ಬ್ರೇಕಿಂಗ್ ನ್ಯೂಸ್
03-12-21 06:31 pm HK Desk news ಕರ್ನಾಟಕ
ಚಿಕ್ಕಬಳ್ಳಾಪುರ, ಡಿ.3: ಪ್ರಧಾನಿ ಮೋದಿಯನ್ನು ರಾಕ್ಷಸನಿಗೆ ಹೋಲಿಸಿ ಮಾಜಿ ಸ್ಪೀಕರ್, ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಚಿಂತಾಮಣಿಯಲ್ಲಿ ವಿಧಾನ ಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ರಮೇಶ್ ಕುಮಾರ್ ಉದ್ರೇಕದ ಭಾಷಣ ಮಾಡಿದ್ದಾರೆ. ತೆಲುಗಿನಲ್ಲಿ ಭಾಷೆಯಲ್ಲಿ ಆವೇಶದಿಂದ ಮಾತನಾಡಿದ ರಮೇಶ್ ಕುಮಾರ್, ಈ ದೇಶವನ್ನು ಒಬ್ಬ ರಾಕ್ಷಸನ ಕೈಗೆ ಕೊಟ್ಟಿದ್ದೇವೆ. ಮೋದಿಯ ಕೈಗೆ ಸಿಕ್ಕಿ ಭಾರತ ದೇಶ ನಲುಗಿ ಹೋಗಿದೆ ಎಂದು ಆರೋಪಿಸಿದ್ದಾರೆ.
ನೋಟ್ ಬ್ಯಾನ್ ಮಾಡಿ ಕೂಲಿ ಕಾರ್ಮಿಕರು, ಫುಟ್ ಪಾತ್ ಮೇಲೆ ಇರುವರು ಚಿಲ್ಲರೆ ಹಣ ಸಿಗದೆ ಸತ್ತುಹೋದರು. ಹಲವಾರು ಜನ ಬೀದಿಗೆ ಬಂದರು. ಜನರು ಹಸಿವಿನಿಂದ ಸಾಯುವ ಸ್ಥಿತಿಗೆ ಬಂದಿತ್ತು.
ಈ ಬಗ್ಗೆ ನಾವು ಪ್ರಶ್ನೆ ಮಾಡಿದರೆ ಟಿವಿಗಳ ಮುಂದೆ ಮೇಕಪ್ ಹಾಕಿಕೊಂಡು ಬಂದುಬಿಡ್ತಾರೆ. ಭಾರತ್ ಮಾತಾಕೀ ಅಂತ ಘೋಷಣೆ ಕೂಗಿ ಮರುಳು ಮಾಡ್ತಾರೆ. ಭಾರತವನ್ನು ಏನು ಇವರಿಗೆ ಗುತ್ತಿಗೆ ಕೊಟ್ಟಿದ್ದೇವಾ ಎಂದು ರಮೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.
ದೇಶದ ಎಲೆಕ್ಷನ್ ನಲ್ಲಿ ಗೆದ್ದು ಪ್ರಧಾನಿಯಾಗುವುದಕ್ಕೆ ಆಸ್ಪದ ಮಾಡಿಕೊಟ್ಟಿದ್ದು ಕಾಂಗ್ರೆಸ್. ಈ ದೇಶದಲ್ಲಿ ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯ, ಜನರಿಗೆ ನೆಮ್ಮದಿಯ ಬದುಕು ಕೊಟ್ಟಿದ್ದು ಕಾಂಗ್ರೆಸ್. ಆದರೆ ಇವರು ಕಾಂಗ್ರೆಸ್ ಏನೂ ಮಾಡೇ ಇಲ್ಲ ಎನ್ನುತ್ತಿದ್ದಾರೆ. ನನಗೆ ಎಷ್ಟು ಆಯಸ್ಸು ಇದೆಯೋ ಗೊತ್ತಿಲ್ಲ. ಆದರೆ ಇಲ್ಲಿಂದ ಕಣ್ಣು ಮುಚ್ಚುವ ಒಳಗೆ ಬಿಜೆಪಿ ಪೂರ್ತಿ ಸರ್ವನಾಶ ಆಗಬೇಕು ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ ಕುಮಾರ್ ಶಾಪ ಹಾಕಿದ್ದಾರೆ.
ಚಿಂತಾಮಣಿ ತಾಲೂಕಿನಲ್ಲಿ ತೆಲುಗು ಭಾಷಿಗರು ಹೆಚ್ಚಿರುವ ಕಾರಣ ಸ್ಥಳೀಯರಿಗೆ ಅರ್ಥ ಆಗುವಂತೆ ರಮೇಶ್ ಕುಮಾರ್ ಕನ್ನಡ ಬಿಟ್ಟು ತೆಲುಗಿನಲ್ಲಿಯೇ ಭಾಷಣ ಮಾಡಿದ್ದಾರೆ.
We have given our nation to India to Demon Modi slams Congress leader Ramesh Kumar. He spoke during a election campaign at Chintamani.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm