ಬ್ರೇಕಿಂಗ್ ನ್ಯೂಸ್
11-11-21 09:34 pm Bengaluru Correspondent ಕರ್ನಾಟಕ
ಬೆಂಗಳೂರು, ನ.11: ಬಿಟ್ ಕಾಯಿನ್ ಹಗರಣದ ಆರೋಪಿ ಬಡವರ ಹೆಸರಲ್ಲಿ ಮಾಡಿದ್ದ ಜನಧನ್ ಖಾತೆಗಳಿಂದ ತಲಾ 2 ರೂಪಾಯಿ ಲೆಕ್ಕದಲ್ಲಿ ಸುಮಾರು 6,000 ಕೋಟಿ ರೂಪಾಯಿಯಷ್ಟು ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದಾನೆಂಬ ಮಾಹಿತಿಯೂ ಇದೆ. ಆದರೆ ಇಂಥ ಗಂಭೀರ ಪ್ರಕರಣದ ಆರೋಪಿಯನ್ನು ಬಿಜೆಪಿ ಸರಕಾರದ ನಾಯಕರು ಸೇರಿ ಜಾಮೀನು ಕೊಟ್ಟು ಕಳುಹಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದರು.
ಜನತಾ ಪರ್ವ ಎರಡನೇ ಹಂತದ ಕಾರ್ಯಾಗಾರದ ಹಿನ್ನೆಲೆಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇಷ್ಟು ಹಣದ ಅಕ್ರಮ ವರ್ಗಾವಣೆ ಹಿಂದೆ ಯಾರು ಇದ್ದಾರೆ ಎನ್ನುವ ಮಾಹಿತಿ ಜನರಿಗೆ ಗೊತ್ತಾಗಬೇಕಿದೆ. ಬಹುಶಃ ಈ ಎಲ್ಲ ಮಾಹಿತಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಚೆನ್ನಾಗಿ ಗೊತ್ತಾಗಿದೆ. ಅವರ ಬಳಿ ಎಲ್ಲ ಮಾಹಿತಿ ಇದ್ದು, ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರಬಹುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಬಿಟ್ ಕಾಯಿನ್ ಹಗರಣದ ಮುಖ್ಯ ಆರೋಪಿಗೆ ಜಾಮೀನು ಸಿಕ್ಕಿದ ಬಗ್ಗೆ ಗಂಭೀರ ಅನುಮಾನಗಳನ್ನು ವ್ಯಕ್ತಪಡಿಸಿದ ಎಚ್ಡಿ ಕುಮಾರಸ್ವಾಮಿ, ಆರೋಪಿಗೆ ಜಾಮೀನು ಕೊಡಲು ಖಾತರಿ ಕೊಟ್ಟಿದ್ದು ಯಾರು? ಆತನ ಪರ ವಾದ ಮಂಡಿಸಿದ ವಕೀಲರು ಯಾರು? ಆರೋಪಿ ಜೈಲಿನಿಂದ ಹೊರಬಂದ ನಂತರ ಮಾಧ್ಯಮದವರ ಮುಂದೆ ಕಾಣಿಸಿಕೊಂಡಿದ್ದಾನೆ. ಮಾಧ್ಯದವರ ಜತೆ ಆ ವ್ಯಕ್ತಿ ಮಾತನಾಡುತ್ತಾನೆ, ನಂತರ ಆಟೋ ಹತ್ತಿ ಹೋಗುತ್ತಾನೆ. ಇದೆಲ್ಲ ನೋಡಿದರೆ ಅದರ ಹಿಂದೆ ಯಾರೋ ಇರುವುದು ಸ್ಪಷ್ಟವಾಗುತ್ತದೆ. ಇದರಿಂದ ಬಿಟ್ ಕಾಯಿನ್ ಹಗರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂಬ ಅನುಮಾನ ದಟ್ಟವಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.
ಭಾರತದ ಮಾನ ಹರಾಜು ಆಗಬಾರದು ಅಂತ ಭಾಗಿಯಾದವರ ಮಾಹಿತಿಯನ್ನು ಹೊರಬಿಟ್ಟಿಲ್ಲ ಅಂತ ಕಾಣಿಸುತ್ತಿದೆ. ಆದಷ್ಟು ಬೇಗ ಜನತೆಗೆ ಸತ್ಯ ತಿಳಿಯಲಿ. ಪ್ರಧಾನ ಮಂತ್ರಿಯವರು ಅಮೆರಿಕಕ್ಕೆ ಭೇಟಿ ನೀಡಿದ್ದಾಗ ಈ ಬಗ್ಗೆ ಮಾಹಿತಿ ಸಿಕ್ಕಿದೆ. ಅವರಿಗೆ ಮುಜುಗರ ಅಗಿರುವ ಕಾರಣಕ್ಕೆ ಇಡೀ ಪ್ರಕರಣವನ್ನು ಅವರು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿದೆ ಎಂದು ಮಾಜಿ ಸಿಎಂ ಹೇಳಿದರು.

ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುತ್ತಿದ್ದಾರೆ !
ಬಿಟ್ ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯುತ್ತಿದೆ. ಆ ಕಲ್ಲು ಯಾರಿಗೆ ಬೀಳುತ್ತದೆ ? ಈಗಾಗಲೇ ಕಾಂಗ್ರೆಸ್ ನಾಯಕರಿಗೆ ಸಂಬಂಧಿಸಿದ ಕೆಲವು ಹೆಸರುಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಆದರೆ, ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಅವರು ಮಾರ್ಮಿಕವಾಗಿ ಹೇಳಿದರು.
H D Kumaraswamy reacts on Bitcoin scam in Karnataka says 6 crore stolen from Jandhan account by BJP shadow.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm