ಬ್ರೇಕಿಂಗ್ ನ್ಯೂಸ್
25-11-21 05:37 pm HK news Desk ಕರ್ನಾಟಕ
ಬಾಗಲಕೋಟೆ, ನ 25: ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ವಿಷಯವಾಗಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಏಳು ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಬಾಗಲಕೋಟೆಯ ಶಿರೂರು ಗ್ರಾಮದಲ್ಲಿ 2012ರಲ್ಲಿ ನಡೆದಿದ್ದ ಅಪರಾಧಕ್ಕೆ ಸಂಬಂಧಿಸಿದಂತೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಶಿರೂರು ಗ್ರಾಮದ ನಿವಾಸಿ ಯಲ್ಲಪ್ಪ ಗಾಳಿ(55) ಎಂಬುವರ ಕೊಲೆ ನಡೆದಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಬಾಗಲಕೋಟೆ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಸಂತೋಷ ಸಿ.ಬಿ. ನ.23 ರಂದು ಏಳು ಜನರಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಲಕ್ಷ್ಮಣ ಗಾಳಿ, ಬಸವರಾಜ ಕಡಿವಾಲ, ಮಲ್ಲಪ್ಪ ಕಡಿವಾಲ, ಲಕ್ಷ್ಮಣ ಕಡಿವಾಲ, ರಾಮಪ್ಪ ಕಡಿವಾಲ, ಸಕ್ರಪ್ಪ ಕಡಿವಾಲ, ಸಿದ್ದಪ್ಪ ಕಡಿವಾಲ ಜೀವಾವಧಿ ಶಿಕ್ಷೆಗೆ ಒಳಗಾದವರು.
ಏನಿದು ಘಟನೆ ;
ಶಿಕ್ಷೆ ನೀಡಲಾಗಿರುವ ಆರೋಪಿಗಳಲ್ಲೊಬ್ಬರಾದ ಸಕ್ರಪ್ಪ ಎಂಬುವರನ್ನು ಶಿರೂರು ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾಗಿ ಆಯ್ಕೆ ಮಾಡಲು ಇತರ ಆರು ಆರೋಪಿಗಳು ಮುಂದಾಗಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಯಲ್ಲಪ್ಪ ಗಾಳಿ ಅವರ ಮನೆಗೆ 2012 ರ ಫೆಬ್ರವರಿ 1 ರ ರಾತ್ರಿ 1 ಗಂಟೆಗೆ ಪೆಟ್ರೋಲ್ ಎರಚಲಾಗಿತ್ತು. ಇಡೀ ಕುಟುಂಬಕ್ಕೆ ಬೆಂಕಿ ಹಚ್ಚಿ ಕೊಲೆಗೈಯ್ಯವ ಉದ್ದೇಶವಿತ್ತು. ಈ ಬೆಂಕಿಯಲ್ಲಿ ಗಂಭೀರವಾಗಿ ಗಾಯಗೊಂಡ ಯಲ್ಲಪ್ಪ, ಆಸ್ಪತ್ರೆಗೆ ದಾಖಲಾಗಿದ್ದರು. ನಂತರ 2013 ರ ಡಿಸೆಂಬರ್ 4 ಕ್ಕೆ ಮಿರಜ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಾಗಿದ್ದ ಅವರು ಸಾವನ್ನಪ್ಪಿದ್ದರು ಎಂದು ಸರ್ಕಾರಿ ಅಭಿಯೋಜಕ ಸುನೀಲ್ ಹಂಜಿ ತಿಳಿಸಿದ್ದಾರೆ.
Bagalkote court sentensed seven accused for killing man over school election issue. The seven has killed a man by burning him on fire.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm