ಬ್ರೇಕಿಂಗ್ ನ್ಯೂಸ್
25-11-21 05:04 pm HK news Desk ಕರ್ನಾಟಕ
ಕಲಬುರ್ಗಿ, ನ.25: ಆದಾಯಕ್ಕಿಂತ ಹೆಚ್ಚು ಆಸ್ತಿ ಕೂಡಿಟ್ಟು ಎಸಿಬಿ ದಾಳಿಗೆ ಒಳಗಾದ ಲೋಕೋಪಯೋಗಿ ಇಲಾಖೆ ಜೂನಿಯರ್ ಇಂಜಿನಿಯರ್ ಶಾಂತಗೌಡ ಬಿರಾದಾರ ಜೈಲು ಸೇರಿದ್ದಾನೆ.
ಎಸಿಬಿ ದಾಳಿ ವೇಳೆ ನಕರಾ ಮಾಡಿ, ತನಿಖೆಗೆ ಸಹಕರಿಸದೇ ಹಣದ ಕಂತೆಗಳನ್ನು ಪೈಪ್ ಒಳಗೆ ತೂರಿದ್ದ ಶಾಂತಗೌಡನನ್ನು ಎಸಿಬಿ ಅಧಿಕಾರಿಗಳು ಬುಧವಾರ ರಾತ್ರಿಯೇ ಕೋರ್ಟಿಗೆ ಹಾಜರುಪಡಿಸಿದ್ದು ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಅದರಂತೆ, ಕಲಬುರಗಿ ಸೆಂಟ್ರಲ್ ಜೈಲಿಗೆ ಹಾಕಲಾಗಿದೆ.
ಎಸಿಬಿ ದಾಳಿ ವೇಳೆ ಶಾಂತಗೌಡ ಅಧಿಕಾರಿಗಳನ್ನೇ ಯಾಮಾರಿಸಿ ಹಣ ಬಚ್ಚಿಡುವ ತಂತ್ರ ಮಾಡಿದ್ದೇ ಬಂಧನಕ್ಕೆ ಕಾರಣವಾಗಿತ್ತು. ದಾಳಿ ಸಂದರ್ಭದಲ್ಲಿ ಹಣವನ್ನು ಬಚ್ಚಿಡಲು ತಂತ್ರ ಹೂಡಿದ್ದ ಕಾರಣಕ್ಕಾಗಿಯೇ ಎಸಿಬಿಯವರು ಬಂಧಿಸಿದ್ದಾರೆ ಎನ್ನಲಾಗುತ್ತಿದೆ.


ಇನ್ನು ಶಾಂತಗೌಡನ ಮನೆಯೊಳಗೆ ಪೈಪ್ ನಲ್ಲಿ ಹಣ ಬಚ್ಚಿಟ್ಟಿದ್ದು ಅಧಿಕಾರಿಗಳಿಗೆ ತಿಳಿದುಬಂದಿದ್ದೇ ರೋಚಕ ವಿಚಾರ ಎನ್ನುವ ಸಂಗತಿ ಹೊರಬಿದ್ದಿದೆ. ವಾಷಿಂಗ್ ಮಷಿನ್ ಇಟ್ಟಿದ್ದ ಬಾತ್ ರೂಮಿನಿಂದ ಅದರ ನೀರು ಹೊರಹೋಗಲು ಜೋಡಿಸಿದ್ದ ಪೈಪ್ ನಲ್ಲಿ ಹಣ ಇಡಲಾಗಿತ್ತು. ಎರಡು ತಿಂಗಳಿಂದ ವಾಷಿಂಗ್ ಮಷಿನ್ ಬಳಸಿರಲಿಲ್ಲ ಎನ್ನಲಾಗುತ್ತಿದ್ದು ಇದರಿಂದಾಗಿ ಪೈಪ್ ಶುಷ್ಕವಾಗಿತ್ತು. ಎಸಿಬಿ ದಾಳಿ ಮಾಡಿದ್ದು ತಿಳಿಯುತ್ತಲೇ ಮಗ ಮತ್ತು ಶಾಂತಗೌಡ ಸೇರಿಕೊಂಡು ಪೈಪ್ ನಲ್ಲಿ ಹಣ ತುಂಬಿಸಿದ್ದಾರೆ. ಹಣ ತುಂಬಿದ ಬಳಿಕ ಪ್ಲೇಟ್ ಬದಲು ಅದರ ಮೇಲೆ ಕಲ್ಲನ್ನು ಇಟ್ಟಿದ್ದ.
ಅಧಿಕಾರಿಗಳ ತಪಾಸಣೆ ವೇಳೆ ಪದೇ ಪದೇ ಟಾಯ್ಲೆಟ್ ಬಳಿಗೆ ಹೋಗಿ ಬರುತ್ತಿದ್ದ ಶಾಂತಗೌಡನ ಬಗ್ಗೆ ಸಂಶಯ ಉಂಟಾಗಿತ್ತು. ಮನೆಯ ಟಾಯ್ಲೇಟ್ ಬಳಿಯೇ ವಾಷಿಂಗ್ ಮೆಷಿನ್ ಇಡಲಾಗಿತ್ತು. ತನಿಖಾ ತಂಡ ಅಲ್ಲಿಗೆ ತೆರಳಿ ತಪಾಸಣೆಯನ್ನೂ ನಡೆಸಿದ್ದರು. ಆದರೆ, ತಂದೆ- ಮಗ ಅದೇ ಜಾಗದಲ್ಲಿ ಹೆಚ್ಚು ಓಡಾಡುತ್ತಿದ್ದರು. ಮನೆ ಹೊರಗೆ ಹೋಗಿದ್ದ ಪೈಪನ್ನೂ ನೋಡಿ ಬರುತ್ತಿದ್ದರು. ಅಧಿಕಾರಿಗಳು ಸಂಶಯ ಬಂದು ಪೈಪ್ ಮೇಲಿಟ್ಟಿದ್ದ ಕಲ್ಲು ತೆಗೆದು ನೋಡಿದಾಗ ಒಳಗೆ ನೋಟಿನ ಕಂತೆ ಕಾಣಿಸಿತ್ತು. ಬಳಿಕ ಪೈಪ್ ಕಟ್ ಮಾಡಿಸಿ ನೋಡಿದಾಗ 500 ಬೆಲೆಯ ಕಂತೆ ಕಂತೆ ನೋಟುಗಳು ಹೊರಬಂದಿದ್ದವು. ಒಂದು ಪೈಪಿನಲ್ಲಿಯೇ 13 ಲಕ್ಷ ನೋಟಿನ ರಾಶಿ ಸಿಕ್ಕಿತ್ತು.
ಇಂದು ಕೂಡ ಎಸಿಬಿ ಅಧಿಕಾರಿಗಳು ಶಾಂತಗೌಡನ ಬ್ಯಾಂಕ್ ಖಾತೆಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಎಸ್.ಬಿ.ಐ ಮತ್ತು ಕೆನರಾ ಬ್ಯಾಂಕ್ ನಲ್ಲಿ ಹಣ ಕೂಡಿಟ್ಟಿರುವ ಶಂಕೆಯಿದ್ದು ಅಧಿಕಾರಿಗಳು ಕಚೇರಿಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
JE Shantagouda Biradar arrested after ACB raid after wads of cash and gold ornaments came out inside a PVC pipe. A video of a raid by Karnataka's Anti-Corruption Bureau (ACB) is going viral on social media. The raid in question was conducted at the home of a Junior Engineer in the Public Works Department (PWD). ACB officers can be seen pulling out wads of cash and gold ornaments from inside a PVC pipe.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm