ಬ್ರೇಕಿಂಗ್ ನ್ಯೂಸ್
11-12-21 02:33 pm HK Desk news ಕರ್ನಾಟಕ
ದಾವಣಗೆರೆ, ಡಿ.11 : ಶಾಲೆಯಲ್ಲಿ ಹಿಂದಿ ಶಿಕ್ಷಕರು ಪಾಠ ಮಾಡುತ್ತಿದ್ದಾಗ ವಿದ್ಯಾರ್ಥಿಗಳು ಕುಚೇಷ್ಟೆ ಮಾಡಿ, ಅಸಭ್ಯವಾಗಿ ವರ್ತಿಸಿರುವ ವಿಡಿಯೋ ವೈರಲ್ ಆಗಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ನಲ್ಲೂರಿನ ಹೈಸ್ಕೂಲ್ ವಿದ್ಯಾರ್ಥಿಗಳು ಈ ರೀತಿ ಮಾಡಿದ್ದು ಆಕ್ರೋಶ ಕೇಳಿಬಂದಿದೆ.
ನಲ್ಲೂರಿನ ಸರ್ಕಾರಿ ಜೂನಿಯರ್ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ ಹಿಂದಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರಕಾಶ್ ಬೋಗಾರ್ಗೆ ಶಾಲೆಯ ಐದಾರು ವಿದ್ಯಾರ್ಥಿಗಳು ಕುಚೇಷ್ಟೆ ಮೂಲಕ ಹಲ್ಲೆ ಮಾಡಿದ್ದಾರೆ. ಶಿಕ್ಷಕರ ತಲೆಯ ಮೇಲೆ ಬಕೆಟ್ ಇಟ್ಟು ವಿಕೃತಿ ಪ್ರದರ್ಶಿಸಿ ಸಂತೋಷಪಟ್ಟಿದ್ದಾರೆ. ಇದನ್ನು ವಿಡಿಯೋ ಮಾಡಿ, ಮನಸ್ಸಿಗೆ ಬಂದಂತೆ ಅವಹೇಳನ ಮಾಡಿದ್ದಾರೆ. ಕಳೆದ ನಾಲ್ಕೈದು ದಿನಗಳ ಹಿಂದೆ ಮಾಡಿದ್ದ ವಿಡಿಯೋ ಈಗ ವೈರಲ್ ಆಗಿದ್ದು, ವಿದ್ಯಾರ್ಥಿಗಳ ನಡೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.
ಪ್ರಕಾಶ್ ಬೋಗಾರ್ ಅತ್ಯಂತ ಸರಳ, ಸೌಮ್ಯ ಸ್ವಭಾವದ ಶಿಕ್ಷಕರಾಗಿದ್ದು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ನಲ್ಲೂರಿಗೆ ಭೇಟಿ ನೀಡಿದ್ದಾರೆ. ಶಾಲೆಯ ಶಿಕ್ಷಕರು, ಪ್ರಾಂಶುಪಾಲರು, ಗ್ರಾಮಸ್ಥರ ಜೊತೆ ಚರ್ಚೆ ನಡೆಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಮಹಾಂತೇಶ್. ಆರ್. ಬೀಳಗಿ, ವಿದ್ಯಾರ್ಥಿಗಳು ಶಿಕ್ಷಕರಿಗೆ ಕುಚೇಷ್ಟೆ, ಅವಮಾನ ಮಾಡಿರುವ ವಿಡಿಯೋ ವೈರಲ್ ಆಗಿರುವುದು ಗಮನಕ್ಕೆ ಬಂದಿದೆ. ಯಾರೇ ತಪ್ಪು ಮಾಡಿದ್ದರೂ ಕ್ರಮ ತೆಗೆದುಕೊಳ್ಳುತ್ತೇವೆ. ಶಿಕ್ಷಕರ ಕಡೆಯಿಂದ ತಪ್ಪಿದ್ದರೂ ಸಹ ಕ್ರಮ ಆಗುತ್ತದೆ ಎಂದು ಹೇಳಿದ್ದಾರೆ.
I humbly request our honourable Chief Minister @BSBommai sir and honourable education minister @BCNagesh_bjp sir to take necessary action to regulate the atrocious behaviour of the students from a school in Davanagere district. pic.twitter.com/XDMKATeC9u
— Manvita Kamath (@manvitakamath) December 10, 2021
A video showing a group of students of a high school in Davanagere high school allegedly misbehaving and assaulting a teacher during classes had gone viral on social media and netizens demanded stringent action against the students.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm