ಬ್ರೇಕಿಂಗ್ ನ್ಯೂಸ್
26-10-21 01:42 pm Bengaluru Correspondent ಕರ್ನಾಟಕ
ಬೆಂಗಳೂರು, ಅ.26: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕರಾವಳಿಯ ಹವ್ಯಕ ಬ್ರಾಹ್ಮಣರ ಜೊತೆ ಸಂಬಂಧ ಬೆಳೆಸಿದ್ದಾರೆ. ದಲಿತ ಸಮುದಾಯದ ಖರ್ಗೆಯವರ ಮೊಮ್ಮಗಳ ವಿವಾಹ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಹವ್ಯಕ ಬ್ರಾಹ್ಮಣ ಯುವಕನ ಜೊತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಲೋಕಸಭೆಯ ಪ್ರತಿಪಕ್ಷದ ನಾಯಕ ಖರ್ಗೆ ಹವ್ಯಕ ಬ್ರಾಹ್ಮಣರ ಮನೆಯ ಬೀಗರಾಗಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಯವರ ಪುತ್ರಿ ಜಯಶ್ರೀ ಮತ್ತು ರಾಧಾಕೃಷ್ಣ ದಂಪತಿಯ ಪುತ್ರಿ ಪ್ರಾರ್ಥನಾರನ್ನು ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಗಿಲ್ಕಿಂಜ ಮನೆಯ ಕುಟುಂಬದ ಯುವಕ ಪಾಣಿನಿ ಭಟ್ ವರಿಸಿದ್ದಾರೆ. ಗಿಲ್ಕಿಂಜ ಮನೆಯ ಎ.ಟಿ. ಹರಿಶಂಕರ ಮತ್ತು ವಿಜಯಲಕ್ಷ್ಮೀ ದಂಪತಿಯ ಪುತ್ರ ಪಾಣಿನಿ ಭಟ್ ಬೆಂಗಳೂರಿನಲ್ಲಿ ಕಂಪನಿಯೊಂದರಲ್ಲಿ ಕೆಲಸದಲ್ಲಿದ್ದಾರೆ.

ಪಾಣಿನಿ ಭಟ್ ಮತ್ತು ಪ್ರಾರ್ಥನಾ ಒಂದೇ ಕಂಪನಿಯಲ್ಲಿ ಕೆಲಸಕ್ಕಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿಯ ವಿಷಯವನ್ನು ಎರಡೂ ಕುಟುಂಬಗಳಿಗೆ ತಿಳಿಸಿ, ಮದುವೆಗೆ ಒಪ್ಪಿಸಿದ್ದಾರೆ. ದಲಿತ ವರ್ಗದ ಹುಡುಗಿಯನ್ನು ಕಟ್ಟರ್ ಬ್ರಾಹ್ಮಣರೆಂದು ಎನಿಸಿಕೊಂಡಿರುವ ಹವ್ಯಕ ಕುಟುಂಬ ಸೊಸೆಯಾಗಿ ಸ್ವೀಕರಿಸಿದ್ದು, ಎರಡೂ ಕುಟುಂಬಗಳ ಸಮ್ಮತಿಯಿಂದ ಅದ್ದೂರಿಯಿಂದ ಮದುವೆ ಕಾರ್ಯ ಜರುಗಿದೆ.

ಮದುವೆ ಸಮಾರಂಭದಲ್ಲಿ ಕಾಂಗ್ರೆಸ್ ಪ್ರಮುಖರಾದ ವೀರಪ್ಪ ಮೊಯ್ಲಿ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.
Mallikarjun Kharge Grand Daughter wedding in Bangalore groom Native of Bantwal Mangalore. Congress and BJP leaders were seen in the wedding.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm