ಬ್ರೇಕಿಂಗ್ ನ್ಯೂಸ್
18-10-21 05:32 pm Bengaluru Correspondent ಕರ್ನಾಟಕ
ಬೆಂಗಳೂರು, ಅ.18: ಕೊರೊನಾ ಭೀತಿಯ ಎರಡು ವರ್ಷದ ಬಳಿಕ ಅಂತೂ ಪುಟಾಣಿ ಮಕ್ಕಳ ಶಾಲೆ ಆರಂಭಕ್ಕೆ ಮುಹೂರ್ತ ರೆಡಿಯಾಗಿದೆ. ಇದೇ ಅಕ್ಟೋಬರ್ 25 ರಿಂದ ಒಂದರಿಂದ ಐದನೇ ತರಗತಿ ವರೆಗೆ ರಾಜ್ಯದಲ್ಲಿ ಪ್ರಾಥಮಿಕ ಶಾಲೆ ಆರಂಭಿಸಲು ಸರ್ಕಾರ ಅಧಿಕೃತ ಅನುಮತಿ ನೀಡಿದೆ.
2020 ರಲ್ಲಿ ಪ್ರಾಥಮಿಕ ಶಾಲೆ ಪೂರ್ತಿಯಾಗಿ ಬಂದ್ ಆಗಿತ್ತು. ಈ ಬಾರಿ ಮಾರ್ಚ್ ನಲ್ಲಿ ಮತ್ತೆ ಎರಡನೇ ಅಲೆ ಕಾಣಿಸಿಕೊಂಡ ಕಾರಣ ಮತ್ತೆ ಶಾಲೆ ರದ್ದು ಆಗಿತ್ತು. ಹೀಗಾಗಿ ಒಂದೂವರೆ ವರ್ಷದ ಬಳಿಕ ಪೂರ್ತಿ ಬಂದ್ ಆಗಿದ್ದ ಪ್ರಾಥಮಿಕ ಶಾಲೆಯನ್ನು ಇದೀಗ ತೆರೆಯಲಾಗುತ್ತಿದೆ. 1 ರಿಂದ 5ನೇ ತರಗತಿ ಶಾಲೆ ನಡೆಸಲು ರಾಜ್ಯ ಸರ್ಕಾರ ಇಂದು ತಜ್ಞರ ಜೊತೆಗಿನ ಸಭೆಯ ಬಳಿಕ ಅನುಮತಿ ನೀಡಿದೆ.
ಆದರೆ, ಶಾಲೆಗೆ ಮಕ್ಕಳನ್ನು ಕಳಿಸಿಕೊಡುವ ನಿರ್ಧಾರ ಪೋಷಕರುಗೆ ಬಿಡಲಾಗಿದೆ. ಯಾವುದೇ ಶಾಲೆಯಲ್ಲಿ ಮಕ್ಕಳ ಹಾಜರಾತಿಗೆ ಕಡ್ಡಾಯ ಮಾಡುವಂತಿಲ್ಲ. ಅಲ್ಲದೆ, ತರಗತಿಯಲ್ಲಿ ಶೇಕಡ 50 ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ತರಗತಿಯಲ್ಲಿ 1 ಮೀಟರ್ ಅಂತರದಲ್ಲಿ ಕೂರಬೇಕು. ಮಾಸ್ಕ್ ಕಡ್ಡಾಯವಾಗಿ ಬಳಕೆ ಮಾಡಬೇಕು.
ಪ್ರವೇಶ ದ್ವಾರಗಳಲ್ಲಿ ಸೇರದಂತೆ ಶಾಲೆಯ ಒಳಗೆ, ಆವರಣದಲ್ಲಿ, ತರಗತಿಗಳ ಒಳಗೆ ಗುಂಪು ಕೂಡುವಂತಿಲ್ಲ. ಶಿಕ್ಷಕರು ಮತ್ತು ಸಿಬಂದಿ ಕೊರೊನಾ ಲಸಿಕೆಯ ಎರಡು ಡೋಸನ್ನೂ ಪಡೆದಿರಬೇಕು. ಎರಡು ಡೋಸ್ ಪೂರ್ಣ ಮಾಡಿರುವ ಶಿಕ್ಷಕರು, ಸ್ಟಾಫ್ ಗೆ ಮಾತ್ರ 1-5 ತರಗತಿಗಳೊಳಗೆ ಪ್ರವೇಶ ಕಲ್ಪಿಸಲಾಗಿದೆ.
ದಸರಾ ರಜೆಯ ಬಳಿಕ ಪ್ರಾಥಮಿಕ ಶಾಲೆ ಆರಂಭದ ಬಗ್ಗೆ ನಿರ್ಧಾರ ಮಾಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದರು. ಇದೀಗ ಶಿಕ್ಷಣ ಇಲಾಖೆಯಿಂದ ನೇರ ಆದೇಶ ಹೊರಬಿದ್ದಿದೆ.
Karnataka Primary Schools have been allowed to reopen from this Thursday – October 21, 2021. The government has released a notice informing everyone that the decision. Check details here.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm