ಬ್ರೇಕಿಂಗ್ ನ್ಯೂಸ್
17-12-21 11:11 pm HK Desk news ಕರ್ನಾಟಕ
ಬೆಳಗಾವಿ, ಡಿ.17 : ರಾಜ್ಯ ಸರಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಮುಂದಾಗಿರುವುದನ್ನು ವಿರೋಧಿಸಿ ಭಾರತೀಯ ಕ್ರಿಸ್ತ ಒಕ್ಕೂಟದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಮುಖಂಡರು ಪ್ರಶಾಂತ ಜತ್ತನ್ನ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಭಟನಾ ನಿರತ ಕ್ರಿಶ್ಚಿಯನ್ನರ ಒಕ್ಕೂಟದ ಪ್ರತಿನಿಧಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ, ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಸರಕಾರ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಜನರ ಗಮನ ಬೇರೆಡೆ ಸೆಳೆಯುವುದಕ್ಕಾಗಿ ಭಾವನಾತ್ಮಕ ವಿಚಾರಗಳನ್ನು ಮುನ್ನೆಲೆಗೆ ತರುತ್ತಿದೆ. ಲವ್ ಜಿಹಾದ್, ಮತಾಂತರ ವಿಚಾರಗಳನ್ನು ಮುಂದಿಟ್ಟು ಹಿಡನ್ ಅಜೆಂಡಾವನ್ನು ಸಾಧಿಸುತ್ತಿದೆ. ಆದರೆ ಯಾವುದೇ ಕಾರಣಕ್ಕೂ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲು ಕಾಂಗ್ರೆಸ್ ಬಿಡುವುದಿಲ್ಲ ಎಂದು ಹೇಳಿದ್ದಾರೆ.



ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನೂರು ಶತ ಅಧಿಕಾರಕ್ಕೆ ಬರಲಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಇದರ ಮುನ್ಸೂಚನೆ ಸಿಕ್ಕಿದೆ. ಒಟ್ಟು 94 ಸಾವಿರ ಮತಗಳಲ್ಲಿ 44 ಸಾವಿರ ಮತ ಕಾಂಗ್ರೆಸ್ಗೆ ಲಭಿಸಿದೆ. ಬಿಜೆಪಿಗೆ ಸಿಕ್ಕಿದ್ದು 37 ಸಾವಿರ. ಜೆಡಿಎಸ್ ಹತ್ತು ಸಾವಿರ ಮತ ಗಳಿಸಿದೆ. ಇದು ಜನರ ಭಾವನೆ ಕಾಂಗ್ರೆಸ್ ಪರವಾಗಿರುವುದನ್ನು ಸೂಚಿಸಿದೆ ಎಂದರು.


ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿ ಕಸರತ್ತು ನಡೆಸುತ್ತಿದೆ. ಈಗ ಮತಾಂತರ ನಿಷೇಧ ಕಾಯ್ದೆಯ ಅಗತ್ಯ ಇದೆಯೇ.. ಬಲವಂತದ ಮತಾಂತರ ನಡೆಯುತ್ತಿದ್ದರೆ ಪೊಲೀಸ್ ಕೇಸು ದಾಖಲಿಸಿ, ಅರೆಸ್ಟ್ ಮಾಡಬಹುದು. ಕಾನೂನಿನಲ್ಲಿ ಅವಕಾಶ ಇದೆ ಎಂದ ಸಿದ್ದರಾಮಯ್ಯ, ಗೂಳಿಹಟ್ಟಿ ಶೇಖರ್ ಮತಾಂತರ ವಿಚಾರದ ಬಗ್ಗೆ ಹೇಳಿದ್ದಾರೆ. ಆ ಬಗ್ಗೆ ಪೊಲೀಸ್ ದೂರು ಯಾಕೆ ಕೊಟ್ಟಿಲ್ಲ. ಅವರ ತಾಯಿಯೂ ದೂರು ಕೊಟ್ಟಿಲ್ಲ ಯಾಕೆ ಎಂದು ಪ್ರಶ್ನೆ ಮಾಡಿದರು.


ನಾವು ಅಧಿಕಾರಕ್ಕೆ ಬಂದಲ್ಲಿ ಈಗ ಮಸೂದೆ ಪಾಸ್ ಮಾಡಿದರೂ ಕೂಡಲೇ ಅದನ್ನು ರದ್ದು ಪಡಿಸುತ್ತೇವೆ ಎಂದು ಹೇಳಿದ ಸಿದ್ದರಾಮಯ್ಯ, ಅದಕ್ಕೆ ಅವಕಾಶ ಬರುವುದಿಲ್ಲ. ಕಾನೂನು ಆಗಲು ಅವಕಾಶ ಕೊಡುವುದಿಲ್ಲ ಎಂದು ಹೇಳಿದರು.
ಕ್ರಿಶ್ಚಿಯನ್ ಒಕ್ಕೂಟದ ಪ್ರತಿನಿಧಿಗಳು ಪ್ರತಿಭಟನೆ ಬಳಿಕ ಈ ಕುರಿತ ಮನವಿಯನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಮೂಲಕ ಸರಕಾರಕ್ಕೆ ಸಲ್ಲಿಸಿದ್ದಾರೆ.
Expressing opposition to the proposed anti-conversion Bill by the State Government the Christian community under the leadership of Prashanth Jathanna State president of Bharathiya Christa Okkuta and in association with UFC Belagavi staged a hunger strike during the winter session in front of Suvarna Soudha, Belagavi on December 17.
02-02-26 09:52 pm
HK News Desk
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm