ಬ್ರೇಕಿಂಗ್ ನ್ಯೂಸ್
18-10-21 05:32 pm Bengaluru Correspondent ಕರ್ನಾಟಕ
ಬೆಂಗಳೂರು, ಅ.18: ಕೊರೊನಾ ಭೀತಿಯ ಎರಡು ವರ್ಷದ ಬಳಿಕ ಅಂತೂ ಪುಟಾಣಿ ಮಕ್ಕಳ ಶಾಲೆ ಆರಂಭಕ್ಕೆ ಮುಹೂರ್ತ ರೆಡಿಯಾಗಿದೆ. ಇದೇ ಅಕ್ಟೋಬರ್ 25 ರಿಂದ ಒಂದರಿಂದ ಐದನೇ ತರಗತಿ ವರೆಗೆ ರಾಜ್ಯದಲ್ಲಿ ಪ್ರಾಥಮಿಕ ಶಾಲೆ ಆರಂಭಿಸಲು ಸರ್ಕಾರ ಅಧಿಕೃತ ಅನುಮತಿ ನೀಡಿದೆ.
2020 ರಲ್ಲಿ ಪ್ರಾಥಮಿಕ ಶಾಲೆ ಪೂರ್ತಿಯಾಗಿ ಬಂದ್ ಆಗಿತ್ತು. ಈ ಬಾರಿ ಮಾರ್ಚ್ ನಲ್ಲಿ ಮತ್ತೆ ಎರಡನೇ ಅಲೆ ಕಾಣಿಸಿಕೊಂಡ ಕಾರಣ ಮತ್ತೆ ಶಾಲೆ ರದ್ದು ಆಗಿತ್ತು. ಹೀಗಾಗಿ ಒಂದೂವರೆ ವರ್ಷದ ಬಳಿಕ ಪೂರ್ತಿ ಬಂದ್ ಆಗಿದ್ದ ಪ್ರಾಥಮಿಕ ಶಾಲೆಯನ್ನು ಇದೀಗ ತೆರೆಯಲಾಗುತ್ತಿದೆ. 1 ರಿಂದ 5ನೇ ತರಗತಿ ಶಾಲೆ ನಡೆಸಲು ರಾಜ್ಯ ಸರ್ಕಾರ ಇಂದು ತಜ್ಞರ ಜೊತೆಗಿನ ಸಭೆಯ ಬಳಿಕ ಅನುಮತಿ ನೀಡಿದೆ.
ಆದರೆ, ಶಾಲೆಗೆ ಮಕ್ಕಳನ್ನು ಕಳಿಸಿಕೊಡುವ ನಿರ್ಧಾರ ಪೋಷಕರುಗೆ ಬಿಡಲಾಗಿದೆ. ಯಾವುದೇ ಶಾಲೆಯಲ್ಲಿ ಮಕ್ಕಳ ಹಾಜರಾತಿಗೆ ಕಡ್ಡಾಯ ಮಾಡುವಂತಿಲ್ಲ. ಅಲ್ಲದೆ, ತರಗತಿಯಲ್ಲಿ ಶೇಕಡ 50 ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ತರಗತಿಯಲ್ಲಿ 1 ಮೀಟರ್ ಅಂತರದಲ್ಲಿ ಕೂರಬೇಕು. ಮಾಸ್ಕ್ ಕಡ್ಡಾಯವಾಗಿ ಬಳಕೆ ಮಾಡಬೇಕು.
ಪ್ರವೇಶ ದ್ವಾರಗಳಲ್ಲಿ ಸೇರದಂತೆ ಶಾಲೆಯ ಒಳಗೆ, ಆವರಣದಲ್ಲಿ, ತರಗತಿಗಳ ಒಳಗೆ ಗುಂಪು ಕೂಡುವಂತಿಲ್ಲ. ಶಿಕ್ಷಕರು ಮತ್ತು ಸಿಬಂದಿ ಕೊರೊನಾ ಲಸಿಕೆಯ ಎರಡು ಡೋಸನ್ನೂ ಪಡೆದಿರಬೇಕು. ಎರಡು ಡೋಸ್ ಪೂರ್ಣ ಮಾಡಿರುವ ಶಿಕ್ಷಕರು, ಸ್ಟಾಫ್ ಗೆ ಮಾತ್ರ 1-5 ತರಗತಿಗಳೊಳಗೆ ಪ್ರವೇಶ ಕಲ್ಪಿಸಲಾಗಿದೆ.
ದಸರಾ ರಜೆಯ ಬಳಿಕ ಪ್ರಾಥಮಿಕ ಶಾಲೆ ಆರಂಭದ ಬಗ್ಗೆ ನಿರ್ಧಾರ ಮಾಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದರು. ಇದೀಗ ಶಿಕ್ಷಣ ಇಲಾಖೆಯಿಂದ ನೇರ ಆದೇಶ ಹೊರಬಿದ್ದಿದೆ.
Karnataka Primary Schools have been allowed to reopen from this Thursday – October 21, 2021. The government has released a notice informing everyone that the decision. Check details here.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm