ಬ್ರೇಕಿಂಗ್ ನ್ಯೂಸ್
03-12-21 04:53 pm HK Desk news ಕರ್ನಾಟಕ
ಬೆಂಗಳೂರು, ಡಿ.3 : ‘ಪೊಲೀಸರು ಭ್ರಷ್ಟರಾಗಿದ್ದಾರೆ. ನಾಯಿಗಳಂತೆ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮದೇ ಇಲಾಖೆಯ ಆರಕ್ಷಕರನ್ನು ತರಾಟೆಗೆ ತೆಗೆದುಕೊಂಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಭೆ ನಡೆಸಿದ ವೇಳೆ ಗೃಹ ಸಚಿವರು ಉನ್ನತ ಪೊಲೀಸ್ ಅಧಿಕಾರಿಯೊಬ್ಬರ ಜತೆ ದೂರವಾಣಿ ಮೂಲಕ ಮಾತನಾಡುತ್ತಿದ್ದಾಗ ಈ ರೀತಿ ಬೈದಿದ್ದು ವಿಡಿಯೊದಲ್ಲಿ ದಾಖಲಾಗಿದೆ.
ಇಡೀ ಚಿಕ್ಕಮಗಳೂರು ಜಿಲ್ಲೆ ನಿಮ್ಮದು. ಪೊಲೀಸರಿಗೆ ಕೈತುಂಬಾ ಸಂಬಳ ನೀಡುತ್ತಿದ್ದೇವೆ. ಯಾರಿಗೂ ಕಡಿಮೆ ಮಾಡಿಲ್ಲ. ಆದ್ರೆ ಇವರಿಗೆಲ್ಲ ಸಂಬಳದಲ್ಲಿ ಬದುಕಬೇಕೆಂದಿಲ್ಲ. ಇಂಥವರೆಲ್ಲ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ. ಯೋಗ್ಯತೆ ಇಲ್ಲದಿದ್ದರೆ ಸಮವಸ್ತ್ರ ಬಿಚ್ಚಿಟ್ಟು ಎಲ್ಲಾದರೂ ಹೋಗಿ ಸಾಯಲಿ ಅಥವಾ ಮಣ್ಣು ಹೊರಲಿ. ಇವರನ್ನೆಲ್ಲ ನಂಬಿಕೊಂಡು ಜನ ಬದುಕುವುದು ಹೇಗೆ? ಇಲ್ಲಿ ತಲವಾರು ತೋರಿಸಿ ಬೆದರಿಸಿ ಕೊಟ್ಟಿಗೆಯಿಂದ ಜಾನುವಾರುಗಳನ್ನು ಬಿಚ್ಚಿ ತೆಗೆದುಕೊಂಡು ಹೋಗುತ್ತಾರೆ. ಎಲ್ಲ ಪೊಲೀಸರು ಹಾಳಾಗಿ ಹೋಗಿದ್ದಾರೆ’ ಎಂದು ಸಚಿವರು ಹೇಳುತ್ತಿದ್ದಾರೆ.
ವಿಡಿಯೋ ವೈರಲ್ ಆದ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಿದ ಸಚಿವರು, ‘ಎಲ್ಲ ಪೊಲೀಸರನ್ನು ಉದ್ದೇಶಿಸಿ ಆ ರೀತಿಯ ಹೇಳಿಕೆ ನೀಡಿಲ್ಲ. ಅಕ್ರಮ ಗೋಸಾಗಾಟ ಮಾಡುವವರೊಂದಿಗೆ ಶಾಮೀಲಾದವರನ್ನು ಮಾತ್ರ ಉಲ್ಲೇಖಿಸಿ ಮಾತನಾಡಿದ್ದೆ ಎಂದು ಹೇಳಿದ್ದಾರೆ.
‘ಗೃಹಸಚಿವನಾಗಿ ನಾನು ಪೊಲೀಸರನ್ನು ಗೌರವಿಸುತ್ತೇನೆ. ಕರ್ನಾಟಕದ ಪೊಲೀಸ್ ವ್ಯವಸ್ಥೆ ಚೆನ್ನಾಗಿದೆ. ಮೊನ್ನೆಯಷ್ಟೇ ನನ್ನ ಕ್ಷೇತ್ರದಲ್ಲಿ ಅಕ್ರಮ ಗೋ ಸಾಗಾಟ ತಡೆಯಲು ಯತ್ನಿಸಿದವರ ಮೇಲೆ ಹಲ್ಲೆ ನಡೆದಿತ್ತು. ಆ ಹಿನ್ನೆಲೆಯಲ್ಲಿ ಕೆಲ ಪೊಲೀಸರನ್ನು ಉಲ್ಲೇಖಿಸಿ ಬೈದಿದ್ದೆ ಎಂದು ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.
Karnataka Home Minister Slams Police officers says they are like dogs eating corrupted money. After a meeting in Chikmagalur Home Minister talking to a higher officer on phone call went viral.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm