ಬ್ರೇಕಿಂಗ್ ನ್ಯೂಸ್
18-12-21 03:16 pm HK Desk news ಕರ್ನಾಟಕ
ಬೆಳಗಾವಿ, ಡಿ.18 : ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅತಿರೇಕದ ಘಟನೆಯನ್ನು ಖಂಡಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ನಿರ್ದಾಕ್ಷಿಣ್ಯ ಕ್ರಮಕ್ಕೆ ಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ.
ಆ ಪುಂಡರನ್ನು ಸೆದೆ ಬಡಿಯುತ್ತೇವೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಗೃಹ ಸಚಿವರಿಗೆ ಸೂಚಿಸಿದ್ದೇನೆ. ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಈ ಸಂಬಂಧ ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ.
ಕಲ್ಲು ತೂರಾಟ ಮಾಡುವುದು, ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾಗೂ ಸರ್ಕಾರಿ ವಾಹನಗಳಿಗೆ ಹಾನಿ ಉಂಟುಮಾಡುವುದು ಕಾನೂನು ಬಾಹಿರ. ಇಂಥ ಘಟನೆ ಪುನಃ ಜರುಗದಂತೆ ಇನ್ನಷ್ಟು ಕಠಿಣ ಹಾಗೂ ದೀರ್ಘಾವಧಿ ಕ್ರಮಗಳನ್ನು ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಈ ಪ್ರವೃತ್ತಿ ಸರಿಯಲ್ಲ.
ರಾಷ್ಟ್ರಭಕ್ತರ ಪ್ರತಿಮೆ ಭಗ್ನಗೊಳಿಸುವುದು ದೇಶಭಕ್ತರ ಕೆಲಸವಲ್ಲ. ದೇಶಭಕ್ತರು ಎಲ್ಲಾ ಸಮುದಾಯಕ್ಕೆ ಸೇರಿದವರು. ದೇಶಕ್ಕಾಗಿ ತ್ಯಾಗ ಮಾಡಿದವರು. ಪ್ರತಿಮೆ ಸ್ಥಾಪಿಸುವುದು ಅವರನ್ನು ಗೌರವಿಸಬೇಕೆಂದೇ ವಿನಃ ಅವರ ಮುಖಾಂತರ ಸಮಾಜದಲ್ಲಿ ಕ್ಷೋಭೆ ಉಂಟು ಮಾಡುವುದಲ್ಲ. ಈ ರೀತಿಯ ವರ್ತನೆ ಎಳ್ಳಷ್ಟೂ ಸರಿಯಲ್ಲ. ಕೆಲವು ಪುಂಡರು ಈ ರೀತಿ ಮಾಡುತ್ತಿದ್ದು ಅವರನ್ನು ಸದೆ ಬಡಿಯಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.
ಬೆಳಗಾವಿ ಅಧಿವೇಶನ ಸಂದರ್ಭದಲ್ಲಿಯೇ ಈ ಕೃತ್ಯ ನಡೆದಿರುವುದರಿಂದ ಈ ರೀತಿಯ ಘಟನೆ ಉದ್ದೇಶಪೂರ್ವಕವೇ, ಅಚಾನಕ್ಕಾಗಿ ನಡೆದಿತ್ತೇ ಎನ್ನುವ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
Chief Minister Basavaraj Bommai has strongly condemned vandalism by miscreants at Belagavi and assured stringent action against the persons responsible at the earliest. The statue of Sangolli Rayanna installed at Kanakdas Colony in the Angol suburb was reportedly vandalized by miscreants in the early hours of Saturday.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm