ಬ್ರೇಕಿಂಗ್ ನ್ಯೂಸ್
19-10-21 04:53 pm Headline Karnataka News Network ಕರ್ನಾಟಕ
ಢಾಕಾ, ಅ.19: ಬಾಂಗ್ಲಾದೇಶದಲ್ಲಿ ಹಿಂದುಗಳ ಮನೆ, ದೇವಸ್ಥಾನಗಳ ಮೇಲೆ ದಾಳಿ ಮುಂದುವರಿದಿದ್ದು, ಪ್ರವಾದಿ ನಿಂದನೆ ನೆಪ ಇಟ್ಟುಕೊಂಡು ಜನಾಂಗೀಯ ಹಿಂಸೆ ನಡೆದಿದೆ. ಹಿಂದುಗಳನ್ನು ಗುರಿಯಾಗಿಸಿ ಉದ್ರಿಕ್ತರ ಗುಂಪು ಮನೆಗಳ ಮೇಲೆ ದಾಳಿ ನಡೆಸುತ್ತಿದ್ದಾರೆ.
ಬಾಂಗ್ಲಾ ರಾಜಧಾನಿ ಢಾಕಾದಿಂದ 255 ಕಿಮೀ ದೂರದ ರಂಗ್ ಪುರ್ ಜಿಲ್ಲೆಯಲ್ಲಿ ಕನಿಷ್ಠ 66 ಹಿಂದುಗಳ ಮನೆಗಳ ಮೇಲೆ ದಾಳಿ ನಡೆಸಿ, ಹಾನಿ ಮಾಡಿದ್ದಾರೆ. ಹಿಂದು ಮೀನುಗಾರನೊಬ್ಬ ಫೇಸ್ಬುಕ್ ನಲ್ಲಿ ಪ್ರವಾದಿಗೆ ಅಗೌರವದಿಂದ ಪೋಸ್ಟ್ ಮಾಡಿದ್ದಾನೆಂಬ ವಿಚಾರದಲ್ಲಿ ಕಿಡಿಗೇಡಿಗಳು ವದಂತಿಗಳನ್ನು ಹರಡಿದ್ದು, ಮುಸ್ಲಿಮ್ ಉದ್ರಿಕ್ತರ ಗುಂಪು ದಾಳಿ ನಡೆಸಿದೆ. ಪೊಲೀಸರು ಜೊತೆಗಿದ್ದರೂ, ಅವರನ್ನು ಲೆಕ್ಕಿಸದೆ ಮನೆಗಳಿಗೆ ಬೆಂಕಿ ಹಚ್ಚುತ್ತಿದ್ದು ಅಲ್ಲಿದ್ದ ನಿವಾಸಿಗಳ ಮೇಲೆ ಪೀಡನೆ ನೀಡುತ್ತಿದ್ದಾರೆ. ರಂಗ್ ಪುರ್ ಜಿಲ್ಲೆಯ ಪಿರ್ಗಾಂಜ್ ಮಜಿಪಾರ ಎಂಬ ಗ್ರಾಮದಲ್ಲಿ 29 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದಾಗಿ ಇಂಡಿಯಾ ಟುಡೇ ಹೇಳಿದೆ.



ಮೊನ್ನೆ ಭಾನುವಾರ ನಾನೌರ್ ದಿಘಿ ಸರೋವರದ ಬಳಿಯ ಕುಮಿಲಾ ಎಂಬಲ್ಲಿ ದುರ್ಗಾ ಪೂಜೆ ನಡೆಸುತ್ತಿದ್ದ ಪೆಂಡಾಲ್ ಮೇಲೆ ಗುಂಪು ದಾಳಿ ನಡೆಸಿದ್ದು, ಅಲ್ಲಿ ಮೂರು ಮಂದಿಯನ್ನು ಹತ್ಯೆ ಮಾಡಲಾಗಿತ್ತು. ದುರ್ಗಾ ಪೂಜೆಯ ಪೆಂಡಾಲ್ ನಲ್ಲಿ ಖುರಾನ್ ಪುಸ್ತಕಕ್ಕೆ ಅವಮಾನ ಮಾಡಲಾಗಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಕಿಡಿಗೇಡಿಗಳು ವದಂತಿ ಹಬ್ಬಿಸಿದ್ದರು. ಅದನ್ನು ನಂಬಿದ್ದ ಮತಾಂಧರು ದುರ್ಗಾ ಪೂಜೆ ನಡೆಸುತ್ತಿದ್ದ ಜಾಗಕ್ಕೆ ದಾಳಿ ನಡೆಸಿದ್ದರು. ಕುಮಿಲ್ಲಾದ ಹಿಂಸಾಚಾರ ಘಟನೆಯ ಬೆನ್ನಲ್ಲೇ ಚಾಂದ್ ಪುರದ ಹಜೀಗಂಜ್, ಚತ್ತೋಗ್ರಾಮ್ ಜಿಲ್ಲೆಯ ಬನ್ಶಕಾಳಿ, ಕೋಕ್ಸ್ ಬಜಾರಿನ ಪೆಕುವಾ ಎಂಬಲ್ಲಿನ ದೇವಸ್ಥಾನಗಳಿಗೂ ದಾಳಿ ನಡೆಸಲಾಗಿದ್ದು ಜಖಂ ಮಾಡಲಾಗಿದೆ.
ಕಳೆದ ಶುಕ್ರವಾರ ಚಿತ್ತಗಾಂಗ್ ಜಿಲ್ಲೆಯ ನೋಕಾಲಿ ಎಂಬಲ್ಲಿ ಇಸ್ಕಾನ್ ದೇವಸ್ಥಾನದ ಮೇಲೆ ಬೆಂಕಿ ಹಚ್ಚಲಾಗಿತ್ತು. ಇಸ್ಕಾನ್ ಮಂದಿರದಲ್ಲಿ ದುರ್ಗಾ ಪೂಜೆ ನಡೆಸುತ್ತಿದ್ದಾಗ 500 ಮಂದಿಯಷ್ಟಿದ್ದ ಉದ್ರಿಕ್ತರ ಗುಂಪು ದಾಳಿ ನಡೆಸಿದ್ದು, ಬೆಂಕಿ ಹಚ್ಚಿದ್ದಲ್ಲದೆ, ಅಲ್ಲಿದ್ದ ಇಸ್ಕಾನ್ ಅರ್ಚಕರ ಮೇಲೆ ಚೂರಿಯಿಂದ ಇರಿದು ಕೊಲ್ಲಲಾಗಿತ್ತು.
Amid outrage over the incidents of temple vandalism in Bangladesh, a group of assailants vandalised at least 66 homes and torched 20 homes of Hindus in the country on Sunday over an alleged blasphemous social media post.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm