ಬ್ರೇಕಿಂಗ್ ನ್ಯೂಸ್
12-09-20 11:03 pm Mysore Reporter ಕರ್ನಾಟಕ
ಮೈಸೂರು, ಸೆಪ್ಟೆಂಬರ್ 12: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಕೊರೊನಾ ವಾರಿಯರ್ ಉದ್ಘಾಟಿಸಲಿದ್ದಾರೆ. ಅ.17 ರಂದು ಬೆಳಿಗ್ಗೆ 7:45 ರಿಂದ 8:15 ರೊಳಗಿನ ಮುಹೂರ್ತದಲ್ಲಿ ದಸರಾ ಉತ್ಸವ ಉದ್ಘಾಟನೆಗೆ ದಿನ ನಿಗದಿ ಮಾಡಲಾಗಿದೆ.
ಈ ಬಾರಿ ಜಂಬೂ ಸವಾರಿ ಮೆರವಣಿಗೆ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಲಿದೆ. ಈ ಕುರಿತು ಮೈಸೂರು ದಸರಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸಿ.ಟಿ.ರವಿ ಅವರ ಉಪಸ್ಥಿತಿಯಲ್ಲಿ ಮೈಸೂರಿನಲ್ಲಿ ದಸರಾ ಕಾರ್ಯಕಾರಿ ಸಮಿತಿ ಸಭೆ ಇಂದು ನಡೆಯಿತು.
ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ಮಹೋತ್ಸವ ಸರಳ ಹಾಗೂ ಸಾಂಪ್ರದಾಯಿಕವಾಗಿ ಚಾಮುಂಡಿ ಬೆಟ್ಟ ಹಾಗೂ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿರಲಿದೆ. ಅಕ್ಟೋಬರ್ 2 ರಂದು ಮಧ್ಯಾಹ್ನ ದಸರಾ ಗಜಪಡೆಯನ್ನು ಮೈಸೂರು ಅರಮನೆ ಆವರಣಕ್ಕೆ ಸ್ವಾಗತಿಸಲಾಗುವುದು. ಪ್ರತಿ ವರ್ಷದಂತೆ ವೀರನ ಹೊಸಹಳ್ಳಿಯಲ್ಲಿ ಆಯೋಜಿಸುತ್ತಿದ್ದ ಗಜಪಯಣ ಸಮಾರಂಭ ಈ ಸಲ ಇರುವುದಿಲ್ಲ. ಈ ಬಾರಿ ನೇರವಾಗಿ ಮೈಸೂರು ಅರಮನೆ ಆವರಣಕ್ಕೆ ಗಜಪಡೆ ಆಗಮನವಾಗಲಿದೆ.
ವಿಶೇಷ ಅಂದ್ರೆ ಈ ಬಾರಿ ಕೊರೊನಾ ವಾರಿಯರ್ಸ್ ಸೇರಿ ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವ ಉದ್ಘಾಟನೆ ಮಾಡಲಿದ್ದಾರೆ. ಐವರು ಕೊರೊನಾ ವಾರಿಯರ್ಸ್ ಪೈಕಿ ಒಬ್ಬರು ದಸರಾ ಉದ್ಘಾಟನೆ ಮಾಡಲಿದ್ದು, ಉಳಿದವರಿಗೆ ಸನ್ಮಾನ ಮಾಡಲು ನಿರ್ಧರಿಸಲಾಗಿದೆ. ಈ ಸನ್ಮಾನಿತರ ಪಟ್ಟಿಯಲ್ಲಿ ಕೋವಿಡ್ ಶವ ಸಂಸ್ಕಾರ ಮಾಡಿದ ವ್ಯಕ್ತಿಯನ್ನು ಕೂಡ ಸೇರಿಸಿಕೊಳ್ಳಲು ನಿರ್ಧರಿಸಲಾಗಿದೆ.
ಈ ಬಾರಿ ಅರಮನೆ ಆವರಣದೊಳಗೆ ನಡೆಯುವ ಜಂಬೂ ಸವಾರಿಗೆ ಎರಡು ಸಾವಿರ ಮಂದಿಗೆ ಅವಕಾಶ ಸಾಮರ್ಥ್ಯವಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರವೇ ಮೆರವಣಿಗೆ ನಡೆಯಲಿದ್ದು ಈ ಬಾರಿಯ ಮೆರವಣಿಗೆಯಲ್ಲಿ ಅಭಿಮನ್ಯು ಆನೆ ಚಿನ್ನದ ಅಂಬಾರಿ ಹೊತ್ತು ಸಾಗಲಿದೆ.

ಸುಪ್ರಿಂ ಕೋರ್ಟ್ ಆದೇಶದ ಪ್ರಕಾರ ಅರ್ಜುನನಿಗೆ 60 ವರ್ಷ ಮೀರಿರುವುದರಿಂದ ಅಂಬಾರಿ ಹೊರುವ ಅವಕಾಶವಿಲ್ಲ. ಅಭಿಮನ್ಯು ಜೊತೆಗೆ ವಿಕ್ರಮ, ಗೋಪಿ, ವಿಜಯ ಮತ್ತು ಕಾವೇರಿ ಆನೆಗಳು ದಸರಾ ಮಹೋತ್ಸವದಲ್ಲಿ ಭಾಗಿಯಾಗಲಿವೆ.
ಇನ್ನು ನವರಾತ್ರಿಯ ಎಲ್ಲ ದಿನ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರನ್ನು ಕಾರ್ಯಕ್ರಮ ನೀಡಲು ಆಹ್ವಾನಿಸಲಾಗುವುದು. ಎಲ್ಲ ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm