ಬ್ರೇಕಿಂಗ್ ನ್ಯೂಸ್
15-11-21 09:45 pm H.K, Bengaluru Desk ಕರ್ನಾಟಕ
ಬೆಂಗಳೂರು, ನ.16: ಬಿಟ್ ಕಾಯಿನ್ ಹಗರಣದ ಸೂತ್ರಧಾರ ಎನ್ನಲಾದ ಶ್ರೀಕಿಯ ಜೀವಕ್ಕೆ ಆಪತ್ತು ಇದ್ದು ಆತನಿಗೆ ಪೊಲೀಸ್ ಭದ್ರತೆ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ವಿಶ್ವಾದ್ಯಂತ ಗಮನ ಸೆಳೆದಿರುವ ಈ ಹಗರಣದಲ್ಲಿ ಬಹಳಷ್ಟು ಪ್ರಭಾವಿಗಳು ಶಾಮೀಲಾಗಿದ್ದು ಈ ಹಿನ್ನೆಲೆಯಲ್ಲಿ ಆರೋಪಿಗೆ ಭದ್ರತೆ ಅಗತ್ಯವಾಗಿದೆ. ಕಳೆದ ವರ್ಷ ರಾಜ್ಯ ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಶ್ರೀಕಿಗೆ ಮಾದಕ ವಸ್ತು ಚಟ ಇದ್ದುದನ್ನು ಹೇಳಲಾಗಿದೆ. ಈ ಸಮಯದಲ್ಲಿ ಶ್ರೀಕಿ ತಂದೆಯೇ ಪತ್ರ ಬರೆದು ತನ್ನ ಮಗನಿಗೆ ಪೊಲೀಸರು ಡ್ರಗ್ಸ್ ನೀಡಿದ್ದರು ಎಂದು ಆರೋಪಿಸಿದ್ದರು.

ಬಿಟ್ ಕಾಯಿನ್ ಹಗರಣ ಸ್ಫೋಟಗೊಂಡ ನಂತರ ಸಣ್ಣಮಟ್ಟದ ಆರೋಪದ ಮೇಲೆ ನಾಟಕೀಯ ರೀತಿಯಲ್ಲಿ ನಡೆದಿರುವ ಶ್ರೀಕೃಷ್ಣನ ಬಂಧನ, ಅಷ್ಟೇ ನಾಟಕೀಯವಾಗಿ ಜಾಮೀನು ಮೇಲೆ ಬಿಡುಗಡೆಯಾಗಿರುವುದು ಪೊಲೀಸರ ನಡವಳಿಕೆಗಳ ಬಗ್ಗೆ ಸಂಶಯಗಳಿಗೆ ಕಾರಣವಾಗಿದೆ ಎಂದವರು ಹೇಳಿದ್ದಾರೆ.
ಶ್ರೀಕಿ ಈಗಲೂ ಡ್ರಗ್ಸ್ ವ್ಯಸನಿಯೇ ? ಡ್ರಗ್ಸ್ ವ್ಯಸನಿಯಾಗಿದ್ದರೆ ಚಿಕಿತ್ಸೆ ನೀಡಲಾಗಿದೆಯೇ ? ಈ ಬಾರಿ ಬಂಧಿಸಿದಾಗ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆಯೇ ? ಈ ಬಗ್ಗೆ ರಾಜ್ಯದ ಗೃಹ ಸಚಿವರು ಮಾಹಿತಿ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಬಿಟ್ ಕಾಯಿನ್ ಹಗರಣ ತಂತ್ರಜ್ಞಾನ ಅವಲಂಬಿತ ಬಿಳಿ ಕಾಲರ್ ಅಪರಾಧ. ಹ್ಯಾಕ್ ಮಾಡಿರುವುದು, ಸಂಬಂಧಿತ ದಾಖಲೆಗಳ ಪಾಸ್ ವರ್ಡ್ ಇತ್ಯಾದಿ ಆತನ ನೆನಪಲ್ಲಿ ಮಾತ್ರ ಇದೆ, ಲಿಖಿತ ದಾಖಲೆಗಳಿಲ್ಲ ಎಂದು ಹೇಳಲಾಗುತ್ತದೆ. ಹೀಗಾಗಿ ಶ್ರೀಕಿಯ ಪ್ರಾಣಕ್ಕೆ ಅಪಾಯ ಸಾಧ್ಯತೆ ಇದೆ ಎಂದು ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
In a startling demand, Karnataka Leader of the Opposition Siddaramaiah on Monday asked the BJP government to provide security to hacker Srikrishna, suggesting that his life could be in danger.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm