ಬ್ರೇಕಿಂಗ್ ನ್ಯೂಸ್
11-12-21 08:14 pm HK Desk news ಕರ್ನಾಟಕ
ಮಂಡ್ಯ, ಡಿ.11 : ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿಯಿರುವ 15 ಸಾವಿರ ಶಿಕ್ಷಕ ಹುದ್ದೆಗಳಿಗೆ ಕೆಲವೇ ದಿನಗಳಲ್ಲಿ ನೇಮಕಾತಿ ಮಾಡುವ ಬಗ್ಗೆ ಆದೇಶ ಹೊರಡಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಅನೇಕ ವರ್ಷಗಳಿಂದ ರಾಜ್ಯದಲ್ಲಿ ಶಿಕ್ಷಕರ ಕೊರತೆ ಇದೆ. ಶಿಕ್ಷಕರ ಕೊರತೆ ನೀಗಿಸುವುದೇ ನನ್ನ ಅಜೆಂಡಾ. ಈ ಬಗ್ಗೆ ಕೆಲವೇ ದಿನಗಳಲ್ಲಿ ನೋಟಿಫಿಕೇಶನ್ ಮಾಡಲಿದ್ದು, ಖಾಲಿಯಿರುವ 15 ಸಾವಿರ ಹುದ್ದೆಗಳನ್ನು ಭರ್ತಿಗೊಳಿಸುತ್ತೇನೆ ಎಂದು ಸಚಿವ ನಾಗೇಶ್ ತಿಳಿಸಿದ್ದಾರೆ.
ಓಮಿಕ್ರಾನ್ ಭೀತಿ ಬಗ್ಗೆ ಕೇಳಿದ ಪ್ರಶ್ನೆಗೆ, ಯಾವುದೇ ಕಾರಣಕ್ಕೂ ಕೊರೊನಾಗೆ ಭಯಪಟ್ಟು ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಖಡಕ್ಕಾಗಿ ಹೇಳಿದ ಶಿಕ್ಷಣ ಸಚಿವರು, ಕೊರೊನಾ ರಾಜ್ಯದಲ್ಲಿ ಹೆಚ್ಚಾಗಿಲ್ಲ. ಗಂಭೀರ ಸ್ಥಿತಿಯೂ ಉಂಟಾಗಿಲ್ಲ. ರಾಜ್ಯದಲ್ಲಿ 1 ಕೋಟಿ 20 ಲಕ್ಷ ಮಕ್ಕಳು ಶಾಲೆ ಓದುತ್ತಿದ್ದು, ಈ ಪೈಕಿ 102 ಮಕ್ಕಳಿಗಷ್ಟೇ ಸೋಂಕು ಕಂಡುಬಂದಿದೆ. ಇದರಲ್ಲಿ ಪಾಸಿಟಿವ್ ಬಂದಿರುವುದು ವಸತಿ ಶಾಲೆಗಳಲ್ಲಿ ಮಾತ್ರ. ಯಾವುದೇ ಓಪನ್ ಶಾಲೆಗಳಲ್ಲಿ ಮಕ್ಕಳಿಗೆ ಪಾಸಿಟಿವ್ ಬಂದಿಲ್ಲ ಎಂದಿದ್ದಾರೆ.

ಮಕ್ಕಳಿಗೆ ಕೊರೊನಾ ತೊಂದರೆ ಮಾಡಿಲ್ಲ
ಇದಲ್ಲದೆ, ಯಾವುದೇ ಜಿಲ್ಲೆಯಲ್ಲೂ ಮಕ್ಕಳಿಗೆ ಸೋಂಕು ಆಗಿರುವ ಸಂಖ್ಯೆ ಡಬಲ್ ಡಿಜಿಟ್ ಆಗಿಲ್ಲ. ಎಲ್ಲೋ ಒಂದಿಬ್ಬರಿಗೆ ಸೋಂಕು ಬಂದಿದೆ ಅಷ್ಟೇ. ಪಾಸಿಟಿವ್ ಆದ ಮಕ್ಕಳು ಕೂಡ ಆರೋಗ್ಯದಿಂದಿದ್ದಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಶಾಲೆಗಳನ್ನು ಮುಚ್ಚುವ ಪ್ರಸ್ತಾಪ ಇಲ್ಲ. ಮಧ್ಯ ವಾರ್ಷಿಕ ಪರೀಕ್ಷೆಗಳು ಚೆನ್ನಾಗಿ ನಡೆಯುತ್ತಿದೆ, ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಲೆ ನಡೆಸುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.
ಸರಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಇದರೊಂದಿಗೆ ಶಾಲಾ ಕೊಠಡಿ ಕೊರತೆ ಇರುವ ಕಡೆ ಸಮಸ್ಯೆ ನಿವಾರಿಸುವ ಕೆಲಸ ಮಾಡಲಾಗುವುದು. ಯಾವುದೇ ಶಾಲೆಯನ್ನೂ ಮುಚ್ಚದ ರೀತಿ ನೋಡಿಕೊಳ್ಳುತ್ತೇವೆ ಎಂದು ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಮೊಟ್ಟೆ ತಿನ್ನಲು ಒತ್ತಡ ಹೇರಿಲ್ಲ
ಸರಕಾರಿ ಶಾಲೆಗಳಲ್ಲಿ ಕೆಲವು ಕಡೆ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವುದನ್ನು ನೋಡಿದ್ದೇವೆ. ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎಂದು ಕೇಂದ್ರ ಸರಕಾರ ಮೊಟ್ಟೆ, ಬಾಳೆಹಣ್ಣು ಕೊಡಲು ಯೋಜನೆ ಮಾಡಿದೆ. ಮಕ್ಕಳಿಗೆ ಪ್ರೋಟೀನ್ ನೀಡುವುದಕ್ಕಾಗಿ ಮೊಟ್ಟೆ ನೀಡಲು ತಜ್ಞರು ಸಲಹೆ ನೀಡಿದ್ದಾರೆ. ಬಾಳೆಹಣ್ಣನ್ನೂ ನೀಡುತ್ತಿದ್ದೇವೆ. ಯಾವುದೇ ಮಕ್ಕಳಿಗೂ ಮೊಟ್ಟೆ ತಿನ್ನಲು ನಾವು ಒತ್ತಡ ಹೇರಿಲ್ಲ. ತಜ್ಞರು ಒಪ್ಪಿದರೆ ಮುಂದಿನ ದಿನಗಳಲ್ಲಿ ಯೋಜನೆ ಜಾರಿ ಮಾಡುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.
Karnataka government decides to recruit 15000 teachers for the academic years 2021 and 2022 states education minister Nagesh at Mandya.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm