ಬ್ರೇಕಿಂಗ್ ನ್ಯೂಸ್
18-12-21 03:16 pm HK Desk news ಕರ್ನಾಟಕ
ಬೆಳಗಾವಿ, ಡಿ.18 : ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅತಿರೇಕದ ಘಟನೆಯನ್ನು ಖಂಡಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ನಿರ್ದಾಕ್ಷಿಣ್ಯ ಕ್ರಮಕ್ಕೆ ಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ.
ಆ ಪುಂಡರನ್ನು ಸೆದೆ ಬಡಿಯುತ್ತೇವೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಗೃಹ ಸಚಿವರಿಗೆ ಸೂಚಿಸಿದ್ದೇನೆ. ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಈ ಸಂಬಂಧ ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ.
ಕಲ್ಲು ತೂರಾಟ ಮಾಡುವುದು, ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾಗೂ ಸರ್ಕಾರಿ ವಾಹನಗಳಿಗೆ ಹಾನಿ ಉಂಟುಮಾಡುವುದು ಕಾನೂನು ಬಾಹಿರ. ಇಂಥ ಘಟನೆ ಪುನಃ ಜರುಗದಂತೆ ಇನ್ನಷ್ಟು ಕಠಿಣ ಹಾಗೂ ದೀರ್ಘಾವಧಿ ಕ್ರಮಗಳನ್ನು ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಈ ಪ್ರವೃತ್ತಿ ಸರಿಯಲ್ಲ.
ರಾಷ್ಟ್ರಭಕ್ತರ ಪ್ರತಿಮೆ ಭಗ್ನಗೊಳಿಸುವುದು ದೇಶಭಕ್ತರ ಕೆಲಸವಲ್ಲ. ದೇಶಭಕ್ತರು ಎಲ್ಲಾ ಸಮುದಾಯಕ್ಕೆ ಸೇರಿದವರು. ದೇಶಕ್ಕಾಗಿ ತ್ಯಾಗ ಮಾಡಿದವರು. ಪ್ರತಿಮೆ ಸ್ಥಾಪಿಸುವುದು ಅವರನ್ನು ಗೌರವಿಸಬೇಕೆಂದೇ ವಿನಃ ಅವರ ಮುಖಾಂತರ ಸಮಾಜದಲ್ಲಿ ಕ್ಷೋಭೆ ಉಂಟು ಮಾಡುವುದಲ್ಲ. ಈ ರೀತಿಯ ವರ್ತನೆ ಎಳ್ಳಷ್ಟೂ ಸರಿಯಲ್ಲ. ಕೆಲವು ಪುಂಡರು ಈ ರೀತಿ ಮಾಡುತ್ತಿದ್ದು ಅವರನ್ನು ಸದೆ ಬಡಿಯಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.
ಬೆಳಗಾವಿ ಅಧಿವೇಶನ ಸಂದರ್ಭದಲ್ಲಿಯೇ ಈ ಕೃತ್ಯ ನಡೆದಿರುವುದರಿಂದ ಈ ರೀತಿಯ ಘಟನೆ ಉದ್ದೇಶಪೂರ್ವಕವೇ, ಅಚಾನಕ್ಕಾಗಿ ನಡೆದಿತ್ತೇ ಎನ್ನುವ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
Chief Minister Basavaraj Bommai has strongly condemned vandalism by miscreants at Belagavi and assured stringent action against the persons responsible at the earliest. The statue of Sangolli Rayanna installed at Kanakdas Colony in the Angol suburb was reportedly vandalized by miscreants in the early hours of Saturday.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm