ಬ್ರೇಕಿಂಗ್ ನ್ಯೂಸ್
15-11-21 09:45 pm H.K, Bengaluru Desk ಕರ್ನಾಟಕ
ಬೆಂಗಳೂರು, ನ.16: ಬಿಟ್ ಕಾಯಿನ್ ಹಗರಣದ ಸೂತ್ರಧಾರ ಎನ್ನಲಾದ ಶ್ರೀಕಿಯ ಜೀವಕ್ಕೆ ಆಪತ್ತು ಇದ್ದು ಆತನಿಗೆ ಪೊಲೀಸ್ ಭದ್ರತೆ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ವಿಶ್ವಾದ್ಯಂತ ಗಮನ ಸೆಳೆದಿರುವ ಈ ಹಗರಣದಲ್ಲಿ ಬಹಳಷ್ಟು ಪ್ರಭಾವಿಗಳು ಶಾಮೀಲಾಗಿದ್ದು ಈ ಹಿನ್ನೆಲೆಯಲ್ಲಿ ಆರೋಪಿಗೆ ಭದ್ರತೆ ಅಗತ್ಯವಾಗಿದೆ. ಕಳೆದ ವರ್ಷ ರಾಜ್ಯ ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಶ್ರೀಕಿಗೆ ಮಾದಕ ವಸ್ತು ಚಟ ಇದ್ದುದನ್ನು ಹೇಳಲಾಗಿದೆ. ಈ ಸಮಯದಲ್ಲಿ ಶ್ರೀಕಿ ತಂದೆಯೇ ಪತ್ರ ಬರೆದು ತನ್ನ ಮಗನಿಗೆ ಪೊಲೀಸರು ಡ್ರಗ್ಸ್ ನೀಡಿದ್ದರು ಎಂದು ಆರೋಪಿಸಿದ್ದರು.

ಬಿಟ್ ಕಾಯಿನ್ ಹಗರಣ ಸ್ಫೋಟಗೊಂಡ ನಂತರ ಸಣ್ಣಮಟ್ಟದ ಆರೋಪದ ಮೇಲೆ ನಾಟಕೀಯ ರೀತಿಯಲ್ಲಿ ನಡೆದಿರುವ ಶ್ರೀಕೃಷ್ಣನ ಬಂಧನ, ಅಷ್ಟೇ ನಾಟಕೀಯವಾಗಿ ಜಾಮೀನು ಮೇಲೆ ಬಿಡುಗಡೆಯಾಗಿರುವುದು ಪೊಲೀಸರ ನಡವಳಿಕೆಗಳ ಬಗ್ಗೆ ಸಂಶಯಗಳಿಗೆ ಕಾರಣವಾಗಿದೆ ಎಂದವರು ಹೇಳಿದ್ದಾರೆ.
ಶ್ರೀಕಿ ಈಗಲೂ ಡ್ರಗ್ಸ್ ವ್ಯಸನಿಯೇ ? ಡ್ರಗ್ಸ್ ವ್ಯಸನಿಯಾಗಿದ್ದರೆ ಚಿಕಿತ್ಸೆ ನೀಡಲಾಗಿದೆಯೇ ? ಈ ಬಾರಿ ಬಂಧಿಸಿದಾಗ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆಯೇ ? ಈ ಬಗ್ಗೆ ರಾಜ್ಯದ ಗೃಹ ಸಚಿವರು ಮಾಹಿತಿ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಬಿಟ್ ಕಾಯಿನ್ ಹಗರಣ ತಂತ್ರಜ್ಞಾನ ಅವಲಂಬಿತ ಬಿಳಿ ಕಾಲರ್ ಅಪರಾಧ. ಹ್ಯಾಕ್ ಮಾಡಿರುವುದು, ಸಂಬಂಧಿತ ದಾಖಲೆಗಳ ಪಾಸ್ ವರ್ಡ್ ಇತ್ಯಾದಿ ಆತನ ನೆನಪಲ್ಲಿ ಮಾತ್ರ ಇದೆ, ಲಿಖಿತ ದಾಖಲೆಗಳಿಲ್ಲ ಎಂದು ಹೇಳಲಾಗುತ್ತದೆ. ಹೀಗಾಗಿ ಶ್ರೀಕಿಯ ಪ್ರಾಣಕ್ಕೆ ಅಪಾಯ ಸಾಧ್ಯತೆ ಇದೆ ಎಂದು ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
In a startling demand, Karnataka Leader of the Opposition Siddaramaiah on Monday asked the BJP government to provide security to hacker Srikrishna, suggesting that his life could be in danger.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm