ಬ್ರೇಕಿಂಗ್ ನ್ಯೂಸ್
24-10-21 04:33 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಅ.24 : ಕೋವಿಡ್ ಬಂದ ಬಳಿಕ ದೇಹದಲ್ಲಿ ಪ್ರತಿರೋಧ ಶಕ್ತಿ ಹೆಚ್ಚಿಸಲೆಂದು ಇಮ್ಯುನಿಟಿ ಬೂಸ್ಟರ್ ಮಾದರಿಯ ಹಲವಾರು ಔಷಧಿಗಳು ಮಾರುಕಟ್ಟೆಗೆ ಬಂದಿದ್ದವು. ಆದರೆ, ಕಾರ್ಮಿಕ ಇಲಾಖೆಯಿಂದ ಕೊಡಲಾಗಿದ್ದ ಇಮ್ಯೂನಿಟಿ ಬೂಸ್ಟರ್ ಕುಡಿದ ಎಂಟು ಜನ ಕಾರ್ಮಿಕರು ಅಸ್ವಸ್ಥರಾಗಿರುವ ಘಟನೆ ಬೆಳಕಿಗೆ ಬಂದಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಾಜ್ಯ ಸರ್ಕಾರ ಕಾರ್ಮಿಕ ಕಲ್ಯಾಣ ಇಲಾಖೆಯ ಮೂಲಕ ರಾಜ್ಯದಾದ್ಯಂತ ಕಟ್ಟಡ ಹಾಗೂ ಇನ್ನಿತರ ಕಾರ್ಮಿಕರಿಗೆ ಇಮ್ಯೂನಿಟಿ ಬೂಸ್ಟರ್ ಇರುವ ಕಿಟ್ ಗಳನ್ನು ವಿತರಣೆ ಮಾಡಿತ್ತು. ಅದರಂತೆ ಕೋಟೆನಾಡು ಚಿತ್ರದುರ್ಗದಲ್ಲೂ ಅ.8ರಂದು ಜಿಪಂ ಸಭಾಂಗಣದಲ್ಲಿ ಸುಮಾರು 800 ಜನ ಕಾರ್ಮಿಕರಿಗೆ ಇಮ್ಯೂನಿಟಿ ಬೂಸ್ಟರ್ ಕಿಟ್ ಗಳನ್ನು ವಿತರಿಸಲಾಗಿತ್ತು. ಆದರೆ ಕಾರ್ಮಿಕರು ಹಬ್ಬವಿದ್ದುದರಿಂದ ಅದನ್ನು ತಕ್ಷಣವೇ ಕುಡಿಯದೇ ನಿನ್ನೆ ಕೆಲವು ಕಡೆ ಕಾಯಿಸಿ ಕುಡಿದಿದ್ದಾರೆ. ಕುಡಿದ ಬೆನ್ನಲ್ಲೇ ವಾಂತಿ ಭೇದಿ ಶುರುವಾಗಿದ್ದು, ಎಲ್ಲರೂ ಒಂದೇ ಬಾರಿಗೆ ಬಂದು ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಲಾಖೆಯಿಂದ ಕೊಟ್ಟಿರುವ ಡಬ್ಬಗಳ ಪುಡಿಯಲ್ಲಿ ಪ್ಲಾಸ್ಟಿಕ್ ಮಿಶ್ರಣವೂ ಇದೆ. ಕಳಪೆಯಿಂದ ಕೂಡಿರುವ ಮಿಶ್ರಣವನ್ನು ಕೊಟ್ಟಿದ್ದಾರೆ. ಇದನ್ನು ಕುಡಿದ ಮೇಲೆ ನಮಗೆ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ ಎಂದು ಕಟ್ಡಡ ಕಾರ್ಮಿಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕುಮಾರ್ ಆರೋಪಿಸಿದ್ದಾರೆ.
ಎಂಟು ಜನ ಕಾರ್ಮಿಕರು ಇಮ್ಯೂನಿಟಿ ಬೂಸ್ಟರ್ ಕುಡಿದು ಆಸ್ಪತ್ರೆ ದಾಖಲಾಗಿರುವ ವಿಷಯ ತಿಳಿಯುತ್ತಿದ್ದಂತೆ ಗುಲ್ಬಾರ್ಗದಿಂದ ಕಾರ್ಮಿಕ ಕಲ್ಯಾಣ ಇಲಾಖೆಯ ಉಪ ಆಯುಕ್ತ ನಾಗೇಶ್ ಆಗಮಿಸಿದ್ದು ಕಾರ್ಮಿಕರ ಆರೋಗ್ಯ ವಿಚಾರಿಸಿದ್ದಾರೆ. ಇಲಾಖೆಯಿಂದ ಕೊಟ್ಟಿರುವ ಇಮ್ಯುನಿಟಿ ಬೂಸ್ಟರ್ ಡಬ್ಬಗಳು ಹಾಗೂ ಅವುಗಳ ಪುಡಿಯನ್ನು ಪರಿಶೀಲಿಸಿದರು. ಈ ಬಗ್ಗೆ ಮಾಹಿತಿ ನೀಡಿದ ಅಧಿಕಾರಿ, ಸರ್ಕಾರದ ನಿರ್ದೇಶನದಂತೆ ಕಾರ್ಮಿಕರಿಗೆ ಕಿಟ್ ಗಳನ್ನು ನೀಡಲಾಗಿದ್ದು, ರಾಜ್ಯದಲ್ಲಿ ಯಾವುದೇ ದೂರುಗಳು ಬಂದಿಲ್ಲ. ಆದರೆ ಚಿತ್ರದುರ್ಗದಲ್ಲಿ ಮಾತ್ರ ಈ ಘಟನೆ ಸಂಭವಿಸಿದೆ. ನಿಖರ ಕಾರಣ ತಿಳಿದು ಬರುವವರೆಗೂ ಉಳಿದ ನಾಲ್ಕೂವರೆ ಸಾವಿರ ಕಿಟ್ ಗಳ ಹಂಚಿಕೆಯನ್ನು ನಿಲ್ಲಿಸಲಾಗಿದೆ ಎಂದು ಕಾರ್ಮಿಕ ಇಲಾಖೆಯ ನಾಗೇಶ್ ತಿಳಿಸಿದ್ದಾರೆ.
Eight workers who drank an Immunity Booster which is given by labour department have been hospitalized.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm