ಬ್ರೇಕಿಂಗ್ ನ್ಯೂಸ್
12-09-20 11:03 pm Mysore Reporter ಕರ್ನಾಟಕ
ಮೈಸೂರು, ಸೆಪ್ಟೆಂಬರ್ 12: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಕೊರೊನಾ ವಾರಿಯರ್ ಉದ್ಘಾಟಿಸಲಿದ್ದಾರೆ. ಅ.17 ರಂದು ಬೆಳಿಗ್ಗೆ 7:45 ರಿಂದ 8:15 ರೊಳಗಿನ ಮುಹೂರ್ತದಲ್ಲಿ ದಸರಾ ಉತ್ಸವ ಉದ್ಘಾಟನೆಗೆ ದಿನ ನಿಗದಿ ಮಾಡಲಾಗಿದೆ.
ಈ ಬಾರಿ ಜಂಬೂ ಸವಾರಿ ಮೆರವಣಿಗೆ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಲಿದೆ. ಈ ಕುರಿತು ಮೈಸೂರು ದಸರಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸಿ.ಟಿ.ರವಿ ಅವರ ಉಪಸ್ಥಿತಿಯಲ್ಲಿ ಮೈಸೂರಿನಲ್ಲಿ ದಸರಾ ಕಾರ್ಯಕಾರಿ ಸಮಿತಿ ಸಭೆ ಇಂದು ನಡೆಯಿತು.
ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ಮಹೋತ್ಸವ ಸರಳ ಹಾಗೂ ಸಾಂಪ್ರದಾಯಿಕವಾಗಿ ಚಾಮುಂಡಿ ಬೆಟ್ಟ ಹಾಗೂ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿರಲಿದೆ. ಅಕ್ಟೋಬರ್ 2 ರಂದು ಮಧ್ಯಾಹ್ನ ದಸರಾ ಗಜಪಡೆಯನ್ನು ಮೈಸೂರು ಅರಮನೆ ಆವರಣಕ್ಕೆ ಸ್ವಾಗತಿಸಲಾಗುವುದು. ಪ್ರತಿ ವರ್ಷದಂತೆ ವೀರನ ಹೊಸಹಳ್ಳಿಯಲ್ಲಿ ಆಯೋಜಿಸುತ್ತಿದ್ದ ಗಜಪಯಣ ಸಮಾರಂಭ ಈ ಸಲ ಇರುವುದಿಲ್ಲ. ಈ ಬಾರಿ ನೇರವಾಗಿ ಮೈಸೂರು ಅರಮನೆ ಆವರಣಕ್ಕೆ ಗಜಪಡೆ ಆಗಮನವಾಗಲಿದೆ.
ವಿಶೇಷ ಅಂದ್ರೆ ಈ ಬಾರಿ ಕೊರೊನಾ ವಾರಿಯರ್ಸ್ ಸೇರಿ ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವ ಉದ್ಘಾಟನೆ ಮಾಡಲಿದ್ದಾರೆ. ಐವರು ಕೊರೊನಾ ವಾರಿಯರ್ಸ್ ಪೈಕಿ ಒಬ್ಬರು ದಸರಾ ಉದ್ಘಾಟನೆ ಮಾಡಲಿದ್ದು, ಉಳಿದವರಿಗೆ ಸನ್ಮಾನ ಮಾಡಲು ನಿರ್ಧರಿಸಲಾಗಿದೆ. ಈ ಸನ್ಮಾನಿತರ ಪಟ್ಟಿಯಲ್ಲಿ ಕೋವಿಡ್ ಶವ ಸಂಸ್ಕಾರ ಮಾಡಿದ ವ್ಯಕ್ತಿಯನ್ನು ಕೂಡ ಸೇರಿಸಿಕೊಳ್ಳಲು ನಿರ್ಧರಿಸಲಾಗಿದೆ.
ಈ ಬಾರಿ ಅರಮನೆ ಆವರಣದೊಳಗೆ ನಡೆಯುವ ಜಂಬೂ ಸವಾರಿಗೆ ಎರಡು ಸಾವಿರ ಮಂದಿಗೆ ಅವಕಾಶ ಸಾಮರ್ಥ್ಯವಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರವೇ ಮೆರವಣಿಗೆ ನಡೆಯಲಿದ್ದು ಈ ಬಾರಿಯ ಮೆರವಣಿಗೆಯಲ್ಲಿ ಅಭಿಮನ್ಯು ಆನೆ ಚಿನ್ನದ ಅಂಬಾರಿ ಹೊತ್ತು ಸಾಗಲಿದೆ.

ಸುಪ್ರಿಂ ಕೋರ್ಟ್ ಆದೇಶದ ಪ್ರಕಾರ ಅರ್ಜುನನಿಗೆ 60 ವರ್ಷ ಮೀರಿರುವುದರಿಂದ ಅಂಬಾರಿ ಹೊರುವ ಅವಕಾಶವಿಲ್ಲ. ಅಭಿಮನ್ಯು ಜೊತೆಗೆ ವಿಕ್ರಮ, ಗೋಪಿ, ವಿಜಯ ಮತ್ತು ಕಾವೇರಿ ಆನೆಗಳು ದಸರಾ ಮಹೋತ್ಸವದಲ್ಲಿ ಭಾಗಿಯಾಗಲಿವೆ.
ಇನ್ನು ನವರಾತ್ರಿಯ ಎಲ್ಲ ದಿನ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರನ್ನು ಕಾರ್ಯಕ್ರಮ ನೀಡಲು ಆಹ್ವಾನಿಸಲಾಗುವುದು. ಎಲ್ಲ ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm