ಬ್ರೇಕಿಂಗ್ ನ್ಯೂಸ್
18-11-21 12:46 pm Hk Desk, Bengaluru ಕರ್ನಾಟಕ
ಹುಬ್ಬಳ್ಳಿ: ಬಿಟ್ ಕಾಯಿನ್ ಹಗರಣದಲ್ಲಿ ಯಾರೇ ಭಾಗಿಯಾಗಿದ್ದರೂ ತಪ್ಪಿತಸ್ಥರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಮತ್ತು ದಾಖಲೆ ಇದ್ದರೆ ಕೊಡಲಿ. ಯಾವುದೇ ಪಕ್ಷದವರು ಕೊಟ್ಟರೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಕಾಂಗ್ರೆಸ್ನಲ್ಲಿ ಬಡಿದಾಟ ಆರಂಭವಾಗಿದ್ದು, ಈಗಾಗಲೇ ಎರಡು ಬಣಗಳಿವೆ. ಕಾಂಗ್ರೆಸ್ ಬಡಿದಾಟದ ಕುರಿತು ಟೀಕೆ, ಟಿಪ್ಪಣಿ ಮಾಡುವುದಕ್ಕೆ ಹೋಗುವುದಿಲ್ಲ. ಪ್ರತಿಪಕ್ಷದವರ ವಿರುದ್ಧ ಹೇಳಿಕೆ ನೀಡುವುದಿಲ್ಲ ಎಂದು ಬಿಎಸ್ವೈ ತಿಳಿಸಿದರು.
ಹ್ಯಾಕರ್ ಶ್ರೀಕಿ ಮಿಸ್ಸಿಂಗ್ ;
ಬಿಟ್ ಕಾಯಿನ್ ಹಗರಣದ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನ ಜೀವಕ್ಕೆ ಅಪಾಯವಿದೆ ಎಂದು ಕಾಂಗ್ರೆಸ್ ನಾಯಕರು ಕಳೆದ ಒಂದು ವಾರದಿಂದ ಹೇಳುತ್ತಿದ್ದರೂ ರಾಜ್ಯ ಸರಕಾರ ಕಿವಿಗೆ ಹಾಕ್ಕೊಂಡಿರಲಿಲ್ಲ. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ರಾಜ್ಯ ಸರಕಾರ ಶ್ರೀಕಿಗೆ ಪೊಲೀಸ್ ಭದ್ರತೆ ನೀಡಲು ಸೂಚನೆ ನೀಡಿದೆ. ಆದರೆ, ಇತ್ತ ಪೊಲೀಸರು ಭದ್ರತೆ ನೀಡಲು ಹೋದರೆ ಶ್ರೀಕಿಯೇ ಕಾಣೆಯಾಗಿದ್ದಾನೆ.
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಇಂದು ಬೆಳಗ್ಗೆ ಶ್ರೀಕಿ ಭದ್ರತೆಗಾಗಿ ಸಬ್ ಇನ್ಸ್ ಪೆಕ್ಟರ್ ದರ್ಜೆಯ ಅಧಿಕಾರಿಯೊಬ್ಬರನ್ನು ನಿಯೋಜಿಸಿ ಆದೇಶ ಹೊರಡಿಸಿದ್ದರು. ಕೂಡಲೇ ಶ್ರೀಕಿಯ ಮನೆಗೆ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಪೊಲೀಸರು ತೆರಳಿದ್ದು, ಅಲ್ಲಿ ಹುಡುಕಾಟ ನಡೆಸಿದ್ದಾರೆ. ಆದರೆ, ಶ್ರೀಕಿ ಎಲ್ಲಿದ್ದಾನೆಂದು ಮನೆಯವರಿಗೇ ಗೊತ್ತಿಲ್ಲ. ಹೀಗಾಗಿ ಪೊಲೀಸರು ಶ್ರೀಕಿ ಪತ್ತೆಗಾಗಿ ತೀವ್ರ ತಲೆಕೆಡಿಸಿಕೊಂಡಿದ್ದಾರೆ.
ಬಿಟ್ ಕಾಯಿನ್ ಹಗರಣದಲ್ಲಿ ರಾಜ್ಯ ಸರಕಾರದ ಬಿಜೆಪಿ ಪ್ರಭಾವಿಗಳು ಇದ್ದಾರೆಂಬ ಮಾಹಿತಿಗಳು ಈಗಾಗ್ಲೇ ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡಿದೆ. ಈ ನಡುವೆ, ಆರೋಪಿಯೆಂದು ಗುರುತಿಸಲ್ಪಟ್ಟಿರುವ ಶ್ರೀಕಿಯೇ ನಾಪತ್ತೆಯಾಗಿದ್ದು, ತೀವ್ರ ಸಂಚಲನ ಸೃಷ್ಟಿಸಿದೆ. ಶ್ರೀಕಿ ಬಾಯಿಬಿಟ್ರೆ ದೊಡ್ಡ ನಾಯಕರಿಗೆ ಆಪತ್ತು ಎದುರಾಗುವುದು ಖಚಿತ ಎನ್ನಲಾಗುತ್ತಿರುವ ಮಧ್ಯೆಯೇ ಆತನ ನಾಪತ್ತೆ ಮತ್ತೊಂದು ಶಾಕ್ ನೀಡಿದೆ.
ಈಗಾಗ್ಲೇ ಪ್ರಕರಣದ ಸಾಕ್ಷ್ಯಗಳನ್ನು ಶ್ರೀಕಿ ಪೂರ್ತಿಯಾಗಿ ಕ್ರಾಷ್ ಮಾಡಿದ್ದಾನೆ ಎನ್ನಲಾಗುತ್ತಿದ್ದು, ತಾಂತ್ರಿಕ ಸಾಕ್ಷ್ಯಗಳನ್ನು ಮತ್ತೆ ರಿಟ್ರೀವ್ ಮಾಡಿದರೆ ಆಪತ್ತು ಎದುರಾಗುವ ಸಾಧ್ಯತೆಗಳಿವೆ ಎನ್ನುವ ಆತಂಕದಿಂದ ರಾಜಕೀಯ ಪ್ರಭಾವಿಗಳೇ ಸೇರಿ ಆತನನ್ನು ಮುಗಿಸಲು ಸಂಚು ಹೂಡಿದ್ದಾರೆಂಬ ಅನುಮಾನಗಳು ಕಳೆದ ಕೆಲವು ದಿನಗಳಿಂದ ಕೇಳಿಬಂದಿತ್ತು. ಈ ಬಗ್ಗೆ ಕಾಂಗ್ರೆಸ್ ನಾಯಕರು ಪದೇ ಪದೇ ಸರಕಾರವನ್ನು ಎಚ್ಚರಿಸಿದ್ದರು. ಈಗ ಪ್ರಾಣಾಪಾಯದ ಭೀತಿಯಲ್ಲಿ ಸ್ವತಃ ಶ್ರೀಕಿಯೇ ತಲೆಮರೆಸಿಕೊಂಡಿದ್ದಾನೆಯೇ, ಯಾರಾದ್ರೂ ಆತನನ್ನು ಬಚ್ಚಿಟ್ಟಿದ್ದಾರೆಯೇ ಎನ್ನುವ ಅನುಮಾನವೂ ಮೂಡಿದೆ.
Bitcoin scam, action to be taken by PM Modi on all those involved if proved states Yediyurapp in Hubli.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm