ಬ್ರೇಕಿಂಗ್ ನ್ಯೂಸ್
28-10-21 04:14 pm H K News Desk ಕರ್ನಾಟಕ
ಕಾರವಾರ, ಅ.28: ಕುಮಟಾ ಪಟ್ಟಣದ ಪಾಲಿಟೆಕ್ನಿಕ್ ಕಾಲೇಜಿನ ಹಿಂಭಾಗದಲ್ಲಿ ಪತ್ತೆಯಾದ ವಸ್ತು ಬಾಂಬ್ ಅಲ್ಲ. ಅದರಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಯಾರೋ ಕಿಡಿಗೇಡಿಗಳು ಮಾಡಿರುವ ಕೃತ್ಯ ಎಂದು ಕಾರವಾರ ಎಸ್ಪಿ ಶಿವಪ್ರಕಾಶ್ ದೇವರಾಜು ಸ್ಪಷ್ಟಪಡಿಸಿದ್ದಾರೆ.
ಕುಮಟಾದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜಿನ ಹಿಂಬದಿಯ ಗುಡ್ಡದಲ್ಲಿ ಬಾಂಬ್ ರೀತಿಯ ವಸ್ತು ನಿನ್ನೆ ಸಂಜೆ ಪತ್ತೆಯಾಗಿತ್ತು. ವಿದ್ಯುತ್ ವೈರ್ ಗಳನ್ನು ಜೋಡಿಸಿ ಡಿಟೋನೇಟರ್ ರೀತಿಯ ಬಾಂಬ್ ಅಳವಡಿಸಲಾಗಿದೆ ಎಂದು ಸ್ಥಳೀಯರು ಆತಂಕ ಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕಾರವಾರ ಪೊಲೀಸರು ಮಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳವನ್ನು ಕರೆಸಲಾಗಿತ್ತು. ತಜ್ಞರು ಬಂದು ಪರಿಶೀಲಿಸಿದ್ದು ಅದರಲ್ಲಿ ಬಾಂಬ್ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ಐಇಡಿ ಬಾಂಬ್ ಮಾದರಿಯಲ್ಲಿ ಜೋಡಿಸಿ ಇಡಲಾಗಿತ್ತು. ಆದರೆ, ಅದರಲ್ಲಿ ಯಾವುದೇ ಸ್ಫೋಟಕ ವಸ್ತು ಇರಲಿಲ್ಲ. ಘಟನೆ ಸಂಬಂಧ ಸ್ಫೋಟಕ ಕಾಯ್ದೆ 4 ಮತ್ತು 5ರ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಎಸ್ಪಿ ದೇವರಾಜು ತಿಳಿಸಿದ್ದಾರೆ. ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಎಸ್ಪಿ ಮನವಿ ಮಾಡಿದ್ದಾರೆ.
ಬಾಂಬ್ ರೀತಿಯ ವಸ್ತು ಪತ್ತೆಯಾದ ಸ್ಥಳದ ಸಮೀಪದಲ್ಲೇ ಕುಮಟಾ ರೈಲ್ವೇ ನಿಲ್ದಾಣ ಇತ್ತು. ಹೀಗಾಗಿ ಯಾರೋ ಉದ್ದೇಶಪೂರ್ವಕ ಬಾಂಬ್ ಇಟ್ಟಿದ್ದಾರೆಂದು ಸಂಶಯಪಡಲಾಗಿತ್ತು. ಸಂಜೆಯೇ ಪೊಲೀಸರನ್ನು ನಿಯೋಜಿಸಿ, ಸ್ಥಳದಲ್ಲಿ ಬಂದೋಬಸ್ತ್ ಮಾಡಲಾಗಿತ್ತು. ಇದರಿಂದಾಗಿ ಕುಮಟಾದಲ್ಲಿ ಭಯದ ವಾತಾವರಣ ಉಂಟಾಗಿತ್ತು. ಸ್ಥಳೀಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳೇ ಕಿಡಿಗೇಡಿ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕುಮಟಾದಲ್ಲಿ ಬಾಂಬ್ ಮಾದರಿ ವಸ್ತು ಪತ್ತೆ ! ಸ್ಥಳೀಯರಲ್ಲಿ ಆತಂಕ, ಮಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳ ರವಾನೆ
A suspected improvised explosive device (IED) was been found in a wooded area near the Kumta Railway station on Wednesday evening, creating panic among the locals is said to be dummy.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm