ಬ್ರೇಕಿಂಗ್ ನ್ಯೂಸ್
16-12-21 02:45 pm HK Desk news ಕರ್ನಾಟಕ
Photo credits : Headline Karnataka
ಬಾಗಲಕೋಟೆ, ಡಿ.16 : ಪ್ರಶಸ್ತಿಗಳ ರಾಜ, ಬೆಟ್ಟದ ಹುಲಿ ಎಂದೇ ಹೆಸರಾಗಿದ್ದ ಅಭಿಮಾನಿಗಳ ಪಾಲಿನ ನೆಚ್ಚಿನ ಟಗರು ಅನಾರೋಗ್ಯದಿಂದ ಸಾವು ಕಂಡಿದ್ದು ನೂರಾರು ಜನರು ಸೇರಿ ಶವಯಾತ್ರೆ ಮೆರವಣಿಗೆ ನಡೆಸಿದ್ದಾರೆ.
ಆಕರ್ಷಕವಾಗಿದ್ದ ಟಗರನ್ನು ಐದು ಲಕ್ಷ ರೂ. ಕೊಟ್ಟು ಖರೀದಿಸಲಾಗಿತ್ತು. ಮಾಲೀಕ ಅದನ್ನು ಖರೀದಿಸಿ ಮನೆ ಮಗನಂತೆ ನೋಡಿಕೊಂಡಿದ್ದಲ್ಲದೆ ವಿವಿಧ ಕಡೆಗಳಲ್ಲಿ ಸ್ಪರ್ಧೆಗೆ ಕೊಂಡೊಯ್ದು ಜನಮೆಚ್ಚುಗೆ ಪಡೆದಿದ್ದ. ಅನಾರೋಗ್ಯದಿಂದ ಟಗರು ದಿಢೀರ್ ಆಗಿ ಸತ್ತಿದ್ದಕ್ಕೆ ಮಾಲೀಕ ಪಾಂಡು ಗೋಳಾಡಿ ಅತ್ತಿದ್ದಾನೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಕಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಪಾಂಡು ಟಗರನ್ನು 7 ವರ್ಷಗಳ ಹಿಂದೆ 5 ಲಕ್ಷ ರೂ. ಕೊಟ್ಟು ಖರೀದಿಸಿದ್ದ. ಪ್ರತಿ ಬಾರಿ ಟಗರಿನ ಕಾಳಗದಲ್ಲಿ ಈ ಬೆಟ್ಟದ ಹುಲಿಯದ್ದೆ ದರ್ಬಾರ್ ಆಗಿತ್ತು. ಜನರು ಪಂಥ ಕಟ್ಟಿ ಗೆದ್ದು ಈ ಟಗರಿನ ಅಭಿಮಾನಿಗಳಾಗಿದ್ದರು. ಮೈಸೂರು ದಸರಾ ಸೇರಿ ರಾಜ್ಯ ಮತ್ತು ಹೊರ ರಾಜ್ಯಗಳ ಟಗರಿನ ಕಾಳಗದಲ್ಲಿ ಬೆಟ್ಟದ ಹುಲಿ ಭಾರೀ ಹೆಸರು ಮಾಡಿತ್ತು.
ಈವರೆಗೆ 80 ಕ್ಕೂ ಅಧಿಕ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದ ಟಗರು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತನ್ನದೇ ಅಭಿಮಾನಿಗಳನ್ನು ಹೊಂದಿತ್ತು. ಟಗರು ಸತ್ತ ಸುದ್ದಿ ಕೇಳಿ ಕಲಹಳ್ಳಿಗೆ ಬಂದ ನೂರಾರು ಅಭಿಮಾನಿಗಳು ಆಗಮಿಸಿದ್ದು ಕಣ್ಣೀರಿಟ್ಟಿದ್ದಾರೆ.
ಗ್ರಾಮದಲ್ಲಿ ಮೃತಪಟ್ಟ ಟಗರನ್ನು ಶೃಂಗರಿಸಿ ಟ್ರ್ಯಾಕ್ಟರ್ ನಲ್ಲಿ ಮೆರವಣಿಗೆ ಮಾಡಿದ್ದಾರೆ. ಟಗರಿಗೆ ಭಂಡಾರ ಬಳಿದು ದುಃಖದಿಂದ ಮೆರವಣಿಗೆ ನಡೆಸಿದ್ದು ಅಂತಿಮ ಸಂಸ್ಕಾರದಲ್ಲಿ ನೂರಾರು ಜನರು ಭಾಗಿಯಾಗಿದ್ದಾರೆ.
ಗದಗ, ಧಾರವಾಡ, ಮೈಸೂರು, ಗಜೇಂದ್ರಗಡ ಸೇರಿ ವಿವಿಧೆಡೆಯಿಂದ ಟಗರಿನ ಅಂತಿಮ ದರ್ಶನಕ್ಕೆ ಟಗರು ಅಭಿಮಾನಿಗಳು ಬಂದಿದ್ದರು. ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ಅಭಿಮಾನಿ ಯುವಕರು ಸೇರಿ ಟಗರಿನ ಕಟೌಟ್ ಕಟ್ಟಿ, ದೀಪ ಬೆಳಗಿ ಶ್ರದ್ದಾಂಜಲಿ ಸಲ್ಲಿಸಿ ಅಭಿಮಾನ ಮೆರೆದಿದ್ದಾರೆ.
Bagalkote Five lakh worth Ram dies fans in tears last rites performed with great honour. Pictures of this has gone viral on social media
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm