ದಾರೆ. ಲೈಟ್ ಹಾಕಿದ್ದಿವಿ ನೋಡಿ ಬನ್ನಿಯಂತ ಸರ್ಕಾರವೇ ಕರೀತಿದ್ದಾರೆ. ಹೀಗೆ ಜನರು ಒಂದೇ ಕಡೆ ಸೇರಿದ್ರೆ ಕೊರೊನಾ ಬರಲ್ವಾ..? ಮೆರವಣಿಗೆ ಮಾಡಿದ್ರೆ ಮಾತ್ರನಾ ಕೊರೊನಾ ಬರೋದು ಅಂತ ನಂಜೇರಾಜ್ ಅರಸ್ ಕಿಡಿಕಾರಿದ್ದಾರೆ.
ಸರ್ಕಾರಕ್ಕೆ ಒಳ್ಳೆಯ ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಇಲ್ಲ. ಯಾರು ಏನೋ ಹೇಳ್ತಾರೆ, ಹಾಗೆ ನಿರ್ಧಾರವನ್ನು ತೆಗೆದುಕೊಳ್ತಾರೆ. ದಸರಾ ಆಚರಣೆ ಮಾಡೋವಾಗಿದ್ರೆ, ಬನ್ನಿ ಮಂಟಪದ ವರೆಗೆ ಮೆರವಣಿಗೆಯಲ್ಲಿ ಆನೆ ತೆಗೆದುಕೊಂಡು ಹೋಗಬೇಕಿತ್ತು. ಎಲ್ಲದಕ್ಕೂ ವ್ಯವಸ್ಥೆ ಮಾಡಿ, ಎಲ್ಲದಕ್ಕೂ ಅವಕಾಶ ಮಾಡಿ ಇದು ಮಾತ್ರ ಯಾಕೆ ಮಾಡ್ತಿಲ್ಲ, ಇಷ್ಟಕ್ಕೆ ಮಾತ್ರ ಯಾಕೆ ಸೀಮಿತ ಮಾಡುದ್ರಿ. ಸರ್ಕಾರದ ಈ ಧೋರಣೆಯನ್ನು ನಾನು ಒಪ್ಪುವುದಿಲ್ಲ ಎಂದು ಮೈಸೂರಿನ ಇತಿಹಾಸದ ಬಗ್ಗೆ ನಿರರ್ಗಳವಾಗಿ ಮಾತನಾಡುವ, ಅದರ ಬಗ್ಗೆ ಅಧ್ಯಯನ ಮಾಡಿ ಖ್ಯಾತಿ ಗಳಿಸಿರುವ ನಂಜೇರಾಜ ಅರಸ್ ಸರಕಾರ ನಿರ್ಧಾರವನ್ನು ಟೀಕಿಸಿದ್ದಾರೆ.
Dasara 2021 Prof P V Nanjaraj Urs slams BJP Govt says is there no Corona in Procession
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm