ಬ್ರೇಕಿಂಗ್ ನ್ಯೂಸ್
03-12-21 04:53 pm HK Desk news ಕರ್ನಾಟಕ
ಬೆಂಗಳೂರು, ಡಿ.3 : ‘ಪೊಲೀಸರು ಭ್ರಷ್ಟರಾಗಿದ್ದಾರೆ. ನಾಯಿಗಳಂತೆ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮದೇ ಇಲಾಖೆಯ ಆರಕ್ಷಕರನ್ನು ತರಾಟೆಗೆ ತೆಗೆದುಕೊಂಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಭೆ ನಡೆಸಿದ ವೇಳೆ ಗೃಹ ಸಚಿವರು ಉನ್ನತ ಪೊಲೀಸ್ ಅಧಿಕಾರಿಯೊಬ್ಬರ ಜತೆ ದೂರವಾಣಿ ಮೂಲಕ ಮಾತನಾಡುತ್ತಿದ್ದಾಗ ಈ ರೀತಿ ಬೈದಿದ್ದು ವಿಡಿಯೊದಲ್ಲಿ ದಾಖಲಾಗಿದೆ.
ಇಡೀ ಚಿಕ್ಕಮಗಳೂರು ಜಿಲ್ಲೆ ನಿಮ್ಮದು. ಪೊಲೀಸರಿಗೆ ಕೈತುಂಬಾ ಸಂಬಳ ನೀಡುತ್ತಿದ್ದೇವೆ. ಯಾರಿಗೂ ಕಡಿಮೆ ಮಾಡಿಲ್ಲ. ಆದ್ರೆ ಇವರಿಗೆಲ್ಲ ಸಂಬಳದಲ್ಲಿ ಬದುಕಬೇಕೆಂದಿಲ್ಲ. ಇಂಥವರೆಲ್ಲ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ. ಯೋಗ್ಯತೆ ಇಲ್ಲದಿದ್ದರೆ ಸಮವಸ್ತ್ರ ಬಿಚ್ಚಿಟ್ಟು ಎಲ್ಲಾದರೂ ಹೋಗಿ ಸಾಯಲಿ ಅಥವಾ ಮಣ್ಣು ಹೊರಲಿ. ಇವರನ್ನೆಲ್ಲ ನಂಬಿಕೊಂಡು ಜನ ಬದುಕುವುದು ಹೇಗೆ? ಇಲ್ಲಿ ತಲವಾರು ತೋರಿಸಿ ಬೆದರಿಸಿ ಕೊಟ್ಟಿಗೆಯಿಂದ ಜಾನುವಾರುಗಳನ್ನು ಬಿಚ್ಚಿ ತೆಗೆದುಕೊಂಡು ಹೋಗುತ್ತಾರೆ. ಎಲ್ಲ ಪೊಲೀಸರು ಹಾಳಾಗಿ ಹೋಗಿದ್ದಾರೆ’ ಎಂದು ಸಚಿವರು ಹೇಳುತ್ತಿದ್ದಾರೆ.
ವಿಡಿಯೋ ವೈರಲ್ ಆದ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಿದ ಸಚಿವರು, ‘ಎಲ್ಲ ಪೊಲೀಸರನ್ನು ಉದ್ದೇಶಿಸಿ ಆ ರೀತಿಯ ಹೇಳಿಕೆ ನೀಡಿಲ್ಲ. ಅಕ್ರಮ ಗೋಸಾಗಾಟ ಮಾಡುವವರೊಂದಿಗೆ ಶಾಮೀಲಾದವರನ್ನು ಮಾತ್ರ ಉಲ್ಲೇಖಿಸಿ ಮಾತನಾಡಿದ್ದೆ ಎಂದು ಹೇಳಿದ್ದಾರೆ.
‘ಗೃಹಸಚಿವನಾಗಿ ನಾನು ಪೊಲೀಸರನ್ನು ಗೌರವಿಸುತ್ತೇನೆ. ಕರ್ನಾಟಕದ ಪೊಲೀಸ್ ವ್ಯವಸ್ಥೆ ಚೆನ್ನಾಗಿದೆ. ಮೊನ್ನೆಯಷ್ಟೇ ನನ್ನ ಕ್ಷೇತ್ರದಲ್ಲಿ ಅಕ್ರಮ ಗೋ ಸಾಗಾಟ ತಡೆಯಲು ಯತ್ನಿಸಿದವರ ಮೇಲೆ ಹಲ್ಲೆ ನಡೆದಿತ್ತು. ಆ ಹಿನ್ನೆಲೆಯಲ್ಲಿ ಕೆಲ ಪೊಲೀಸರನ್ನು ಉಲ್ಲೇಖಿಸಿ ಬೈದಿದ್ದೆ ಎಂದು ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.
Karnataka Home Minister Slams Police officers says they are like dogs eating corrupted money. After a meeting in Chikmagalur Home Minister talking to a higher officer on phone call went viral.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm