ಬ್ರೇಕಿಂಗ್ ನ್ಯೂಸ್
03-12-21 04:53 pm HK Desk news ಕರ್ನಾಟಕ
ಬೆಂಗಳೂರು, ಡಿ.3 : ‘ಪೊಲೀಸರು ಭ್ರಷ್ಟರಾಗಿದ್ದಾರೆ. ನಾಯಿಗಳಂತೆ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮದೇ ಇಲಾಖೆಯ ಆರಕ್ಷಕರನ್ನು ತರಾಟೆಗೆ ತೆಗೆದುಕೊಂಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಭೆ ನಡೆಸಿದ ವೇಳೆ ಗೃಹ ಸಚಿವರು ಉನ್ನತ ಪೊಲೀಸ್ ಅಧಿಕಾರಿಯೊಬ್ಬರ ಜತೆ ದೂರವಾಣಿ ಮೂಲಕ ಮಾತನಾಡುತ್ತಿದ್ದಾಗ ಈ ರೀತಿ ಬೈದಿದ್ದು ವಿಡಿಯೊದಲ್ಲಿ ದಾಖಲಾಗಿದೆ.
ಇಡೀ ಚಿಕ್ಕಮಗಳೂರು ಜಿಲ್ಲೆ ನಿಮ್ಮದು. ಪೊಲೀಸರಿಗೆ ಕೈತುಂಬಾ ಸಂಬಳ ನೀಡುತ್ತಿದ್ದೇವೆ. ಯಾರಿಗೂ ಕಡಿಮೆ ಮಾಡಿಲ್ಲ. ಆದ್ರೆ ಇವರಿಗೆಲ್ಲ ಸಂಬಳದಲ್ಲಿ ಬದುಕಬೇಕೆಂದಿಲ್ಲ. ಇಂಥವರೆಲ್ಲ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ. ಯೋಗ್ಯತೆ ಇಲ್ಲದಿದ್ದರೆ ಸಮವಸ್ತ್ರ ಬಿಚ್ಚಿಟ್ಟು ಎಲ್ಲಾದರೂ ಹೋಗಿ ಸಾಯಲಿ ಅಥವಾ ಮಣ್ಣು ಹೊರಲಿ. ಇವರನ್ನೆಲ್ಲ ನಂಬಿಕೊಂಡು ಜನ ಬದುಕುವುದು ಹೇಗೆ? ಇಲ್ಲಿ ತಲವಾರು ತೋರಿಸಿ ಬೆದರಿಸಿ ಕೊಟ್ಟಿಗೆಯಿಂದ ಜಾನುವಾರುಗಳನ್ನು ಬಿಚ್ಚಿ ತೆಗೆದುಕೊಂಡು ಹೋಗುತ್ತಾರೆ. ಎಲ್ಲ ಪೊಲೀಸರು ಹಾಳಾಗಿ ಹೋಗಿದ್ದಾರೆ’ ಎಂದು ಸಚಿವರು ಹೇಳುತ್ತಿದ್ದಾರೆ.
ವಿಡಿಯೋ ವೈರಲ್ ಆದ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಿದ ಸಚಿವರು, ‘ಎಲ್ಲ ಪೊಲೀಸರನ್ನು ಉದ್ದೇಶಿಸಿ ಆ ರೀತಿಯ ಹೇಳಿಕೆ ನೀಡಿಲ್ಲ. ಅಕ್ರಮ ಗೋಸಾಗಾಟ ಮಾಡುವವರೊಂದಿಗೆ ಶಾಮೀಲಾದವರನ್ನು ಮಾತ್ರ ಉಲ್ಲೇಖಿಸಿ ಮಾತನಾಡಿದ್ದೆ ಎಂದು ಹೇಳಿದ್ದಾರೆ.
‘ಗೃಹಸಚಿವನಾಗಿ ನಾನು ಪೊಲೀಸರನ್ನು ಗೌರವಿಸುತ್ತೇನೆ. ಕರ್ನಾಟಕದ ಪೊಲೀಸ್ ವ್ಯವಸ್ಥೆ ಚೆನ್ನಾಗಿದೆ. ಮೊನ್ನೆಯಷ್ಟೇ ನನ್ನ ಕ್ಷೇತ್ರದಲ್ಲಿ ಅಕ್ರಮ ಗೋ ಸಾಗಾಟ ತಡೆಯಲು ಯತ್ನಿಸಿದವರ ಮೇಲೆ ಹಲ್ಲೆ ನಡೆದಿತ್ತು. ಆ ಹಿನ್ನೆಲೆಯಲ್ಲಿ ಕೆಲ ಪೊಲೀಸರನ್ನು ಉಲ್ಲೇಖಿಸಿ ಬೈದಿದ್ದೆ ಎಂದು ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.
Karnataka Home Minister Slams Police officers says they are like dogs eating corrupted money. After a meeting in Chikmagalur Home Minister talking to a higher officer on phone call went viral.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm