ಬ್ರೇಕಿಂಗ್ ನ್ಯೂಸ್
12-09-20 05:27 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 12: ಜೆಡಿಎಸ್ ಪಕ್ಷದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರ ಜೊತೆ ಶ್ರೀಲಂಕಾ ಪ್ರವಾಸ ಹೋಗಿದ್ದು ನಿಜ. ಹಾಗೆಂದು ಕೊಲಂಬೋ ಯಾತ್ರೆ ಮಾಡಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿಯರ ಜೊತೆ ಕೊಲಂಬೋಗೆ ಹೋಗಿದ್ದೆ ಎಂದು ಹೇಳಿಕೆ ನೀಡಿರುವ ಮಾಜಿ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಪ್ರತಿಯಾಗಿ ಕುಮಾರಸ್ವಾಮಿಯವರು ಸರಣಿ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ. ಒಂದಾನೊಂದು ಕಾಲದಲ್ಲಿ ಪಕ್ಷದಲ್ಲಿದ್ದ ರಾಜಕಾರಣಿಯೊಬ್ಬರು ಜೆಡಿಎಸ್ ಶಾಸಕರು ಮತ್ತು ನಾನು ಕೊಲಂಬೋಗೆ ಪ್ರವಾಸ ಹೋಗಿದ್ದಾಗಿ ಹೇಳಿಕೆ ನೀಡಿದ್ದು ಎತ್ತಣ ಮಾಮರ, ಎತ್ತಣ ಕೋಗಿಲೆ ಎಂಬಂತಾಗಿದೆ ಎಂದಿದ್ದಾರೆ.

2014ರ ಜೂನ್ ತಿಂಗಳಲ್ಲಿ ಪಕ್ಷದ ಸಂಘಟನೆ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ಶ್ರೀಲಂಕಾಗೆ ಹೋಗುವುದಾಗಿ ಬಹಿರಂಗವಾಗೇ ಮಾಧ್ಯಮಗಳಿಗೆ ಹೇಳಿ ಹೋಗಿದ್ದಲ್ಲದೆ, ಅಲ್ಲಿ ಶಾಸಕರ ಜೊತೆ ನಡೆದ ಮಾತುಕತೆಗಳ ಬಗ್ಗೆ ದೃಶ್ಯಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದೆವು. ಇದರಲ್ಲಿ ಯಾವುದೇ ಗುಟ್ಟು ಇರಲಿಲ್ಲ. ನೆರೆಯ ರಾಜ್ಯ ಗೋವಾ ಇಲ್ಲವೇ ರಾಜ್ಯದ ರೆಸಾರ್ಟ್ನ ನಲ್ಲಿ ಸಭೆ ನಡೆಸುವುದಕ್ಕಿಂತ ಯಾವುದೇ ಅಡಚಣೆ ಇಲ್ಲದೆ ಶಾಸಕರೊಂದಿಗೆ ಚರ್ಚಿಸಲು ಕೊಲಂಬೋಗೆ ಹೋಗುವುದು ದುಬಾರಿಯಲ್ಲದ ಕಾರಣಕ್ಕೆ ಇಂತಹ ಸಭೆ ನಡೆಸಿದ್ದು ನಿಜ. ವಿಮಾನ ಹತ್ತುವಾಗ ಮತ್ತು ವಾಪಸು ಬಂದಾಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೇನೆ. ಕೊಲಂಬೋ ಪ್ರಯಾಣ ಅದೇ ಮೊದಲು ಮತ್ತು ಅದೇ ಕೊನೆ. ಇದರಲ್ಲಿ ಬಚ್ಚಿಡುವುದು ಏನೇನೂ ಇಲ್ಲ. ಅವರು ನಮ್ಮೊಂದಿಗೆ ಬಂದಿದ್ದರೆ ಹೊರತು ನಾವು ಅವರೊಂದಿಗೆ ಹೋಗಿದ್ದಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಆಚಾರವಿಲ್ಲದ ನಾಲಿಗೆ ನಿನ್ನ
ನೀಚ ಬುದ್ಧಿಯ ಬಿಡು ನಾಲಿಗೆ
ವಿಚಾರವಿಲ್ಲದೆ ಪರರ ದೂಷಿಸುವುದಕ್ಕೆ
ಚಾಚಿ ಕೊಂಡಿರುವುಂತ ನಾಲಿಗೆ
ಸತತವು ನುಡಿ ಕಂಡ್ಯ ನಾಲಿಗೆ
ಚಾಡಿ ಹೇಳಲು ಬೇಡ ನಾಲಿಗೆ
ಎಂದು ಪುರಂದರದಾಸರ ಕೀರ್ತನೆಯನ್ನು ಉಲ್ಲೇಖಿಸಿ ಜಮೀರ್ ಅಹ್ಮದ್ ವಿರುದ್ಧ ಜಾಡಿಸಿದ್ದಾರೆ. ಡ್ರಗ್ಸ್ ದಂಧೆಯಲ್ಲಿ ಬಂಧಿತರಾಗಿರುವ ಆರೋಪಿಗಳ ಜೊತೆ ಲಿಂಕ್ ಹೊಂದಿರುವ ಆರೋಪ ಜಮೀರ್ ಅಹ್ಮದ್ ಮೇಲೆ ಕೇಳಿಬರುತ್ತಿದ್ದಂತೆ ಕೊಲಂಬೋಗೆ ಹೋಗಿರುವ ವಿಚಾರದಲ್ಲಿ ಕುಮಾರಸ್ವಾಮಿಯನ್ನು ಎಳೆತರಲು ಪ್ರಯತ್ನ ಮಾಡಿದ್ದರು.
ಆಚಾರವಿಲ್ಲದ ನಾಲಿಗೆ ನಿನ್ನ
— H D Kumaraswamy (@hd_kumaraswamy) September 12, 2020
ನೀಚ ಬುದ್ಧಿಯ ಬಿಡು ನಾಲಿಗೆ
ವಿಚಾರವಿಲ್ಲದೆ ಪರರ ದುಶಿಸುವುದಕ್ಕೆ
ಚಾಚಿ ಕೊಂಡಿರುವಂತ ನಾಲಿಗೆ
ಸತತವು ನುಡಿ ಕಂಡ್ಯ ನಾಲಿಗೆ
ಚಾಡಿ ಹೇಳಲು ಬೇಡ ನಾಲಿಗೆ
ಪುರಂದರ ದಾಸರು
6/6
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm