ಬ್ರೇಕಿಂಗ್ ನ್ಯೂಸ್
14-12-21 01:55 pm HK Desk news ಕರ್ನಾಟಕ
ಬೆಳಗಾವಿ, ಡಿ.14 : ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಬಿಜೆಪಿಗೇ ಸಡ್ಡು ಹೊಡೆದಿದ್ದಾರೆ. ತನ್ನ ತಮ್ಮನನ್ನು ಪಕ್ಷೇತರ ನಿಲ್ಲಿಸಿ, ಬಿಜೆಪಿ ಅಭ್ಯರ್ಥಿಯನ್ನೇ ಸೋಲಿಸಿದ್ದು, ತಮ್ಮನನ್ನು ಗೆಲ್ಲಿಸಿಕೊಂಡಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಅಭ್ಯರ್ಥಿಯೂ ಗೆಲುವು ಕಂಡಿದ್ದಾರೆ. ಆಜಡಳಿತಾರೂಢ ಬಿಜೆಪಿಗೆ ಇದರಿಂದ ತೀವ್ರ ಮುಖಭಂಗವಾಗಿದೆ.
ಬೆಳಗಾವಿ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಬ್ಬರೂ ಗೆಲ್ಲುವ ಅವಕಾಶ ಇತ್ತು. ತನ್ನ ತಮ್ಮನಿಗೆ ಬಿಜೆಪಿ ಟಿಕೆಟ್ ನೀಡುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದರು. ಆದರೆ ಬಿಜೆಪಿಯಿಂದ ಮಹಾಂತೇಶ ಕವಟಗಿಮಠ ಅವರಿಗೆ ಟಿಕೆಟ್ ನೀಡಲಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ತನ್ನ ರಾಜಕೀಯ ವೈರಿ ಲಕ್ಷ್ಮೀ ಹೆಬ್ಬಾಳಕರ್ ಬಣದ ವ್ಯಕ್ತಿಯಾಗಿದ್ದರಿಂದ ಕಾಂಗ್ರೆಸ್ ಸೋಲಿಸುವುದೇ ತನ್ನ ಗುರಿಯೆಂದು ರಮೇಶ್ ಜಾರಕಿಹೊಳಿ ತೊಡೆ ತಟ್ಟಿದ್ದರು.



ಕೊನೆ ಕ್ಷಣದಲ್ಲಿ ಲಖನ್ ಜಾರಕಿಹೊಳಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಿಸಿ, ಬಿಜೆಪಿ ಅಭ್ಯರ್ಥಿ ಪರವಾಗಿಯೇ ರಮೇಶ್ ಜಾರಕಿಹೊಳಿ ಪ್ರಚಾರ ಕಾರ್ಯವನ್ನೂ ಕೈಗೊಂಡಿದ್ದರು. ಆದರೆ, ಫಲಿತಾಂಶದಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಅತಿ ಹೆಚ್ಚು ಮತ ಪಡೆದ ಕಾಂಗ್ರೆಸ್ ಅಭ್ಯರ್ಥಿಯನ್ನು ಮೊದಲಿಗೆ ವಿಜಯಿ ಎಂದು ಘೋಷಣೆ ಮಾಡಿದರೆ, ಎರಡನೇ ಅತಿ ಹೆಚ್ಚು ಮತ ಗಳಿಸಿದ ಲಖನ್ ಜಾರಕಿಹೊಳಿ ಅವರನ್ನೂ ವಿಜಯಿ ಎಂದು ಘೋಷಣೆ ಮಾಡಲಾಗಿದೆ. ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲನುಭವಿಸಿದ್ದು ಆಡಳಿತಾರೂಢರಿಗೆ ತೀವ್ರ ಮುಖಭಂಗ ಆಗಿದೆ.
Belagavi Ramesh Jarkiholi makes major victory over BJP Candidate for MLC Elections. It has been a great victory over Bjp by Ramesh Jarkiholi in Belagavi, Karnataka.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm