ಬ್ರೇಕಿಂಗ್ ನ್ಯೂಸ್
19-10-21 04:53 pm Headline Karnataka News Network ಕರ್ನಾಟಕ
ಢಾಕಾ, ಅ.19: ಬಾಂಗ್ಲಾದೇಶದಲ್ಲಿ ಹಿಂದುಗಳ ಮನೆ, ದೇವಸ್ಥಾನಗಳ ಮೇಲೆ ದಾಳಿ ಮುಂದುವರಿದಿದ್ದು, ಪ್ರವಾದಿ ನಿಂದನೆ ನೆಪ ಇಟ್ಟುಕೊಂಡು ಜನಾಂಗೀಯ ಹಿಂಸೆ ನಡೆದಿದೆ. ಹಿಂದುಗಳನ್ನು ಗುರಿಯಾಗಿಸಿ ಉದ್ರಿಕ್ತರ ಗುಂಪು ಮನೆಗಳ ಮೇಲೆ ದಾಳಿ ನಡೆಸುತ್ತಿದ್ದಾರೆ.
ಬಾಂಗ್ಲಾ ರಾಜಧಾನಿ ಢಾಕಾದಿಂದ 255 ಕಿಮೀ ದೂರದ ರಂಗ್ ಪುರ್ ಜಿಲ್ಲೆಯಲ್ಲಿ ಕನಿಷ್ಠ 66 ಹಿಂದುಗಳ ಮನೆಗಳ ಮೇಲೆ ದಾಳಿ ನಡೆಸಿ, ಹಾನಿ ಮಾಡಿದ್ದಾರೆ. ಹಿಂದು ಮೀನುಗಾರನೊಬ್ಬ ಫೇಸ್ಬುಕ್ ನಲ್ಲಿ ಪ್ರವಾದಿಗೆ ಅಗೌರವದಿಂದ ಪೋಸ್ಟ್ ಮಾಡಿದ್ದಾನೆಂಬ ವಿಚಾರದಲ್ಲಿ ಕಿಡಿಗೇಡಿಗಳು ವದಂತಿಗಳನ್ನು ಹರಡಿದ್ದು, ಮುಸ್ಲಿಮ್ ಉದ್ರಿಕ್ತರ ಗುಂಪು ದಾಳಿ ನಡೆಸಿದೆ. ಪೊಲೀಸರು ಜೊತೆಗಿದ್ದರೂ, ಅವರನ್ನು ಲೆಕ್ಕಿಸದೆ ಮನೆಗಳಿಗೆ ಬೆಂಕಿ ಹಚ್ಚುತ್ತಿದ್ದು ಅಲ್ಲಿದ್ದ ನಿವಾಸಿಗಳ ಮೇಲೆ ಪೀಡನೆ ನೀಡುತ್ತಿದ್ದಾರೆ. ರಂಗ್ ಪುರ್ ಜಿಲ್ಲೆಯ ಪಿರ್ಗಾಂಜ್ ಮಜಿಪಾರ ಎಂಬ ಗ್ರಾಮದಲ್ಲಿ 29 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದಾಗಿ ಇಂಡಿಯಾ ಟುಡೇ ಹೇಳಿದೆ.



ಮೊನ್ನೆ ಭಾನುವಾರ ನಾನೌರ್ ದಿಘಿ ಸರೋವರದ ಬಳಿಯ ಕುಮಿಲಾ ಎಂಬಲ್ಲಿ ದುರ್ಗಾ ಪೂಜೆ ನಡೆಸುತ್ತಿದ್ದ ಪೆಂಡಾಲ್ ಮೇಲೆ ಗುಂಪು ದಾಳಿ ನಡೆಸಿದ್ದು, ಅಲ್ಲಿ ಮೂರು ಮಂದಿಯನ್ನು ಹತ್ಯೆ ಮಾಡಲಾಗಿತ್ತು. ದುರ್ಗಾ ಪೂಜೆಯ ಪೆಂಡಾಲ್ ನಲ್ಲಿ ಖುರಾನ್ ಪುಸ್ತಕಕ್ಕೆ ಅವಮಾನ ಮಾಡಲಾಗಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಕಿಡಿಗೇಡಿಗಳು ವದಂತಿ ಹಬ್ಬಿಸಿದ್ದರು. ಅದನ್ನು ನಂಬಿದ್ದ ಮತಾಂಧರು ದುರ್ಗಾ ಪೂಜೆ ನಡೆಸುತ್ತಿದ್ದ ಜಾಗಕ್ಕೆ ದಾಳಿ ನಡೆಸಿದ್ದರು. ಕುಮಿಲ್ಲಾದ ಹಿಂಸಾಚಾರ ಘಟನೆಯ ಬೆನ್ನಲ್ಲೇ ಚಾಂದ್ ಪುರದ ಹಜೀಗಂಜ್, ಚತ್ತೋಗ್ರಾಮ್ ಜಿಲ್ಲೆಯ ಬನ್ಶಕಾಳಿ, ಕೋಕ್ಸ್ ಬಜಾರಿನ ಪೆಕುವಾ ಎಂಬಲ್ಲಿನ ದೇವಸ್ಥಾನಗಳಿಗೂ ದಾಳಿ ನಡೆಸಲಾಗಿದ್ದು ಜಖಂ ಮಾಡಲಾಗಿದೆ.
ಕಳೆದ ಶುಕ್ರವಾರ ಚಿತ್ತಗಾಂಗ್ ಜಿಲ್ಲೆಯ ನೋಕಾಲಿ ಎಂಬಲ್ಲಿ ಇಸ್ಕಾನ್ ದೇವಸ್ಥಾನದ ಮೇಲೆ ಬೆಂಕಿ ಹಚ್ಚಲಾಗಿತ್ತು. ಇಸ್ಕಾನ್ ಮಂದಿರದಲ್ಲಿ ದುರ್ಗಾ ಪೂಜೆ ನಡೆಸುತ್ತಿದ್ದಾಗ 500 ಮಂದಿಯಷ್ಟಿದ್ದ ಉದ್ರಿಕ್ತರ ಗುಂಪು ದಾಳಿ ನಡೆಸಿದ್ದು, ಬೆಂಕಿ ಹಚ್ಚಿದ್ದಲ್ಲದೆ, ಅಲ್ಲಿದ್ದ ಇಸ್ಕಾನ್ ಅರ್ಚಕರ ಮೇಲೆ ಚೂರಿಯಿಂದ ಇರಿದು ಕೊಲ್ಲಲಾಗಿತ್ತು.
Amid outrage over the incidents of temple vandalism in Bangladesh, a group of assailants vandalised at least 66 homes and torched 20 homes of Hindus in the country on Sunday over an alleged blasphemous social media post.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm